ಇಲ್ಲಿನ ಮುರ್ದಾಂಡದಲ್ಲಿನ ಸಿಆರ್ಪಿಎಫ್ ಶಿಬಿರದ ಬಳಿ ಶನಿವಾರ ಸಂಜೆ ವಾಹನದಲ್ಲಿ ಆರು ಯೋಧರು ಹೊರಟಿದ್ದರು. ಈ ವೇಳೆ ನೆಲಬಾಂಬ್ ಸ್ಫೋಟಗೊಂಡು ನಾಲ್ವರು ಮೃತರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ರಮಣ್ ಸಿಂಗ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ದಿನವೇ ನಕ್ಸಲರು ಈ ಕೃತ್ಯ ಎಸಗಿದ್ದಾರೆ.