<p><strong>ಚೆನ್ನೈ</strong>: ದಿತ್ವಾ ಚಂಡಮಾರುತ ಜೋರಾಗಿದ್ದು, ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈ, ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿವೆ.</p><p>ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಚೆನ್ನೈ ಜಿಲ್ಲಾಧಿಕಾರಿ ರೋಶ್ನಿ ಸಿದ್ಧಾರ್ಥ ಜಗಾಡೆ ತಿಳಿಸಿದ್ದಾರೆ. ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲೂಇದೇ ರೀತಿಯ ಆದೇಶ ಹೊರಡಿಸಲಾಗಿದೆ.</p><p>ಭಾರಿ ಮಳೆ ಮತ್ತು ನೀರಿನ ಸಂಗ್ರಹದಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನಿವಾಸಿಗಳು ಜಾಗರೂಕರಾಗಿರಬೇಕು, ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಮತ್ತು ರಾಜ್ಯ ಸರ್ಕಾರ ಹಾಗೂ ವಿಪತ್ತು ನಿರ್ವಹಣಾ ಸಂಸ್ಥೆಗಳು ನೀಡಿರುವ ಸಲಹೆ, ಸೂಚನೆಗಳನ್ನು ಪಾಲಿಸಬೇಕೆಂದು ಅಧಿಕಾರಿಗಳು ಒತ್ತಾಯಿಸಿದ್ದಾರೆ.</p><p>ತಮಿಳುನಾಡಿನಲ್ಲಿ ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ಕೆ ಕೆ.ಎಸ್. ಎಸ್. ಆರ್. ರಾಮಚಂದ್ರನ್ ತಿಳಿಸಿದ್ದಾರೆ.</p><p>ವಿನಾಶಕಾರಿ ಚಂಡಮಾರುತದ ಹೊಡೆತಕ್ಕೆ ಶ್ರೀಲಂಕಾದಲ್ಲಿ 593 ಮಂದಿ ಮೃತಪಟ್ಟಿದ್ದಾರೆ.</p><p>ಈ ಮಧ್ಯೆ, ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ತುರ್ತು ನೆರವಿನ ಭಾಗವಾಗಿ ಭಾರತವು ‘ಆಪರೇಷನ್ ಸಾಗರ್ ಬಂಧು’ ಅಡಿಯಲ್ಲಿ ಶ್ರೀಲಂಕಾಕ್ಕೆ 53 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ದಿತ್ವಾ ಚಂಡಮಾರುತ ಜೋರಾಗಿದ್ದು, ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈ, ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿವೆ.</p><p>ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಚೆನ್ನೈ ಜಿಲ್ಲಾಧಿಕಾರಿ ರೋಶ್ನಿ ಸಿದ್ಧಾರ್ಥ ಜಗಾಡೆ ತಿಳಿಸಿದ್ದಾರೆ. ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲೂಇದೇ ರೀತಿಯ ಆದೇಶ ಹೊರಡಿಸಲಾಗಿದೆ.</p><p>ಭಾರಿ ಮಳೆ ಮತ್ತು ನೀರಿನ ಸಂಗ್ರಹದಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನಿವಾಸಿಗಳು ಜಾಗರೂಕರಾಗಿರಬೇಕು, ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಮತ್ತು ರಾಜ್ಯ ಸರ್ಕಾರ ಹಾಗೂ ವಿಪತ್ತು ನಿರ್ವಹಣಾ ಸಂಸ್ಥೆಗಳು ನೀಡಿರುವ ಸಲಹೆ, ಸೂಚನೆಗಳನ್ನು ಪಾಲಿಸಬೇಕೆಂದು ಅಧಿಕಾರಿಗಳು ಒತ್ತಾಯಿಸಿದ್ದಾರೆ.</p><p>ತಮಿಳುನಾಡಿನಲ್ಲಿ ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ಕೆ ಕೆ.ಎಸ್. ಎಸ್. ಆರ್. ರಾಮಚಂದ್ರನ್ ತಿಳಿಸಿದ್ದಾರೆ.</p><p>ವಿನಾಶಕಾರಿ ಚಂಡಮಾರುತದ ಹೊಡೆತಕ್ಕೆ ಶ್ರೀಲಂಕಾದಲ್ಲಿ 593 ಮಂದಿ ಮೃತಪಟ್ಟಿದ್ದಾರೆ.</p><p>ಈ ಮಧ್ಯೆ, ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ತುರ್ತು ನೆರವಿನ ಭಾಗವಾಗಿ ಭಾರತವು ‘ಆಪರೇಷನ್ ಸಾಗರ್ ಬಂಧು’ ಅಡಿಯಲ್ಲಿ ಶ್ರೀಲಂಕಾಕ್ಕೆ 53 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>