<p><strong>ನವದೆಹಲಿ:</strong> ಕಾಂಗ್ರೆಸ್ ಉನ್ನತ ನಾಯಕರು ಇದೇ 16 ರಂದು ಇಲ್ಲಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೇರಲಿದ್ದಾರೆ. ಸಭೆಯು ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸುವ ಜತೆಗೆ ಸಾಂಸ್ಥಿಕ ಚುನಾವಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.</p>.<p>ಇತ್ತೀಚಿನ ಕೆಲವು ಪಕ್ಷಾಂತರದ ಬೆಳವಣಿಗಳು ಸೇರಿ ಪ್ರಮುಖ ವಿಷಯಗಳನ್ನು ಚರ್ಚಿಸಲು ಪಕ್ಷದ ಪ್ರಮುಖ ನಾಯಕರು ಬೇಡಿಕೆ ಇಟ್ಟಿದ್ದರಿಂದ ಕಾರ್ಯಕಾರಿ ಸಮಿತಿಯ ಸಭೆ ಕರೆಯಲಾಗಿದೆ.</p>.<p>ಪಕ್ಷದ ಘಟಕಗಳಲ್ಲಿನ ಗೊಂದಲ, ಉತ್ತರಪ್ರದೇಶ, ಪಂಜಾಬ್, ಛತ್ತೀಸ್ಗಡ ಮತ್ತು ಇತರ ರಾಜ್ಯಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಗಳು ಹಾಗೂ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬದಲಿಗೆ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಸ್ತಾವದ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.</p>.<p>ಕಾಂಗ್ರೆಸ್ ತೊರೆಯುತ್ತಿರುವ ನಾಯಕರು, ಪಕ್ಷದ ರಾಜ್ಯ ಘಟಕಗಳಲ್ಲಿನ ಬಂಡಾಯ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯಗಳ ವಿರುದ್ಧ ಯಶಸ್ವಿ ಪ್ರತಿಭಟನೆ ನಡೆಸಲು ಅಸಮರ್ಥವಾಗಿರುವುದು ಸೇರಿದಂತೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟುಗಳು ಸಭೆಯಲ್ಲಿ ಬಿರುಗಾಳಿ ಎಬ್ಬಿಸುವ ನಿರೀಕ್ಷೆಯಿದೆ.</p>.<p>ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಕೂಡ ಶೀಘ್ರದಲ್ಲೇ ಸಿಡಬ್ಲ್ಯುಸಿ ಸಭೆ ಕರೆಯುವಂತೆ ಕಾಂಗ್ರೆಸ್ ಅಧ್ಯಕ್ಷರಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಕೂಡ ಪಕ್ಷಕ್ಕೆ ಪೂರ್ಣಾವಧಿಯ ಅಧ್ಯಕ್ಷರಿಲ್ಲದಿರುವ ಬಗ್ಗೆ ಪ್ರಶ್ನೆ ಎತ್ತಿದ್ದರು.</p>.<p>‘ಸಭೆ ಅ.16 (ಶನಿವಾರ) ಬೆಳಿಗ್ಗೆ 10 ಗಂಟೆಗೆ ನವದೆಹಲಿಯಎಐಸಿಸಿ ಕಚೇರಿಯಲ್ಲಿ ನಡೆಯಲಿದೆ. ಸದ್ಯದ ರಾಜಕೀಯ ಪರಿಸ್ಥಿತಿ, ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳ ಬಗ್ಗೆ ಚರ್ಚಿಸಲಾಗುವುದು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಉನ್ನತ ನಾಯಕರು ಇದೇ 16 ರಂದು ಇಲ್ಲಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೇರಲಿದ್ದಾರೆ. ಸಭೆಯು ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸುವ ಜತೆಗೆ ಸಾಂಸ್ಥಿಕ ಚುನಾವಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.</p>.<p>ಇತ್ತೀಚಿನ ಕೆಲವು ಪಕ್ಷಾಂತರದ ಬೆಳವಣಿಗಳು ಸೇರಿ ಪ್ರಮುಖ ವಿಷಯಗಳನ್ನು ಚರ್ಚಿಸಲು ಪಕ್ಷದ ಪ್ರಮುಖ ನಾಯಕರು ಬೇಡಿಕೆ ಇಟ್ಟಿದ್ದರಿಂದ ಕಾರ್ಯಕಾರಿ ಸಮಿತಿಯ ಸಭೆ ಕರೆಯಲಾಗಿದೆ.</p>.<p>ಪಕ್ಷದ ಘಟಕಗಳಲ್ಲಿನ ಗೊಂದಲ, ಉತ್ತರಪ್ರದೇಶ, ಪಂಜಾಬ್, ಛತ್ತೀಸ್ಗಡ ಮತ್ತು ಇತರ ರಾಜ್ಯಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಗಳು ಹಾಗೂ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬದಲಿಗೆ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಸ್ತಾವದ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.</p>.<p>ಕಾಂಗ್ರೆಸ್ ತೊರೆಯುತ್ತಿರುವ ನಾಯಕರು, ಪಕ್ಷದ ರಾಜ್ಯ ಘಟಕಗಳಲ್ಲಿನ ಬಂಡಾಯ, ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯಗಳ ವಿರುದ್ಧ ಯಶಸ್ವಿ ಪ್ರತಿಭಟನೆ ನಡೆಸಲು ಅಸಮರ್ಥವಾಗಿರುವುದು ಸೇರಿದಂತೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟುಗಳು ಸಭೆಯಲ್ಲಿ ಬಿರುಗಾಳಿ ಎಬ್ಬಿಸುವ ನಿರೀಕ್ಷೆಯಿದೆ.</p>.<p>ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಕೂಡ ಶೀಘ್ರದಲ್ಲೇ ಸಿಡಬ್ಲ್ಯುಸಿ ಸಭೆ ಕರೆಯುವಂತೆ ಕಾಂಗ್ರೆಸ್ ಅಧ್ಯಕ್ಷರಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಕೂಡ ಪಕ್ಷಕ್ಕೆ ಪೂರ್ಣಾವಧಿಯ ಅಧ್ಯಕ್ಷರಿಲ್ಲದಿರುವ ಬಗ್ಗೆ ಪ್ರಶ್ನೆ ಎತ್ತಿದ್ದರು.</p>.<p>‘ಸಭೆ ಅ.16 (ಶನಿವಾರ) ಬೆಳಿಗ್ಗೆ 10 ಗಂಟೆಗೆ ನವದೆಹಲಿಯಎಐಸಿಸಿ ಕಚೇರಿಯಲ್ಲಿ ನಡೆಯಲಿದೆ. ಸದ್ಯದ ರಾಜಕೀಯ ಪರಿಸ್ಥಿತಿ, ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳ ಬಗ್ಗೆ ಚರ್ಚಿಸಲಾಗುವುದು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>