ಪಶ್ಚಿಮ ಬಂಗಾಳದ ಸುಂದರಬನದ ಕೆಲವು ಪ್ರದೇಶಗಳು, ದಕ್ಷಿಣ 24 ಪರಗಣ ಜಿಲ್ಲೆ ಮತ್ತು ಪುರ್ಬಾ ಮೇದಿನಿಪುರದ ಕರಾವಳಿಯ ತಗ್ಗು ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುರಕ್ಷಿತ ಸ್ಥಳದಲ್ಲಿ ತೆರೆದಿರುವ ಆಸರೆ ಕೇಂದ್ರಗಳಿಗೆ ಕುಡಿಯುವ ನೀರು, ಹಾಲಿನ ಪುಡಿ, ಆಹಾರ ಮತ್ತು ಔಷಧಗಳನ್ನು ಪೂರೈಸಲಾಗಿದೆ. ಅಲ್ಲದೆ, ಈ ಪ್ರದೇಶಗಳಿಗೆ ಸಾಕಷ್ಟು ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.