<p><strong>ನವದೆಹಲಿ:</strong> ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭಾನುವಾರ ತಡರಾತ್ರಿ ತೀವ್ರತರವಾದ ‘ರೀಮಲ್’ ಚಂಡಮಾರುತ ಅಪ್ಪಳಿಸಿದೆ.</p><p>ಭಾರಿ ಗಾಳಿ ಮತ್ತು ಮಳೆಯಿಂದಾಗಿ ಬಾಂಗ್ಲಾದೇಶದಲ್ಲಿ 10, ಪಶ್ಚಿಮ ಬಂಗಾಳದಲ್ಲಿ 6 ಮಂದಿ ಸಾವು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದಲ್ಲಿ ಪ್ರತಿ ಗಂಟೆಗೆ 70ರಿಂದ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದು ಸಂಜೆಯ ವೇಳೆಗೆ 50-70 ಕಿ.ಮೀ ಮತ್ತು ರಾತ್ರಿ 40 –50 ಕಿ.ಮೀ.ಗೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.</p><p>ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಚಂಡಮಾರುತವು ಇನ್ನಷ್ಟು ತೀವ್ರಗೊಳ್ಳಲಿದೆ. ಹಾಗಾಗಿ ಮೀನುಗಾರರು ಬಂಗಾಳಕೊಲ್ಲಿಗೆ ಇಳಿಯದಂತೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.</p><p><strong>ಚಂಡಮಾರುತ: 1 ಲಕ್ಷ ಜನರ ಸ್ಥಳಾಂತರ</strong></p><p>ರೀಮಲ್ ಚಂಡಮಾರುತದಿಂದ ಜೀವಹಾನಿ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರವು ಅಂದಾಜು 1.10 ಲಕ್ಷ ಜನರನ್ನು ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ರವಾನಿಸಿದೆ.</p><p>ಸುಂದರಬನ ಹಾಗೂ ಸಾಗರ ದ್ವೀಪದಿಂದಲೂ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ನೆರವಾಗಲು ರಾಜ್ಯದ ಪರಿಹಾರ ನಿರ್ವಹಣಾ ತಂಡ ಮತ್ತು ಎನ್ಡಿಆರ್ಎಫ್ನ ತಲಾ 16 ತುಕಡಿಗಳನ್ನು ನಿಯೋಜಿಸಲಾಗಿದೆ.</p><p>ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯದ ಸಚಿವಾಲಯದಲ್ಲಿ ಕೇಂದ್ರೀಕೃತ ನಿಯಂತ್ರಣ ಘಟಕವೊಂದನ್ನು ಆರಂಭಿಸಲಾಗಿದೆ.</p>.ರೀಮಲ್ ಚಂಡಮಾರುತ: ಬಾಂಗ್ಲಾದೇಶದಲ್ಲಿ 7 ಮಂದಿ ಸಾವು.‘ರೀಮಲ್’ ಚಂಡಮಾರುತ: ಪ.ಬಂಗಾಳದಲ್ಲಿ 1 ಲಕ್ಷ,ಬಾಂಗ್ಲಾದಲ್ಲಿ 8 ಲಕ್ಷ ಜನರ ಸ್ಥಳಾಂತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭಾನುವಾರ ತಡರಾತ್ರಿ ತೀವ್ರತರವಾದ ‘ರೀಮಲ್’ ಚಂಡಮಾರುತ ಅಪ್ಪಳಿಸಿದೆ.</p><p>ಭಾರಿ ಗಾಳಿ ಮತ್ತು ಮಳೆಯಿಂದಾಗಿ ಬಾಂಗ್ಲಾದೇಶದಲ್ಲಿ 10, ಪಶ್ಚಿಮ ಬಂಗಾಳದಲ್ಲಿ 6 ಮಂದಿ ಸಾವು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದಲ್ಲಿ ಪ್ರತಿ ಗಂಟೆಗೆ 70ರಿಂದ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದು ಸಂಜೆಯ ವೇಳೆಗೆ 50-70 ಕಿ.ಮೀ ಮತ್ತು ರಾತ್ರಿ 40 –50 ಕಿ.ಮೀ.ಗೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.</p><p>ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಚಂಡಮಾರುತವು ಇನ್ನಷ್ಟು ತೀವ್ರಗೊಳ್ಳಲಿದೆ. ಹಾಗಾಗಿ ಮೀನುಗಾರರು ಬಂಗಾಳಕೊಲ್ಲಿಗೆ ಇಳಿಯದಂತೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.</p><p><strong>ಚಂಡಮಾರುತ: 1 ಲಕ್ಷ ಜನರ ಸ್ಥಳಾಂತರ</strong></p><p>ರೀಮಲ್ ಚಂಡಮಾರುತದಿಂದ ಜೀವಹಾನಿ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರವು ಅಂದಾಜು 1.10 ಲಕ್ಷ ಜನರನ್ನು ಕರಾವಳಿ ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ರವಾನಿಸಿದೆ.</p><p>ಸುಂದರಬನ ಹಾಗೂ ಸಾಗರ ದ್ವೀಪದಿಂದಲೂ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ನೆರವಾಗಲು ರಾಜ್ಯದ ಪರಿಹಾರ ನಿರ್ವಹಣಾ ತಂಡ ಮತ್ತು ಎನ್ಡಿಆರ್ಎಫ್ನ ತಲಾ 16 ತುಕಡಿಗಳನ್ನು ನಿಯೋಜಿಸಲಾಗಿದೆ.</p><p>ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯದ ಸಚಿವಾಲಯದಲ್ಲಿ ಕೇಂದ್ರೀಕೃತ ನಿಯಂತ್ರಣ ಘಟಕವೊಂದನ್ನು ಆರಂಭಿಸಲಾಗಿದೆ.</p>.ರೀಮಲ್ ಚಂಡಮಾರುತ: ಬಾಂಗ್ಲಾದೇಶದಲ್ಲಿ 7 ಮಂದಿ ಸಾವು.‘ರೀಮಲ್’ ಚಂಡಮಾರುತ: ಪ.ಬಂಗಾಳದಲ್ಲಿ 1 ಲಕ್ಷ,ಬಾಂಗ್ಲಾದಲ್ಲಿ 8 ಲಕ್ಷ ಜನರ ಸ್ಥಳಾಂತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>