<p><strong>ಚೆನ್ನೈ</strong>: ನೀಟ್ ರದ್ದುಗೊಳಿಸುವುದರ 'ರಹಸ್ಯ'ವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸ್ಪಷ್ಟಪಡಿಸಬೇಕು ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಅಪ್ಪ, ಮಗ ನೀಟ್ ರಹಸ್ಯವನ್ನು ತಕ್ಷಣ ಬಹಿರಂಗಪಡಿಸಬೇಕು. ಹಾಗೆ ಮಾಡದಿದ್ದರೆ, ಡಿಎಂಕೆ ಸುಳ್ಳು ಹೇಳಿದೆ ಎಂಬ ಸತ್ಯವನ್ನು ಅವರು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.</p><p>ನೀಟ್ ರದ್ದು ಮಾಡಲಾಗುವುದು ಎನ್ನುವ ಸುಳ್ಳು ಭರವಸೆಗಳನ್ನು ಸೃಷ್ಟಿಸುವ ಮೂಲಕ ವಿದ್ಯಾರ್ಥಿಗಳನ್ನು ಗೊಂದಲದಲ್ಲಿ ಇರಿಸಲಾಗಿದೆ. ಆಡಳಿತ ಪಕ್ಷವು ತನ್ನ ನೀಟ್ ರಹಸ್ಯವನ್ನು ಬಹಿರಂಗಪಡಿಸಿಲ್ಲ ಎಂದು ಪಳನಿಸ್ವಾಮಿ ದೂಷಿಸಿದ್ದಾರೆ.</p><p>ನೀಟ್ ಸಂಬಂಧಿತ ವಿದ್ಯಾರ್ಥಿಗಳ ಸಾವುಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p><p>2021ರ ವಿಧಾನಸಭಾ ಚುನಾವಣೆಗೂ ಮುನ್ನ, ಡಿಎಂಕೆ ನೀಟ್ ರದ್ದುಗೊಳಿಸುವುದಾಗಿ ಭರವಸೆ ನೀಡಿತ್ತು. ಡಿಎಂಕೆ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಪರೀಕ್ಷೆಯನ್ನು ರದ್ದುಗೊಳಿಸುವ ರಹಸ್ಯ ತಮ್ಮ ಪಕ್ಷಕ್ಕೆ ತಿಳಿದಿದೆ ಎಂದು ಹೇಳಿದ್ದರು .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ನೀಟ್ ರದ್ದುಗೊಳಿಸುವುದರ 'ರಹಸ್ಯ'ವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸ್ಪಷ್ಟಪಡಿಸಬೇಕು ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಅಪ್ಪ, ಮಗ ನೀಟ್ ರಹಸ್ಯವನ್ನು ತಕ್ಷಣ ಬಹಿರಂಗಪಡಿಸಬೇಕು. ಹಾಗೆ ಮಾಡದಿದ್ದರೆ, ಡಿಎಂಕೆ ಸುಳ್ಳು ಹೇಳಿದೆ ಎಂಬ ಸತ್ಯವನ್ನು ಅವರು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.</p><p>ನೀಟ್ ರದ್ದು ಮಾಡಲಾಗುವುದು ಎನ್ನುವ ಸುಳ್ಳು ಭರವಸೆಗಳನ್ನು ಸೃಷ್ಟಿಸುವ ಮೂಲಕ ವಿದ್ಯಾರ್ಥಿಗಳನ್ನು ಗೊಂದಲದಲ್ಲಿ ಇರಿಸಲಾಗಿದೆ. ಆಡಳಿತ ಪಕ್ಷವು ತನ್ನ ನೀಟ್ ರಹಸ್ಯವನ್ನು ಬಹಿರಂಗಪಡಿಸಿಲ್ಲ ಎಂದು ಪಳನಿಸ್ವಾಮಿ ದೂಷಿಸಿದ್ದಾರೆ.</p><p>ನೀಟ್ ಸಂಬಂಧಿತ ವಿದ್ಯಾರ್ಥಿಗಳ ಸಾವುಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p><p>2021ರ ವಿಧಾನಸಭಾ ಚುನಾವಣೆಗೂ ಮುನ್ನ, ಡಿಎಂಕೆ ನೀಟ್ ರದ್ದುಗೊಳಿಸುವುದಾಗಿ ಭರವಸೆ ನೀಡಿತ್ತು. ಡಿಎಂಕೆ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಪರೀಕ್ಷೆಯನ್ನು ರದ್ದುಗೊಳಿಸುವ ರಹಸ್ಯ ತಮ್ಮ ಪಕ್ಷಕ್ಕೆ ತಿಳಿದಿದೆ ಎಂದು ಹೇಳಿದ್ದರು .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>