<p><strong>ಮುಂಬೈ</strong>: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.</p>.<p>2013ರ ಆಗಸ್ಟ್ 20ರಂದು ಪುಣೆಯಲ್ಲಿ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಯಾಗಿತ್ತು.ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್ ಕಲಸ್ಕರ್ರಿಗೆ ನೆರವಾಗಿದ್ದ ಆರೋಪದಡಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.</p>.<p>ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂದೆ ಮತ್ತು ಮನೀಶ್ ಪಿತಾಳೆ ಅವರನ್ನು ಒಳಗೊಂಡ ವಿಭಾಗೀಯ ಪೀಠವು ₹1 ಲಕ್ಷದ ಶ್ಯೂರಿಟಿ ಬರೆಸಿಕೊಂಡು ಜಾಮೀನು ನೀಡಿದ್ದಾರೆ. ಅಲ್ಲದೆ ಮೊದಲ ತಿಂಗಳಿನಲ್ಲಿ ಪ್ರತಿನಿತ್ಯ ಮತ್ತು ಎರಡನೇ ತಿಂಗಳಿನಲ್ಲಿ ಪ್ರತಿ ಎರಡು ದಿನಗಳಿಗೊಮ್ಮೆ ಪುಣೆಯ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆ ಪೀಠ ಸೂಚಿಸಿದೆ.</p>.<p>ದಾಭೋಲ್ಕರ್ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮತ್ತು ಯಾವುದೇ ಪುರಾವೆಗಳು ನಾಶ ಮಾಡದಂತೆ ಭಾವೆಗೆ ಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆಯೂ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.</p>.<p>2013ರ ಆಗಸ್ಟ್ 20ರಂದು ಪುಣೆಯಲ್ಲಿ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಯಾಗಿತ್ತು.ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್ ಕಲಸ್ಕರ್ರಿಗೆ ನೆರವಾಗಿದ್ದ ಆರೋಪದಡಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.</p>.<p>ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂದೆ ಮತ್ತು ಮನೀಶ್ ಪಿತಾಳೆ ಅವರನ್ನು ಒಳಗೊಂಡ ವಿಭಾಗೀಯ ಪೀಠವು ₹1 ಲಕ್ಷದ ಶ್ಯೂರಿಟಿ ಬರೆಸಿಕೊಂಡು ಜಾಮೀನು ನೀಡಿದ್ದಾರೆ. ಅಲ್ಲದೆ ಮೊದಲ ತಿಂಗಳಿನಲ್ಲಿ ಪ್ರತಿನಿತ್ಯ ಮತ್ತು ಎರಡನೇ ತಿಂಗಳಿನಲ್ಲಿ ಪ್ರತಿ ಎರಡು ದಿನಗಳಿಗೊಮ್ಮೆ ಪುಣೆಯ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆ ಪೀಠ ಸೂಚಿಸಿದೆ.</p>.<p>ದಾಭೋಲ್ಕರ್ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮತ್ತು ಯಾವುದೇ ಪುರಾವೆಗಳು ನಾಶ ಮಾಡದಂತೆ ಭಾವೆಗೆ ಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆಯೂ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>