<p><strong>ಛಾಯ್ಬಾಸ</strong>: ಜಾರ್ಖಂಡ್ನ ವೆಸ್ಟ್ ಸಿಂಗಭುಮ್ ಜಿಲ್ಲೆಯ ಸರಂದಾ ಅರಣ್ಯ ಪ್ರದೇಶದಲ್ಲಿ ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಸ್ಫೋಟಗೊಂಡು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಇನ್ಸ್ಪೆಕ್ಟರ್ ಹಾಗೂ ಯೋಧ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.</p><p>ರಾಜ್ಯದಲ್ಲಿ 'ಪ್ರತಿರೋಧ ಸಪ್ತಾಹ' ನಡೆಸುತ್ತಿರುವ ಸಿಪಿಐ (ಮಾವೋವಾದಿ) ಸಂಘಟನೆ, ಭದ್ರತಾ ಪಡೆಗಳನ್ನು ಗುರಿಯಾಗಿಸಿ ಐಇಡಿಗಳನ್ನು ಇರಿಸಿರಬಹುದು ಎಂದು ಶಂಕಿಸಲಾಗಿದೆ.</p><p>ಜರೈಕೆಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬದುದಿಹ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಸಿಆರ್ಪಿಎಫ್ ಇನ್ಸ್ಪೆಕ್ಟರ್ ಹಾಗೂ ಯೋಧ ಗಾಯಗೊಂಡಿದ್ದಾರೆ ಎಂದು ಕೊಲ್ಹಾನ್ ವಿಭಾಗದ ಡಿಐಜಿ ಅನುರಂಜನ್ ಕಿಸ್ಪೊಟಾ ಪ್ರತಿಕ್ರಿಯಿಸಿದ್ದಾರೆ.</p><p>ಗಾಯಾಳು ಇನ್ಸ್ಪೆಕ್ಟರ್ ಅವರನ್ನು ನೆರೆ ರಾಜ್ಯ ಒಡಿಶಾದ ರೌರ್ಕೆಲಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧನನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.</p><p>ಅಕ್ಟೋಬರ್ 8ರಂದು 'ಪ್ರತಿರೋಧ ಸಪ್ತಾಹ' ಆರಂಭಿಸಿರುವ ಸಿಪಿಐ (ಮಾವೋವಾದಿ), ಅಕ್ಟೋಬರ್ 15ರಂದು ಬಂದ್ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜ್ಯದಾದ್ಯಂತ ಭದ್ರತೆ ಬಿಗಿಗೊಳಿಸಿದ್ದಾರೆ.</p><p>ಭದ್ರತೆ ಹೆಚ್ಚಿಸುವ ಸಲುವಾಗಿ ಸಿಆರ್ಪಿಎಫ್ನ 12 ಬೆಟಾಲಿಯನ್ಗಳು, ಜಾರ್ಖಂಡ್ ಸಶಸ್ತ್ರ ಪೊಲೀಸ್ (ಜೆಎಪಿ) ಪಡೆಯ 20 ತಂಡಗಳು ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ಅನ್ನು ನಿಯೋಜಿಸಲಾಗಿದೆ ಎಂದು ಕಾರ್ಯಾಚರಣೆ ವಿಭಾಗದ ಐಜಿ ಮಿಕಾಯಿಲ್ ರಾಜ್ ಗುರುವಾರ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛಾಯ್ಬಾಸ</strong>: ಜಾರ್ಖಂಡ್ನ ವೆಸ್ಟ್ ಸಿಂಗಭುಮ್ ಜಿಲ್ಲೆಯ ಸರಂದಾ ಅರಣ್ಯ ಪ್ರದೇಶದಲ್ಲಿ ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಸ್ಫೋಟಗೊಂಡು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಇನ್ಸ್ಪೆಕ್ಟರ್ ಹಾಗೂ ಯೋಧ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.</p><p>ರಾಜ್ಯದಲ್ಲಿ 'ಪ್ರತಿರೋಧ ಸಪ್ತಾಹ' ನಡೆಸುತ್ತಿರುವ ಸಿಪಿಐ (ಮಾವೋವಾದಿ) ಸಂಘಟನೆ, ಭದ್ರತಾ ಪಡೆಗಳನ್ನು ಗುರಿಯಾಗಿಸಿ ಐಇಡಿಗಳನ್ನು ಇರಿಸಿರಬಹುದು ಎಂದು ಶಂಕಿಸಲಾಗಿದೆ.</p><p>ಜರೈಕೆಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬದುದಿಹ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಸಿಆರ್ಪಿಎಫ್ ಇನ್ಸ್ಪೆಕ್ಟರ್ ಹಾಗೂ ಯೋಧ ಗಾಯಗೊಂಡಿದ್ದಾರೆ ಎಂದು ಕೊಲ್ಹಾನ್ ವಿಭಾಗದ ಡಿಐಜಿ ಅನುರಂಜನ್ ಕಿಸ್ಪೊಟಾ ಪ್ರತಿಕ್ರಿಯಿಸಿದ್ದಾರೆ.</p><p>ಗಾಯಾಳು ಇನ್ಸ್ಪೆಕ್ಟರ್ ಅವರನ್ನು ನೆರೆ ರಾಜ್ಯ ಒಡಿಶಾದ ರೌರ್ಕೆಲಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧನನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.</p><p>ಅಕ್ಟೋಬರ್ 8ರಂದು 'ಪ್ರತಿರೋಧ ಸಪ್ತಾಹ' ಆರಂಭಿಸಿರುವ ಸಿಪಿಐ (ಮಾವೋವಾದಿ), ಅಕ್ಟೋಬರ್ 15ರಂದು ಬಂದ್ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜ್ಯದಾದ್ಯಂತ ಭದ್ರತೆ ಬಿಗಿಗೊಳಿಸಿದ್ದಾರೆ.</p><p>ಭದ್ರತೆ ಹೆಚ್ಚಿಸುವ ಸಲುವಾಗಿ ಸಿಆರ್ಪಿಎಫ್ನ 12 ಬೆಟಾಲಿಯನ್ಗಳು, ಜಾರ್ಖಂಡ್ ಸಶಸ್ತ್ರ ಪೊಲೀಸ್ (ಜೆಎಪಿ) ಪಡೆಯ 20 ತಂಡಗಳು ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ಅನ್ನು ನಿಯೋಜಿಸಲಾಗಿದೆ ಎಂದು ಕಾರ್ಯಾಚರಣೆ ವಿಭಾಗದ ಐಜಿ ಮಿಕಾಯಿಲ್ ರಾಜ್ ಗುರುವಾರ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>