ಕಣ್ಣೂರು:ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ ನಂತರ ಕೇರಳದಲ್ಲಿ ಉದ್ಭವಿಸಿರುವ ಹಿಂಸಾಚಾರ ಇನ್ನೂ ತಣ್ಣಗಾಗಿಲ್ಲ. ಶುಕ್ರವಾರ ರಾತ್ರಿ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ಸಿಪಿಐ(ಎಂ) ಶಾಸಕ ಎ.ಎನ್.ಶಂಸೀರ್ ಮನೆ ಮೇಲೆ ಅಪರಿಚಿತ ದುಷ್ಕರ್ಮಿಗಳು ಬಾಂಬ್ ದಾಳಿ ಎಸಗಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಅದೇ ಪಟ್ಟಣದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯಸಭೆ ಸಂಸದ ವಿ.ಮುರಳೀಧರನ್ ಮನೆ ಮೇಲೂ ಕಚ್ಚಾ ಬಾಂಬ್ ದಾಳಿ ನಡೆದಿದೆ. ಅದೃಷ್ಟವಶಾತ್, ಉಭಯ ಘಟನೆಗಳಲ್ಲಿ ಸಾವು–ನೋವು ಸಂಭವಿಸಿಲ್ಲ.