<p><strong>ನವದೆಹಲಿ:</strong> ವಿವಿಧ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ (ವಿಷಲ್ಬ್ಲೋಯಿಂಗ್) ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಂವೇದನಾಶೀಲರನ್ನಾಗಿ ಮಾಡಬೇಕು ಎಂದು ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಎಲ್ಲ ಇಲಾಖೆಗಳಿಗೆ ಸೂಚಿಸಿದೆ.</p>.<p>ಮುಂದಿನ ತಿಂಗಳ ಮೊದಲ ವಾರ ‘ಜಾಗೃತಿ ಸಪ್ತಾಹ‘ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಿವಿಸಿ ಈ ಸೂಚನೆ ನೀಡಿದೆ.</p>.<p>ಗ್ರಾಹಕ ಕೇಂದ್ರಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಗ್ರಾಹಕರ ವ್ಯಾಜ್ಯಗಳನ್ನು ಪರಿಹರಿಸಲು ಶಿಬಿರಗಳನ್ನು ಆಯೋಜಿಸಬೇಕು ಎಂದು ಬುಧವಾರ ಹೊರಡಿಸಿರುವ ಆದೇಶದಲ್ಲಿ ಸಿವಿಸಿ ತಿಳಿಸಿದೆ.</p>.<p>ಭ್ರಷ್ಟಾಚಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ‘ಜಾಗೃತಿ ಗ್ರಾಮಸಭೆ’ಗಳನ್ನು ಸಂಘಟಿಸಬೇಕು ಎಂದೂ ಆಯೋಗ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿವಿಧ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ (ವಿಷಲ್ಬ್ಲೋಯಿಂಗ್) ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಂವೇದನಾಶೀಲರನ್ನಾಗಿ ಮಾಡಬೇಕು ಎಂದು ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಎಲ್ಲ ಇಲಾಖೆಗಳಿಗೆ ಸೂಚಿಸಿದೆ.</p>.<p>ಮುಂದಿನ ತಿಂಗಳ ಮೊದಲ ವಾರ ‘ಜಾಗೃತಿ ಸಪ್ತಾಹ‘ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಿವಿಸಿ ಈ ಸೂಚನೆ ನೀಡಿದೆ.</p>.<p>ಗ್ರಾಹಕ ಕೇಂದ್ರಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಗ್ರಾಹಕರ ವ್ಯಾಜ್ಯಗಳನ್ನು ಪರಿಹರಿಸಲು ಶಿಬಿರಗಳನ್ನು ಆಯೋಜಿಸಬೇಕು ಎಂದು ಬುಧವಾರ ಹೊರಡಿಸಿರುವ ಆದೇಶದಲ್ಲಿ ಸಿವಿಸಿ ತಿಳಿಸಿದೆ.</p>.<p>ಭ್ರಷ್ಟಾಚಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ‘ಜಾಗೃತಿ ಗ್ರಾಮಸಭೆ’ಗಳನ್ನು ಸಂಘಟಿಸಬೇಕು ಎಂದೂ ಆಯೋಗ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>