ಪುಣೆ(ಪಿಟಿಐ): ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶೂಟರ್ಗಳಾದ ಶರದ್ ಕಲಾಸ್ಕರ್ ಹಾಗೂ ಸಚಿನ್ ಅಂದೂರೆ ಅವರನ್ನು ಪ್ರತ್ಯಕ್ಷದರ್ಶಿ ಗುರುತಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಸಂಬಂಧ ಶನಿವಾರ ಮಾತನಾಡಿದ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಸೂರ್ಯವಂಶಿ ಅವರು, 'ಪುಣೆ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಕಿರಣ್ ಕಾಂಬ್ಳೆ(46) ಅವರು ಶೂಟರ್ಗಳಾದ ಕಲಾಸ್ಕರ್ ಮತ್ತು ಅಂದೂರೆ ಅವರನ್ನು ನ್ಯಾಯಾಲಯದಲ್ಲಿ ಗುರುತಿಸಿದ್ದಾರೆ' ಎಂದು ಹೇಳಿದ್ದಾರೆ.
ವಿಚಾರಣೆ ವೇಳೆ ಪೊಲೀಸ್ ಹೇಳಿಕೆ ದಾಖಲಿಸಲು ವಿಳಂಬ ಮಾಡಿದ್ದ ಬಗ್ಗೆ ಕಾಂಬ್ಳೆ ಅವರಿಗೆ ಪ್ರಶ್ನಿಸಲಾಗಿದೆ ಎಂದು ಹೇಳಿದ್ದಾರೆ. ಮಾರ್ಚ್ 23ರಂದು ವಿಚಾರಣೆ ಮುಂದುವರಿಯಲಿದೆ. 2013ರ ಆಗಸ್ಟ್ 20ರಂದು ವಿಚಾರವಾದಿ ಹಾಗೂ ಮೂಢನಂಬಿಕೆ ವಿರೋಧಿಯಾಗಿದ್ದ ದಾಬೋಲ್ಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.