ನವದೆಹಲಿ: ಹಮೂನ್ ಚಂಡಮಾರುತದ ತೀವ್ರತೆ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಹಮೂನ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಗಾಳಿಯ ವೇಗ ಗಂಟೆಗೆ 130ರಿಂದ 145 ಕಿ.ಮೀ ವೇಗದಲ್ಲಿತ್ತು. ಈಗ ಗಾಳಿಯ ವೇಗ ಗಂಟೆಗೆ 70 ಕಿ.ಮೀ.ಗೆ ಇಳಿಕೆ ಕಂಡಿದೆ. ಕರಾವಳಿ ಪ್ರದೇಶವನ್ನು ಅಪ್ಪಳಿಸುವ ವೇಳೆಗೆ ಚಂಡಮಾರುತದ ತೀವ್ರತೆ ದುರ್ಬಲಗೊಂಡಿದೆ ಎಂದು ಐಎಂಡಿ ತಿಳಿಸಿದೆ.
ಚಂಡಮಾರುತದಿಂದಾಗಿ ಭಾರತದ ಕರಾವಳಿ ಪ್ರದೇಶದಲ್ಲಿ ಹಾನಿ ಉಂಟಾಗಿಲ್ಲ. ತ್ರಿಪುರಾ, ಮಿಜೋರಾಂದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಮುಂದಿನ 12 ತಾಸುಗಳಲ್ಲಿ ಚಂಡಮಾರುತ ಮತ್ತಷ್ಟು ದುರ್ಬಲಗೊಂಡು ಉತ್ತರ-ಈಶಾನ್ಯದತ್ತ ಚಲಿಸಲಿದೆ ಎಂದು ಹೇಳಿದೆ.