<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಭಾರತ ಮತ್ತು ಚೀನಾ ನಡುವೆ ವಾಣಿಜ್ಯ ಸಂಬಂಧ ಅಭಿವೃದ್ಧಿಪಡಿಸುವ ಉದ್ದೇಶದಿಂದ ಐದು ವರ್ಷಗಳ ಬಳಿಕ ಭಾರತದ ವಾಣಿಜ್ಯ ಮಂಡಳಿಗಳ ನಿಯೋಗವು ಚೀನಾಕ್ಕೆ ಭೇಟಿ ನೀಡಿದೆ. </p>.5 ವರ್ಷಗಳ ಬಳಿಕ ಚೀನಾಗೆ ಭಾರತ ವ್ಯಾಪಾರ ನಿಯೋಗ ಭೇಟಿ.<p>ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಕೇರಳ ವಿಧಾನಸಭೆ ಚುನಾವಣೆಗೆ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ನಿರ್ಗತಿಕ ಮಹಿಳೆಯರು ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರ್ಥಿಕ ಸಹಾಯ, ಬಡ ಕುಟುಂಬಗಳಿಗೆ ವರ್ಷಕ್ಕೆ ಎರಡು ಉಚಿತ ಎಲ್ಪಿಜಿ ಸಿಲಿಂಡರ್ಗಳು, ಕೇರಳಕ್ಕೆ ಏಮ್ಸ್ ಮತ್ತು ರಾಜ್ಯದ ಪೂಜಾ ಸ್ಥಳಗಳ ರಕ್ಷಣೆ ಭರವಸೆ ನೀಡಲಾಗಿದೆ.</p>.Kerala Election: ವರ್ಷಕ್ಕೆರಡು ಉಚಿತ ಸಿಲಿಂಡರ್ ಸೇರಿ ಎನ್ಡಿಎಯಿಂದ ಹಲವು ಭರವಸೆ.<p>ಹೊರ್ಮುಜ್ ಜಲಸಂಧಿಯು ಬಹುತೇಕ ಬಂದ್ ಆಗಿರುವುದು ಮುಂದುವರಿದರೂ ಇರಾನ್ ವಿರುದ್ಧದ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ತಾನು ಮುಕ್ತನಾಗಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.</p>.ಹೊರ್ಮುಜ್ ಜಲಸಂಧಿ ಮುಚ್ಚಿದ್ದರೂ ಯುದ್ಧ ಅಂತ್ಯಕ್ಕೆ ಟ್ರಂಪ್ ಒಲವು: ವರದಿ.<p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಒಂದು ವೇಳೆ ಜಯ ಸಾಧಿಸಿದರೆ, ಈ ಕ್ಷೇತ್ರದಲ್ಲಿ ಇನ್ನೂ 50 ವರ್ಷ ಮುಸ್ಲಿಮರಿಗೆ ಟಿಕೆಟ್ ಸಿಗುವುದಿಲ್ಲ. ಮುಸ್ಲಿಂ ಸಮುದಾಯದವರು ಎಚ್ಚೆತ್ತುಕೊಂಡು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. </p>.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ.<p>ಪೆರಂಬೂರ್ನಲ್ಲಿ ಪ್ರಚಾರ ನಡೆಸುವಾಗ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ ಪಕ್ಷದ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.ಮಾದರಿ ನೀತಿಸಂಹಿತೆ ಉಲ್ಲಂಘನೆ: ಟಿವಿಕೆ ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪ್ರಕರಣ.<p>ದಕ್ಷಿಣ ಭಾರತದ ಲೇಡಿ ಸೂಪರ್ಸ್ಟಾರ್ ಎಂದೇ ಪ್ರಸಿದ್ಧರಾಗಿರುವ ನಯನತಾರಾ ಅವರು ಸಲ್ಮಾನ್ ಖಾನ್ ಅವರ ಜೊತೆ ಆ್ಯಕ್ಷನ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ನಿರ್ಮಾಣ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ.</p>.ಜವಾನ್ ಬಳಿಕ ಬಾಲಿವುಡ್ ಸಿನಿಮಾದಲ್ಲಿ ನಯನತಾರಾ: ಸಲ್ಲು ಜೊತೆ ಲೇಡಿ ಸೂಪರ್ಸ್ಟಾರ್.<p>‘ಬುಧವಾರದಿಂದ (ಏಪ್ರಿಲ್ 1) ಟೋಲ್, ಔಷಧ ಸೇರಿದಂತೆ ಕೆಲವು ವಸ್ತುಗಳ ಬೆಲೆ ಏರಿಕೆ ಆಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಜನರನ್ನು ಲೂಟಿ ಮಾಡಲು ಹೊರಟಿದೆ’ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಾಗ್ದಾಳಿ ನಡೆಸಿದರು.</p>.ಕೇಂದ್ರದ ಬಿಜೆಪಿ ಸರ್ಕಾರ ಲೂಟಿ ಮಾಡಲು ಹೊರಟಿದೆ: ‘ಕೈ’ ಉಸ್ತುವಾರಿ ಸುರ್ಜೇವಾಲಾ.<p>ಇನ್ನು ಮುಂದೆ ಸರ್ಕಾರಿ ನೌಕರರು ಹುದ್ದೆಯಲ್ಲಿ ಮುಂಬಡ್ತಿ ಪಡೆಯಲು ಸೇವಾನುಭವ ಅಥವಾ ಸೇವಾ ಜೇಷ್ಠತೆ ಒಂದೇ ಮಾನದಂಡವಲ್ಲ. ಅಗತ್ಯವಾದ ತರಬೇತಿ ಪಡೆಯುವುದೂ ಕಡ್ಡಾಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p>.ಸರ್ಕಾರಿ ನೌಕರರ ಮುಂಬಡ್ತಿಗೆ ಇನ್ನು ತರಬೇತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ.<p>ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯಿಂದಾಗಿ, ವಸತಿ ನಿಲಯದಲ್ಲಿ ಸಿಲುಕಿದ್ದ 30 ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರು ಸೇರಿದಂತೆ 34 ಮಂದಿಯನ್ನು ಸೇನಾ ಯೋಧರು ರಕ್ಷಿಸಿದ್ದಾರೆ.</p>.ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ: 34 ಮಂದಿ ರಕ್ಷಿಸಿದ ಸೇನೆ.<p>ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನೆಚ್ಚಿನ ಅವಾಚ್ಯ ಪದಗಳನ್ನು ಬಳಸದೆ ಲೋಕಸಭೆಯಲ್ಲಿ 90 ನಿಮಿಷ ಅಬ್ಬರದ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ವ್ಯಂಗ್ಯವಾಡಿದೆ.</p>.ಅಮಿತ್ ಶಾ ‘ಪವಾಡ’: ಕಾಂಗ್ರೆಸ್ ವ್ಯಂಗ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಭಾರತ ಮತ್ತು ಚೀನಾ ನಡುವೆ ವಾಣಿಜ್ಯ ಸಂಬಂಧ ಅಭಿವೃದ್ಧಿಪಡಿಸುವ ಉದ್ದೇಶದಿಂದ ಐದು ವರ್ಷಗಳ ಬಳಿಕ ಭಾರತದ ವಾಣಿಜ್ಯ ಮಂಡಳಿಗಳ ನಿಯೋಗವು ಚೀನಾಕ್ಕೆ ಭೇಟಿ ನೀಡಿದೆ. </p>.5 ವರ್ಷಗಳ ಬಳಿಕ ಚೀನಾಗೆ ಭಾರತ ವ್ಯಾಪಾರ ನಿಯೋಗ ಭೇಟಿ.<p>ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಕೇರಳ ವಿಧಾನಸಭೆ ಚುನಾವಣೆಗೆ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ನಿರ್ಗತಿಕ ಮಹಿಳೆಯರು ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರ್ಥಿಕ ಸಹಾಯ, ಬಡ ಕುಟುಂಬಗಳಿಗೆ ವರ್ಷಕ್ಕೆ ಎರಡು ಉಚಿತ ಎಲ್ಪಿಜಿ ಸಿಲಿಂಡರ್ಗಳು, ಕೇರಳಕ್ಕೆ ಏಮ್ಸ್ ಮತ್ತು ರಾಜ್ಯದ ಪೂಜಾ ಸ್ಥಳಗಳ ರಕ್ಷಣೆ ಭರವಸೆ ನೀಡಲಾಗಿದೆ.</p>.Kerala Election: ವರ್ಷಕ್ಕೆರಡು ಉಚಿತ ಸಿಲಿಂಡರ್ ಸೇರಿ ಎನ್ಡಿಎಯಿಂದ ಹಲವು ಭರವಸೆ.<p>ಹೊರ್ಮುಜ್ ಜಲಸಂಧಿಯು ಬಹುತೇಕ ಬಂದ್ ಆಗಿರುವುದು ಮುಂದುವರಿದರೂ ಇರಾನ್ ವಿರುದ್ಧದ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ತಾನು ಮುಕ್ತನಾಗಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.</p>.ಹೊರ್ಮುಜ್ ಜಲಸಂಧಿ ಮುಚ್ಚಿದ್ದರೂ ಯುದ್ಧ ಅಂತ್ಯಕ್ಕೆ ಟ್ರಂಪ್ ಒಲವು: ವರದಿ.<p>‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಒಂದು ವೇಳೆ ಜಯ ಸಾಧಿಸಿದರೆ, ಈ ಕ್ಷೇತ್ರದಲ್ಲಿ ಇನ್ನೂ 50 ವರ್ಷ ಮುಸ್ಲಿಮರಿಗೆ ಟಿಕೆಟ್ ಸಿಗುವುದಿಲ್ಲ. ಮುಸ್ಲಿಂ ಸಮುದಾಯದವರು ಎಚ್ಚೆತ್ತುಕೊಂಡು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. </p>.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ.<p>ಪೆರಂಬೂರ್ನಲ್ಲಿ ಪ್ರಚಾರ ನಡೆಸುವಾಗ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ ಪಕ್ಷದ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.ಮಾದರಿ ನೀತಿಸಂಹಿತೆ ಉಲ್ಲಂಘನೆ: ಟಿವಿಕೆ ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪ್ರಕರಣ.<p>ದಕ್ಷಿಣ ಭಾರತದ ಲೇಡಿ ಸೂಪರ್ಸ್ಟಾರ್ ಎಂದೇ ಪ್ರಸಿದ್ಧರಾಗಿರುವ ನಯನತಾರಾ ಅವರು ಸಲ್ಮಾನ್ ಖಾನ್ ಅವರ ಜೊತೆ ಆ್ಯಕ್ಷನ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ನಿರ್ಮಾಣ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ.</p>.ಜವಾನ್ ಬಳಿಕ ಬಾಲಿವುಡ್ ಸಿನಿಮಾದಲ್ಲಿ ನಯನತಾರಾ: ಸಲ್ಲು ಜೊತೆ ಲೇಡಿ ಸೂಪರ್ಸ್ಟಾರ್.<p>‘ಬುಧವಾರದಿಂದ (ಏಪ್ರಿಲ್ 1) ಟೋಲ್, ಔಷಧ ಸೇರಿದಂತೆ ಕೆಲವು ವಸ್ತುಗಳ ಬೆಲೆ ಏರಿಕೆ ಆಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಜನರನ್ನು ಲೂಟಿ ಮಾಡಲು ಹೊರಟಿದೆ’ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಾಗ್ದಾಳಿ ನಡೆಸಿದರು.</p>.ಕೇಂದ್ರದ ಬಿಜೆಪಿ ಸರ್ಕಾರ ಲೂಟಿ ಮಾಡಲು ಹೊರಟಿದೆ: ‘ಕೈ’ ಉಸ್ತುವಾರಿ ಸುರ್ಜೇವಾಲಾ.<p>ಇನ್ನು ಮುಂದೆ ಸರ್ಕಾರಿ ನೌಕರರು ಹುದ್ದೆಯಲ್ಲಿ ಮುಂಬಡ್ತಿ ಪಡೆಯಲು ಸೇವಾನುಭವ ಅಥವಾ ಸೇವಾ ಜೇಷ್ಠತೆ ಒಂದೇ ಮಾನದಂಡವಲ್ಲ. ಅಗತ್ಯವಾದ ತರಬೇತಿ ಪಡೆಯುವುದೂ ಕಡ್ಡಾಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p>.ಸರ್ಕಾರಿ ನೌಕರರ ಮುಂಬಡ್ತಿಗೆ ಇನ್ನು ತರಬೇತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ.<p>ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯಿಂದಾಗಿ, ವಸತಿ ನಿಲಯದಲ್ಲಿ ಸಿಲುಕಿದ್ದ 30 ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರು ಸೇರಿದಂತೆ 34 ಮಂದಿಯನ್ನು ಸೇನಾ ಯೋಧರು ರಕ್ಷಿಸಿದ್ದಾರೆ.</p>.ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ: 34 ಮಂದಿ ರಕ್ಷಿಸಿದ ಸೇನೆ.<p>ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನೆಚ್ಚಿನ ಅವಾಚ್ಯ ಪದಗಳನ್ನು ಬಳಸದೆ ಲೋಕಸಭೆಯಲ್ಲಿ 90 ನಿಮಿಷ ಅಬ್ಬರದ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ವ್ಯಂಗ್ಯವಾಡಿದೆ.</p>.ಅಮಿತ್ ಶಾ ‘ಪವಾಡ’: ಕಾಂಗ್ರೆಸ್ ವ್ಯಂಗ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>