<p><strong>ನವದೆಹಲಿ: </strong>ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ‘ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ’ ಎಂದು ಟೀಕಿಸಿದ್ದಾರೆ.</p>.<p>ಶುಕ್ರವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, ‘ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಉದ್ದೇಶಪೂರ್ವಕವಾಗಿಯೇ ಸಂಸತ್ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ’ ಎಂದು ದೂರಿದ್ದಾರೆ.</p>.<p>‘ರೈತರ ಪ್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/tractor-rally-talks-not-fruitful-798523.html" itemprop="url">ಟ್ರ್ಯಾಕ್ಟರ್ ರ್ಯಾಲಿ: ಫಲ ಕೊಡದ ಮಾತುಕತೆ </a></p>.<p>‘ಬಜೆಟ್ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ’ ಎಂದಿದ್ದಾರೆ.</p>.<p>ಬಾಲಕೋಟ ದಾಳಿ ಬಗ್ಗೆ ಮಾಹಿತಿ ಸೋರಿಕೆಯಾಗಿದೆ ಎನ್ನಲಾದ ವಿಷಯವನ್ನು ಪ್ರಸ್ತಾಪಿಸಿರುವ ಅವರು, ‘ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಸರ್ಕಾರ ರಾಜಿಯಾಗಿರುವುದು ವರದಿಯಾಗಿದೆ. ಆದರೆ, ಸರ್ಕಾರ ಈ ವಿಷಯದಲ್ಲಿ ಮೌನವಾಗಿದೆ. ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಪ್ರಮಾಣಪತ್ರ ನೀಡುತ್ತಿದ್ದ ವ್ಯಕ್ತಿಗಳ ನಿಜವಾದ ನಿಲುವು ಈಗ ಬಹಿರಂಗಗೊಂಡಿದೆ’ ಎಂದು ಟೀಕಿಸಿದ್ದಾರೆ.</p>.<p>‘ಕೋವಿಡ್–19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಎಂಎಸ್ಎಂಇ ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ’ ಎಂದು ಹೇಳಿದ್ದಾರೆ.</p>.<p>‘ಖಾಸಗೀಕರಣದ ವ್ಯಾಮೋಹದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಈ ನಿಲುವು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ‘ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ’ ಎಂದು ಟೀಕಿಸಿದ್ದಾರೆ.</p>.<p>ಶುಕ್ರವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, ‘ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಉದ್ದೇಶಪೂರ್ವಕವಾಗಿಯೇ ಸಂಸತ್ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ’ ಎಂದು ದೂರಿದ್ದಾರೆ.</p>.<p>‘ರೈತರ ಪ್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಸಮಾಲೋಚನೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ’ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/tractor-rally-talks-not-fruitful-798523.html" itemprop="url">ಟ್ರ್ಯಾಕ್ಟರ್ ರ್ಯಾಲಿ: ಫಲ ಕೊಡದ ಮಾತುಕತೆ </a></p>.<p>‘ಬಜೆಟ್ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ’ ಎಂದಿದ್ದಾರೆ.</p>.<p>ಬಾಲಕೋಟ ದಾಳಿ ಬಗ್ಗೆ ಮಾಹಿತಿ ಸೋರಿಕೆಯಾಗಿದೆ ಎನ್ನಲಾದ ವಿಷಯವನ್ನು ಪ್ರಸ್ತಾಪಿಸಿರುವ ಅವರು, ‘ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಸರ್ಕಾರ ರಾಜಿಯಾಗಿರುವುದು ವರದಿಯಾಗಿದೆ. ಆದರೆ, ಸರ್ಕಾರ ಈ ವಿಷಯದಲ್ಲಿ ಮೌನವಾಗಿದೆ. ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಪ್ರಮಾಣಪತ್ರ ನೀಡುತ್ತಿದ್ದ ವ್ಯಕ್ತಿಗಳ ನಿಜವಾದ ನಿಲುವು ಈಗ ಬಹಿರಂಗಗೊಂಡಿದೆ’ ಎಂದು ಟೀಕಿಸಿದ್ದಾರೆ.</p>.<p>‘ಕೋವಿಡ್–19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಎಂಎಸ್ಎಂಇ ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ’ ಎಂದು ಹೇಳಿದ್ದಾರೆ.</p>.<p>‘ಖಾಸಗೀಕರಣದ ವ್ಯಾಮೋಹದಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಈ ನಿಲುವು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>