ತ್ರಿಪುರಾದಲ್ಲಿನ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಮುಸ್ಲಿಂ ಸಂಘಟನೆಗಳು ಅಮರಾವತಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದವು. ಈ ಸಮಯದಲ್ಲಿ ಕಲ್ಲುತೂರಾಟ ಹಾಗೂ ಹಿಂಸಾಚಾರ ನಡೆದಿತ್ತು.ನಾಂದೇಡ್, ಮಾಲೆಗಾಂವ್, ವಾಶಿಮ್ ಮತ್ತು ಯವತ್ಮಾಲ್ ಜಿಲ್ಲೆಗಳಲ್ಲೂ ಈ ಘಟನೆ ವರದಿಯಾಗಿದ್ದವು.ಇದನ್ನು ಖಂಡಿಸಿ ಬಿಜೆಪಿ ಶನಿವಾರ ಬಂದ್ಗೆ ಕರೆ ನೀಡಿತ್ತು.ಇದರ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನಗರದ ರಾಜಕಮಲ್ ಚೌಕದಲ್ಲಿ ಕೇಸರಿ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಮತ್ತೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.ಕಲ್ಲು ತೂರಾಟದಿಂದ ಹಲವು ಅಂಗಡಿಗಳಿಗೆ ಹಾನಿಯಾಗಿದೆಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.