<p>ಭುವನೇಶ್ವರ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಚಂಡಮಾರುತದ ರೂಪವನ್ನು ಪಡೆದು ನಾಳೆ ಒಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಸಂಭವನೀಯ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರವು ಸವಾಲನ್ನು ಎದುರಿಸಲು ಸಾಕಷ್ಟು ರಕ್ಷಣಾ ತಂಡ, ಯಂತ್ರೋಪಕರಣಗಳು ಮತ್ತು ಲಾಜಿಸ್ಟಿಕ್ಸ್ ಅನ್ನು ಸಿದ್ಧಪಡಿಸುವ ಮೂಲಕ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ</p>.<p>ಐಎಂಡಿಯ ಸಲಹೆಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಗುರುವಾರ ಸಂಜೆಯೊಳಗೆ ಎಲ್ಲಾ ಮೀನುಗಾರರು ದಡಕ್ಕೆ ಮರಳಿದ್ಧಾರೆ ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪಿ ಕೆ ಜೆನಾ ತಿಳಿಸಿದ್ದಾರೆ.</p>.<p>ಗುರುವಾರ ಸಂಜೆ ಬಿಡುಗಡೆಯಾದ ಐಎಂಡಿ ಬುಲೆಟಿನ್ ಪ್ರಕಾರ, ಮಾರುತಗಳು ವಾಯುವ್ಯದ ಕಡೆಗೆ ಚಲಿಸಲಿದ್ದು, ಸಂಜೆ 5.30ರ ಹೊತ್ತಿಗೆ ವಿಶಾಖಪಟ್ಟಣದಿಂದ ಸುಮಾರು 960 ಕಿ.ಮೀ ದೂರದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿವೆ.</p>.<p>ಶುಕ್ರವಾರದಿಂದ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಶನಿವಾರ ಒಡಿಶಾ ಕರಾವಳಿಯ ಸಮೀಪದಲ್ಲಿ ಚಂಡಮಾರುತವು 100 ಕಿಮೀ ವೇಗವನ್ನು ಪಡೆಯುತ್ತದೆ ಎಂದು ಮುನ್ಸೂಚನೆ ತಿಳಿಸಿದೆ.</p>.<p>ಪ್ರಸ್ತುತ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಬುಲೆಟಿನ್ ಹೇಳಿದೆ.</p>.<p>ಈ ವ್ಯವಸ್ಥೆಯು ಆರಂಭದಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುತ್ತದೆ ಮತ್ತು ಡಿಸೆಂಬರ್ 4 ರ ಸಂಜೆಯವರೆಗೆ ಈಶಾನ್ಯ ಮತ್ತು ವಾಯುವ್ಯಕ್ಕೆ ಚಲನೆಯನ್ನು ಕ್ರಮೇಣ ಬದಲಾವಣೆಗಳನ್ನು ಹೊಂದಿರುತ್ತದೆ ಎಂದು ಅದು ಹೇಳಿದೆ.</p>.<p>ನಂತರ ಮಾರುತಗಳು ಉತ್ತರ-ಈಶಾನ್ಯಕ್ಕೆ ಮಾರ್ಗ ಬದಲಿಸುತ್ತವೆ. ಡಿಸೆಂಬರ್ 4 ರ ತಡರಾತ್ರಿ ಉತ್ತರ ಆಂಧ್ರಪ್ರದೇಶ-ದಕ್ಷಿಣ ಒಡಿಶಾ ಕರಾವಳಿಯನ್ನು ದಾಟುತ್ತವೆ ಎಂದು ಅದು ತಿಳಿಸಿದೆ.</p>.<p>ಒಡಿಶಾ ವಿಶೇಷ ಪರಿಹಾರ ಆಯುಕ್ತ (ಎಸ್ಆರ್ಸಿ) ಪಿ ಕೆ ಜೆನಾ ಮಾತನಾಡಿ, ರಾಜ್ಯ ಸರ್ಕಾರವು ಎನ್ಡಿಆರ್ಎಫ್ನ 17, ಒಡಿಆರ್ಎಫ್ನ 60 ಮತ್ತು ಅಗ್ನಿಶಾಮಕ ದಳದ 172 ಸದಸ್ಯರನ್ನು ಒಳಗೊಂಡ 249 ತಂಡಗಳನ್ನು ಸಿದ್ಧಪಡಿಸಿದೆ ಮತ್ತು ಅವುಗಳನ್ನು ಜಿಲ್ಲೆಗಳಿಗೆ ನಿಯೋಜಿಸಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭುವನೇಶ್ವರ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಚಂಡಮಾರುತದ ರೂಪವನ್ನು ಪಡೆದು ನಾಳೆ ಒಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಸಂಭವನೀಯ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರವು ಸವಾಲನ್ನು ಎದುರಿಸಲು ಸಾಕಷ್ಟು ರಕ್ಷಣಾ ತಂಡ, ಯಂತ್ರೋಪಕರಣಗಳು ಮತ್ತು ಲಾಜಿಸ್ಟಿಕ್ಸ್ ಅನ್ನು ಸಿದ್ಧಪಡಿಸುವ ಮೂಲಕ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ</p>.<p>ಐಎಂಡಿಯ ಸಲಹೆಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಗುರುವಾರ ಸಂಜೆಯೊಳಗೆ ಎಲ್ಲಾ ಮೀನುಗಾರರು ದಡಕ್ಕೆ ಮರಳಿದ್ಧಾರೆ ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪಿ ಕೆ ಜೆನಾ ತಿಳಿಸಿದ್ದಾರೆ.</p>.<p>ಗುರುವಾರ ಸಂಜೆ ಬಿಡುಗಡೆಯಾದ ಐಎಂಡಿ ಬುಲೆಟಿನ್ ಪ್ರಕಾರ, ಮಾರುತಗಳು ವಾಯುವ್ಯದ ಕಡೆಗೆ ಚಲಿಸಲಿದ್ದು, ಸಂಜೆ 5.30ರ ಹೊತ್ತಿಗೆ ವಿಶಾಖಪಟ್ಟಣದಿಂದ ಸುಮಾರು 960 ಕಿ.ಮೀ ದೂರದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿವೆ.</p>.<p>ಶುಕ್ರವಾರದಿಂದ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಶನಿವಾರ ಒಡಿಶಾ ಕರಾವಳಿಯ ಸಮೀಪದಲ್ಲಿ ಚಂಡಮಾರುತವು 100 ಕಿಮೀ ವೇಗವನ್ನು ಪಡೆಯುತ್ತದೆ ಎಂದು ಮುನ್ಸೂಚನೆ ತಿಳಿಸಿದೆ.</p>.<p>ಪ್ರಸ್ತುತ ವಾಯುಭಾರ ಕುಸಿತದಿಂದಾಗಿ ಶುಕ್ರವಾರ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಬುಲೆಟಿನ್ ಹೇಳಿದೆ.</p>.<p>ಈ ವ್ಯವಸ್ಥೆಯು ಆರಂಭದಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುತ್ತದೆ ಮತ್ತು ಡಿಸೆಂಬರ್ 4 ರ ಸಂಜೆಯವರೆಗೆ ಈಶಾನ್ಯ ಮತ್ತು ವಾಯುವ್ಯಕ್ಕೆ ಚಲನೆಯನ್ನು ಕ್ರಮೇಣ ಬದಲಾವಣೆಗಳನ್ನು ಹೊಂದಿರುತ್ತದೆ ಎಂದು ಅದು ಹೇಳಿದೆ.</p>.<p>ನಂತರ ಮಾರುತಗಳು ಉತ್ತರ-ಈಶಾನ್ಯಕ್ಕೆ ಮಾರ್ಗ ಬದಲಿಸುತ್ತವೆ. ಡಿಸೆಂಬರ್ 4 ರ ತಡರಾತ್ರಿ ಉತ್ತರ ಆಂಧ್ರಪ್ರದೇಶ-ದಕ್ಷಿಣ ಒಡಿಶಾ ಕರಾವಳಿಯನ್ನು ದಾಟುತ್ತವೆ ಎಂದು ಅದು ತಿಳಿಸಿದೆ.</p>.<p>ಒಡಿಶಾ ವಿಶೇಷ ಪರಿಹಾರ ಆಯುಕ್ತ (ಎಸ್ಆರ್ಸಿ) ಪಿ ಕೆ ಜೆನಾ ಮಾತನಾಡಿ, ರಾಜ್ಯ ಸರ್ಕಾರವು ಎನ್ಡಿಆರ್ಎಫ್ನ 17, ಒಡಿಆರ್ಎಫ್ನ 60 ಮತ್ತು ಅಗ್ನಿಶಾಮಕ ದಳದ 172 ಸದಸ್ಯರನ್ನು ಒಳಗೊಂಡ 249 ತಂಡಗಳನ್ನು ಸಿದ್ಧಪಡಿಸಿದೆ ಮತ್ತು ಅವುಗಳನ್ನು ಜಿಲ್ಲೆಗಳಿಗೆ ನಿಯೋಜಿಸಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>