<p><strong>ಭುವನೇಶ್ವರ:</strong> ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಗಂಜಾಂ ಜಿಲ್ಲೆಯ ಗೋಪಾಲಪುರ ಸಮೀಪ ದಕ್ಷಿಣ ಒಡಿಶಾ ಕರಾವಳಿಯನ್ನು ದಾಟಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಒಡಿಶಾಗೆ ಭೇಟಿ ನೀಡಲಿದ್ದು, ದೂರಸಂಪರ್ಕ, ರೈಲ್ವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸುಮಾರು ₹ 60,000 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪ್ರಧಾನಿ ಮೋದಿಯವರ ಸಾರ್ವಜನಿಕ ಸಮಾವೇಶಕ್ಕೆ ಆರಂಭದಲ್ಲಿ ಗಂಜಾಂ ಜಿಲ್ಲೆಯ ಬೆರ್ಹಮ್ಪುರದಲ್ಲಿ ಸ್ಥಳ ನಿಗದಿಯಾಗಿತ್ತು. ಆದರೆ, ಆ ಭಾಗದಲ್ಲಿ ಶನಿವಾರ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆ ಇದ್ದ ಕಾರಣ ಝಾರ್ಸುಗುಡಕ್ಕೆ ಕಾರ್ಯಕ್ರಮ ಸ್ಥಳಾಂತರಿಸಲಾಗಿದೆ. ಆದಾಗ್ಯೂ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂಬುದಾಗಿ ಐಎಂಡಿ ಮುನ್ನೆಚ್ಚರಿಕೆ ನೀಡಿರುವ 9 ಜಿಲ್ಲೆಗಳಲ್ಲಿ ಝಾರ್ಸುಗುಡವೂ ಒಂದಾಗಿದೆ.</p><p>'ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕಳೆದ 6 ತಾಸಿನಲ್ಲಿ ಗಂಟೆಗೆ 12 ಕಿ.ಮೀ. ವೇಗದಲ್ಲಿ ಪಶ್ಚಿಮದತ್ತ ಸಾಗಿ, ಶನಿವಾರ ಮುಂಜಾನೆ 4.30ರ ಹೊತ್ತಿಗೆ ಗೋಪಾಲ್ಪುರ ಸಮೀಪ ಒಡಿಶಾ ಕರಾವಳಿಯನ್ನು ದಾಟಿದೆ' ಎಂದು ಐಎಂಡಿ ಹೇಳಿದೆ.</p><p>ಸಂಪೂರ್ಣ ಕರಾವಳಿ ಪ್ರದೇಶ ಹಾಗೂ ರಾಜ್ಯದ ದಕ್ಷಿಣ ಭಾಗಗಳಲ್ಲಿ ಶುಕ್ರವಾರ ರಾತ್ರಿಯಿಡೀ ಭಾರಿ ಮಳೆಯಾಗಿದೆ. ಶನಿವಾರ ಬೆಳಿಗ್ಗೆಯೂ ಅದು ಮುಂದುವರಿದಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮಧ್ಯಾಹ್ನದ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.</p>.ಅಪಾಯದಮಟ್ಟ ಮೀರಿ ಹರಿಯುತ್ತಿದೆ ಭೀಮಾನದಿ: ಮುಳುಗಿದ ಕಡಬೂರ, ತೆಪ್ಪದಲ್ಲೇ ಪಯಣ.ಸೇಡಂ ತಾಲ್ಲೂಕಿನಾದ್ಯಂತ ವರುಣನ ಆರ್ಭಟ: ಸಟಪಟನಹಳ್ಳಿ ಮನೆಗಳಿಗೆ ನುಗ್ಗಿದ ಮಳೆ ನೀರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಗಂಜಾಂ ಜಿಲ್ಲೆಯ ಗೋಪಾಲಪುರ ಸಮೀಪ ದಕ್ಷಿಣ ಒಡಿಶಾ ಕರಾವಳಿಯನ್ನು ದಾಟಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಒಡಿಶಾಗೆ ಭೇಟಿ ನೀಡಲಿದ್ದು, ದೂರಸಂಪರ್ಕ, ರೈಲ್ವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸುಮಾರು ₹ 60,000 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪ್ರಧಾನಿ ಮೋದಿಯವರ ಸಾರ್ವಜನಿಕ ಸಮಾವೇಶಕ್ಕೆ ಆರಂಭದಲ್ಲಿ ಗಂಜಾಂ ಜಿಲ್ಲೆಯ ಬೆರ್ಹಮ್ಪುರದಲ್ಲಿ ಸ್ಥಳ ನಿಗದಿಯಾಗಿತ್ತು. ಆದರೆ, ಆ ಭಾಗದಲ್ಲಿ ಶನಿವಾರ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆ ಇದ್ದ ಕಾರಣ ಝಾರ್ಸುಗುಡಕ್ಕೆ ಕಾರ್ಯಕ್ರಮ ಸ್ಥಳಾಂತರಿಸಲಾಗಿದೆ. ಆದಾಗ್ಯೂ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂಬುದಾಗಿ ಐಎಂಡಿ ಮುನ್ನೆಚ್ಚರಿಕೆ ನೀಡಿರುವ 9 ಜಿಲ್ಲೆಗಳಲ್ಲಿ ಝಾರ್ಸುಗುಡವೂ ಒಂದಾಗಿದೆ.</p><p>'ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕಳೆದ 6 ತಾಸಿನಲ್ಲಿ ಗಂಟೆಗೆ 12 ಕಿ.ಮೀ. ವೇಗದಲ್ಲಿ ಪಶ್ಚಿಮದತ್ತ ಸಾಗಿ, ಶನಿವಾರ ಮುಂಜಾನೆ 4.30ರ ಹೊತ್ತಿಗೆ ಗೋಪಾಲ್ಪುರ ಸಮೀಪ ಒಡಿಶಾ ಕರಾವಳಿಯನ್ನು ದಾಟಿದೆ' ಎಂದು ಐಎಂಡಿ ಹೇಳಿದೆ.</p><p>ಸಂಪೂರ್ಣ ಕರಾವಳಿ ಪ್ರದೇಶ ಹಾಗೂ ರಾಜ್ಯದ ದಕ್ಷಿಣ ಭಾಗಗಳಲ್ಲಿ ಶುಕ್ರವಾರ ರಾತ್ರಿಯಿಡೀ ಭಾರಿ ಮಳೆಯಾಗಿದೆ. ಶನಿವಾರ ಬೆಳಿಗ್ಗೆಯೂ ಅದು ಮುಂದುವರಿದಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಮಧ್ಯಾಹ್ನದ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.</p>.ಅಪಾಯದಮಟ್ಟ ಮೀರಿ ಹರಿಯುತ್ತಿದೆ ಭೀಮಾನದಿ: ಮುಳುಗಿದ ಕಡಬೂರ, ತೆಪ್ಪದಲ್ಲೇ ಪಯಣ.ಸೇಡಂ ತಾಲ್ಲೂಕಿನಾದ್ಯಂತ ವರುಣನ ಆರ್ಭಟ: ಸಟಪಟನಹಳ್ಳಿ ಮನೆಗಳಿಗೆ ನುಗ್ಗಿದ ಮಳೆ ನೀರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>