<p><strong>ಭೀಮಾವರಂ</strong>: ಕಾಂಬೋಡಿಯಾದಿಂದ ಕಾರ್ಯನಿರ್ವಹಿಸುತ್ತಿರುವ ಸೈಬರ್ ವಂಚನೆ ಜಾಲವೊಂದಕ್ಕೆ ಸಂಬಂಧಿಸಿದ 14 ಸದಸ್ಯರನ್ನು ಆಂಧ್ರ ಪ್ರದೇಶ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಡಿಜಿಟಲ್ ಅರೆಸ್ಟ್ ಮೂಲಕ 75 ವರ್ಷದ ಭೀಮಾವರಂನ ನಿವೃತ್ತ ಪ್ರಾಧ್ಯಾಪಕನಿಗೆ ಇವರು ₹78 ಲಕ್ಷ ವಂಚಿಸಿದ್ದಾರೆ.</p>.<p>ಪಶ್ಚಿಮ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ನಾನ್ ನಯೀಮ್ ಆಸ್ಮಿ ಅವರು ಗುರುವಾರ ಮಾಹಿತಿ ನೀಡಿ, ‘ವಾಟ್ಸ್ಆ್ಯಪ್ ಕರೆ ಮಾಡಿ, ತಮ್ಮನ್ನು ತಾವು ಬೆಂಗಳೂರು ಪೊಲೀಸರು ಎಂದು ಬಿಂಬಿಸಿಕೊಂಡ ವಂಚಕರು ಸುಪ್ರೀಂ ಕೋರ್ಟ್ನ ನಕಲು ದಾಖಲೆಗಳನ್ನು ತೋರಿಸಿ ಹಣ ವಂಚಿಸಿದ್ದಾರೆ’ ಎಂದರು.</p>.<p>‘ವಂಚಿಸಿದ್ದ ಹಣದಲ್ಲಿ ₹42 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಅಂತರರಾಷ್ಟ್ರೀಯ ಸಿಮ್ ಕಾರ್ಡ್ಗಳಿದ್ದ 15 ಮೊಬೈಲ್, ಬ್ಯಾಂಕ್ ದಾಖಲೆಗಳು, ಪಾಸ್ಪೋರ್ಟ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜಾಲದ ಪ್ರಮುಖ ಆರೋಪಿ ಮುಂಬೈನ ರಹತೆ ಜೆ. ನಾರಾಯಣ್ ಎಂಬುವರು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೀಮಾವರಂ</strong>: ಕಾಂಬೋಡಿಯಾದಿಂದ ಕಾರ್ಯನಿರ್ವಹಿಸುತ್ತಿರುವ ಸೈಬರ್ ವಂಚನೆ ಜಾಲವೊಂದಕ್ಕೆ ಸಂಬಂಧಿಸಿದ 14 ಸದಸ್ಯರನ್ನು ಆಂಧ್ರ ಪ್ರದೇಶ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಡಿಜಿಟಲ್ ಅರೆಸ್ಟ್ ಮೂಲಕ 75 ವರ್ಷದ ಭೀಮಾವರಂನ ನಿವೃತ್ತ ಪ್ರಾಧ್ಯಾಪಕನಿಗೆ ಇವರು ₹78 ಲಕ್ಷ ವಂಚಿಸಿದ್ದಾರೆ.</p>.<p>ಪಶ್ಚಿಮ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ನಾನ್ ನಯೀಮ್ ಆಸ್ಮಿ ಅವರು ಗುರುವಾರ ಮಾಹಿತಿ ನೀಡಿ, ‘ವಾಟ್ಸ್ಆ್ಯಪ್ ಕರೆ ಮಾಡಿ, ತಮ್ಮನ್ನು ತಾವು ಬೆಂಗಳೂರು ಪೊಲೀಸರು ಎಂದು ಬಿಂಬಿಸಿಕೊಂಡ ವಂಚಕರು ಸುಪ್ರೀಂ ಕೋರ್ಟ್ನ ನಕಲು ದಾಖಲೆಗಳನ್ನು ತೋರಿಸಿ ಹಣ ವಂಚಿಸಿದ್ದಾರೆ’ ಎಂದರು.</p>.<p>‘ವಂಚಿಸಿದ್ದ ಹಣದಲ್ಲಿ ₹42 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಅಂತರರಾಷ್ಟ್ರೀಯ ಸಿಮ್ ಕಾರ್ಡ್ಗಳಿದ್ದ 15 ಮೊಬೈಲ್, ಬ್ಯಾಂಕ್ ದಾಖಲೆಗಳು, ಪಾಸ್ಪೋರ್ಟ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜಾಲದ ಪ್ರಮುಖ ಆರೋಪಿ ಮುಂಬೈನ ರಹತೆ ಜೆ. ನಾರಾಯಣ್ ಎಂಬುವರು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>