<p>ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕೇಂದ್ರ ಸರ್ಕಾರಿ ನೌಕರರ ಹೆಚ್ಚುವರಿ ತುಟ್ಟಿ ಭತ್ಯೆ (ಡಿ.ಎ.) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿ.ಆರ್.) ಅನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. </p><p>ಪ್ರಸ್ತುತ ತುಟ್ಟಿ ಭತ್ಯೆ/ಪರಿಹಾರ ಮೊತ್ತವು ಮೂಲ ವೇತನ/ಪಿಂಚಣಿಯ ಶೇ 55ರಷ್ಟಿದ್ದು ಈಗ ಶೇ 3 ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು.</p><p>ಬೆಲೆ ಏರಿಕೆಯನ್ನು ಸರಿದೂಗಿಸಲು ಈ ವರ್ಷದ ಜುಲೈ 1ರಿಂದ ಈ ಹೆಚ್ಚಳವು ಪೂರ್ವಾನ್ವಯವಾಗಲಿದೆ.</p><p>ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕವಾಗಿ ₹10083.96 ಕೋಟಿ ಹೊರೆ ಬೀಳಲಿದೆ. ಈ ಹೆಚ್ಚಳದಿಂದಾಗಿ ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p><p>ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದೂ ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕೇಂದ್ರ ಸರ್ಕಾರಿ ನೌಕರರ ಹೆಚ್ಚುವರಿ ತುಟ್ಟಿ ಭತ್ಯೆ (ಡಿ.ಎ.) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿ.ಆರ್.) ಅನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. </p><p>ಪ್ರಸ್ತುತ ತುಟ್ಟಿ ಭತ್ಯೆ/ಪರಿಹಾರ ಮೊತ್ತವು ಮೂಲ ವೇತನ/ಪಿಂಚಣಿಯ ಶೇ 55ರಷ್ಟಿದ್ದು ಈಗ ಶೇ 3 ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು.</p><p>ಬೆಲೆ ಏರಿಕೆಯನ್ನು ಸರಿದೂಗಿಸಲು ಈ ವರ್ಷದ ಜುಲೈ 1ರಿಂದ ಈ ಹೆಚ್ಚಳವು ಪೂರ್ವಾನ್ವಯವಾಗಲಿದೆ.</p><p>ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕವಾಗಿ ₹10083.96 ಕೋಟಿ ಹೊರೆ ಬೀಳಲಿದೆ. ಈ ಹೆಚ್ಚಳದಿಂದಾಗಿ ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p><p>ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದೂ ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>