ರೈತರು ತಮ್ಮ ಕೃಷಿ ಜಮೀನಲ್ಲಿ ಕೂಳೆ ಸುಡುತ್ತಿರುವ ಪ್ರಮಾಣವು ಗಮನಾರ್ಹ ಮಟ್ಟದಲ್ಲಿಯೇ ಇದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರು ಇದ್ದ ವಿಭಾಗೀಯ ಪೀಠವು, ಮಾಲಿನ್ಯವನ್ನು ತಗ್ಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.