ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಿಬ್ಬಂದಿಯೊಬ್ಬರು ಸಾವಿಗೀಡಾಗಿದ್ದಾರೆ.
ಹೈದರ್ಪೊರಾ ಬೈಪಾಸ್ ಪ್ರದೇಶದಲ್ಲಿ ಸಿಆರ್ಪಿಎಫ್ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಿಆರ್ಪಿಎಫ್ನ ಒಟ್ಟು 13 ಸಿಬ್ಬಂದಿ ಗಾಯಗೊಂಡಿದ್ದರು.
ಗಾಯಗೊಂಡಿದ್ದ ಎಲ್ಲ ಸಿಬ್ಬಂದಿಯನ್ನೂ ಬಿಎಸ್ಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಕಾನ್ಸ್ಟೆಬಲ್ ಎಂ.ಎನ್.ಮಣಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.