<p>ಇರಾನ್ ಯುದ್ಧ, ರಾಜ್ಯ, ರಾಷ್ಟ್ರೀಯ, ಸಿನಿಮಾ, ಕ್ರೀಡೆ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಪರಿಹರಿಸಲು ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನ ಸಂಧಾನಕಾರನಾಗಿ ಹೊರಹೊಮ್ಮಿದ್ದನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬೆಳವಣಿಗೆಯು ಸ್ವಯಂ ಘೋಷಿತ ವಿಶ್ವಗುರುವಿನ ಅಪ್ಪುಗೆಯ ರಾಜತಾಂತ್ರಿಕತೆಯ ಪ್ರಯೋಜನಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ಕುಟುಕಿದೆ.</p>.ಸ್ವಯಂ ಘೋಷಿತ ವಿಶ್ವಗುರು ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ: ಕಾಂಗ್ರೆಸ್.<p>ಕಾಸರಗೋಡು ತಾಲ್ಲೂಕಿನಲ್ಲಿ ಸರ್ಕಾರಿ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನು ಬಳಸಲು ಅನುಮತಿ ನೀಡುವ 1982ರ ಸುತ್ತೋಲೆಯನ್ನು ಜಾರಿಗೆ ತರಬೇಕೆಂದು ಕೋರಿ ಸಲ್ಲಿಕೆಯಾಗಿರುವ ಮನವಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುವಂತೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.</p>.ಕಾಸರಗೋಡಿನಲ್ಲಿ ಕನ್ನಡ ಬಳಕೆ: ಪರಿಶೀಲನೆ ನಡೆಸಿ ಎಂದ ಕೇರಳ ಹೈಕೋರ್ಟ್.<p>ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಪತ್ರಕರ್ತರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪತ್ರಕರ್ತರು ಕೇವಲ ಸುದ್ದಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ಕಡೊಬೇಕು. ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರು ಪತ್ರಕರ್ತರಾಗಿದ್ದರು. ಇಬ್ಬರೂ ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದರು. ಅದೇ ರೀತಿ ಈಗಿನ ಪತ್ರಕರ್ತರೂ ಕೂಡ ಧ್ವನಿ ಇಲ್ಲದವರ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.ಪತ್ರಕರ್ತರ ಸಮ್ಮೇಳನ: ಧ್ವನಿ ಇಲ್ಲದವರಿಗೆ ಪತ್ರಕರ್ತರು ಧ್ವನಿಯಾಗಲಿ; ಸಿದ್ದರಾಮಯ್ಯ.<p>ಸುಳ್ಳು ಪ್ರಮಾಣ ಪತ್ರಗಳ ಮೂಲಕ ಭವಾನಿಪುರದಲ್ಲಿ ನನ್ನ ಉಮೇದುವಾರಿಕೆಯನ್ನು ಅಸಿಂಧುಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.</p>.ನನ್ನ ಉಮೇದುವಾರಿಕೆಯನ್ನು ಅಸಿಂಧುಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಮಮತಾ.<p>ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಮುಂದಾಗಿರುವ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.</p><p>ಹಂತ-ಹಂತವಾಗಿ ಪೆಟ್ರೋಲ್ ವಾಹನಗಳು ರಸ್ತೆಗಿಳಿಯುವುದನ್ನು ತಪ್ಪಿಸಲು ನೂತನ 'ಎಲೆಕ್ಟ್ರಿಕ್ ವಾಹನ (ಇ.ವಿ) ನೀತಿ 2026-2030' ಕರಡನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ 2028ರಿಂದ ದೆಹಲಿಯಲ್ಲಿ ಪೆಟ್ರೋಲ್ ಚಾಲಿತ ದ್ವಿಚಕ್ರ ವಾಹನಗಳ ನೋಂದಣಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಉದ್ದೇಶಿಸಲಾಗಿದೆ.</p>.ಮಾಲಿನ್ಯ ಮುಕ್ತದತ್ತ ದೆಹಲಿ ಹೆಜ್ಜೆ: ಹಂತ ಹಂತವಾಗಿ ಪೆಟ್ರೋಲ್ ವಾಹನ ನೋಂದಣಿ ರದ್ದು.<p>ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿನ ಮಾಣಿಕ್ಯಧಾರಾ ಜಲಪಾತದ ಬಳಿ ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಕೇರಳದ ವಿದ್ಯಾರ್ಥಿನಿ ಶ್ರೀನಂದಾಳ (16) ಅಂತ್ಯಕ್ರಿಯೆ ಇಂದು ಹುಟ್ಟೂರಲ್ಲಿ ನೆರವೇರಿತು.</p><p>ಕೇರಳದ ಪಾಲಕ್ಕಾಡ್ ಬಳಿಯ ಕಾಡಂಬಪುರಂ ಶ್ರೀನಂದಾ ಸ್ವಗ್ರಾಮ. ನೂರಾರು ಬಂಧುಗಳು, ಸ್ನೇಹಿತರು ಶ್ರೀನಂದಾಳ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.</p>.ಚಿಕ್ಕಮಗಳೂರು ಪ್ರವಾಸಕ್ಕೆ ಬಂದು ಸಾವು: ತವರೂರಲ್ಲಿ ಕೇರಳದ ಶ್ರೀನಂದಾ ಅಂತ್ಯಕ್ರಿಯೆ.<p>ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೆರೆ ಮತುವಾ, ನಮಸುದ್ರ ಹಾಗೂ ಇನ್ನಿತರ ನಿರಾಶ್ರಿತ ಸಮುದಾಯಗಳಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಅಲ್ಲದೆ ನುಸುಳುಕೋರರು ಗಂಟು ಮೂಟೆ ಕಟ್ಟಿ ಎಂದು ಎಚ್ಚರಿಕೆ ನೀಡಿದ್ದಾರೆ.</p>.ಗಂಟು ಮೂಟೆ ಕಟ್ಟಿ: ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರಿಗೆ ಪ್ರಧಾನಿ ಮೋದಿ ಎಚ್ಚರಿಕೆ.<p>ಕನ್ನಡದ ಕೆವಿಎನ್ ಪ್ರೊಡಕ್ಸನ್ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಒಂದರ ಹಿಂದೊಂದು ಸಂಕಷ್ಟ ಎದುರಾಗುತ್ತಲೇ ಇದೆ.</p><p>ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಸೇರಿದಂತೆ, ಸುಮಾರು ಐದು ನಿಮಿಷಗಳ ತುಣುಕು ಸೋರಿಕೆಯಾಗಿದೆ. ಈ ಕೃತ್ಯಕ್ಕೆ ವಿಜಯ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ನಾನು ಥಿಯೇಟರ್ನಲ್ಲೇ ಜನನಾಯಗನ್ ಸಿನಿಮಾ ನೋಡುತ್ತೇನೆ: ಅಣ್ಣಾಮಲೈ.<p>ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದೊಂದಿಗೆ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಮಾತುಕತೆಗಳು ಪ್ರಾರಂಭವಾಗಿವೆ ಎಂದು ಇರಾನ್ ಮಾಧ್ಯಮಗಳು ಶನಿವಾರ ತಿಳಿಸಿವೆ. ಆದಾಗ್ಯೂ, ಈ ಮಾತುಕತೆಗಳ ಸ್ವರೂಪವು ಇನ್ನೂ ಸ್ಪಷ್ಟವಾಗಿಲ್ಲ.</p>.West Asia War| ತ್ರಿಪಕ್ಷೀಯ ಮಾತುಕತೆ ಆರಂಭ: ಅಮೆರಿಕ, ಇರಾನ್ ನಿಯೋಗ ಭಾಗಿ.<p>ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 17ನೇ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ವಿರುದ್ಧ 6 ವಿಕೆಟ್ಗಳ ಗೆಲುವು ಸಾಧಿಸಿತು.</p>.IPL 2026|ಬೌಲಿಂಗ್ನಲ್ಲಿ ಮತ್ತೆ ಎಡವಿದ SRH: ಗೆಲುವಿನ ಓಟ ಮುಂದುವರಿಸಿದ ಪಂಜಾಬ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇರಾನ್ ಯುದ್ಧ, ರಾಜ್ಯ, ರಾಷ್ಟ್ರೀಯ, ಸಿನಿಮಾ, ಕ್ರೀಡೆ, ಅಂತರರಾಷ್ಟ್ರೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p>ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಪರಿಹರಿಸಲು ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನ ಸಂಧಾನಕಾರನಾಗಿ ಹೊರಹೊಮ್ಮಿದ್ದನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬೆಳವಣಿಗೆಯು ಸ್ವಯಂ ಘೋಷಿತ ವಿಶ್ವಗುರುವಿನ ಅಪ್ಪುಗೆಯ ರಾಜತಾಂತ್ರಿಕತೆಯ ಪ್ರಯೋಜನಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ಕುಟುಕಿದೆ.</p>.ಸ್ವಯಂ ಘೋಷಿತ ವಿಶ್ವಗುರು ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ: ಕಾಂಗ್ರೆಸ್.<p>ಕಾಸರಗೋಡು ತಾಲ್ಲೂಕಿನಲ್ಲಿ ಸರ್ಕಾರಿ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನು ಬಳಸಲು ಅನುಮತಿ ನೀಡುವ 1982ರ ಸುತ್ತೋಲೆಯನ್ನು ಜಾರಿಗೆ ತರಬೇಕೆಂದು ಕೋರಿ ಸಲ್ಲಿಕೆಯಾಗಿರುವ ಮನವಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುವಂತೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.</p>.ಕಾಸರಗೋಡಿನಲ್ಲಿ ಕನ್ನಡ ಬಳಕೆ: ಪರಿಶೀಲನೆ ನಡೆಸಿ ಎಂದ ಕೇರಳ ಹೈಕೋರ್ಟ್.<p>ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಪತ್ರಕರ್ತರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪತ್ರಕರ್ತರು ಕೇವಲ ಸುದ್ದಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ಕಡೊಬೇಕು. ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರು ಪತ್ರಕರ್ತರಾಗಿದ್ದರು. ಇಬ್ಬರೂ ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದರು. ಅದೇ ರೀತಿ ಈಗಿನ ಪತ್ರಕರ್ತರೂ ಕೂಡ ಧ್ವನಿ ಇಲ್ಲದವರ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.ಪತ್ರಕರ್ತರ ಸಮ್ಮೇಳನ: ಧ್ವನಿ ಇಲ್ಲದವರಿಗೆ ಪತ್ರಕರ್ತರು ಧ್ವನಿಯಾಗಲಿ; ಸಿದ್ದರಾಮಯ್ಯ.<p>ಸುಳ್ಳು ಪ್ರಮಾಣ ಪತ್ರಗಳ ಮೂಲಕ ಭವಾನಿಪುರದಲ್ಲಿ ನನ್ನ ಉಮೇದುವಾರಿಕೆಯನ್ನು ಅಸಿಂಧುಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.</p>.ನನ್ನ ಉಮೇದುವಾರಿಕೆಯನ್ನು ಅಸಿಂಧುಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಮಮತಾ.<p>ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಮುಂದಾಗಿರುವ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.</p><p>ಹಂತ-ಹಂತವಾಗಿ ಪೆಟ್ರೋಲ್ ವಾಹನಗಳು ರಸ್ತೆಗಿಳಿಯುವುದನ್ನು ತಪ್ಪಿಸಲು ನೂತನ 'ಎಲೆಕ್ಟ್ರಿಕ್ ವಾಹನ (ಇ.ವಿ) ನೀತಿ 2026-2030' ಕರಡನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ 2028ರಿಂದ ದೆಹಲಿಯಲ್ಲಿ ಪೆಟ್ರೋಲ್ ಚಾಲಿತ ದ್ವಿಚಕ್ರ ವಾಹನಗಳ ನೋಂದಣಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಉದ್ದೇಶಿಸಲಾಗಿದೆ.</p>.ಮಾಲಿನ್ಯ ಮುಕ್ತದತ್ತ ದೆಹಲಿ ಹೆಜ್ಜೆ: ಹಂತ ಹಂತವಾಗಿ ಪೆಟ್ರೋಲ್ ವಾಹನ ನೋಂದಣಿ ರದ್ದು.<p>ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿನ ಮಾಣಿಕ್ಯಧಾರಾ ಜಲಪಾತದ ಬಳಿ ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಕೇರಳದ ವಿದ್ಯಾರ್ಥಿನಿ ಶ್ರೀನಂದಾಳ (16) ಅಂತ್ಯಕ್ರಿಯೆ ಇಂದು ಹುಟ್ಟೂರಲ್ಲಿ ನೆರವೇರಿತು.</p><p>ಕೇರಳದ ಪಾಲಕ್ಕಾಡ್ ಬಳಿಯ ಕಾಡಂಬಪುರಂ ಶ್ರೀನಂದಾ ಸ್ವಗ್ರಾಮ. ನೂರಾರು ಬಂಧುಗಳು, ಸ್ನೇಹಿತರು ಶ್ರೀನಂದಾಳ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.</p>.ಚಿಕ್ಕಮಗಳೂರು ಪ್ರವಾಸಕ್ಕೆ ಬಂದು ಸಾವು: ತವರೂರಲ್ಲಿ ಕೇರಳದ ಶ್ರೀನಂದಾ ಅಂತ್ಯಕ್ರಿಯೆ.<p>ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೆರೆ ಮತುವಾ, ನಮಸುದ್ರ ಹಾಗೂ ಇನ್ನಿತರ ನಿರಾಶ್ರಿತ ಸಮುದಾಯಗಳಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಅಲ್ಲದೆ ನುಸುಳುಕೋರರು ಗಂಟು ಮೂಟೆ ಕಟ್ಟಿ ಎಂದು ಎಚ್ಚರಿಕೆ ನೀಡಿದ್ದಾರೆ.</p>.ಗಂಟು ಮೂಟೆ ಕಟ್ಟಿ: ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರಿಗೆ ಪ್ರಧಾನಿ ಮೋದಿ ಎಚ್ಚರಿಕೆ.<p>ಕನ್ನಡದ ಕೆವಿಎನ್ ಪ್ರೊಡಕ್ಸನ್ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಒಂದರ ಹಿಂದೊಂದು ಸಂಕಷ್ಟ ಎದುರಾಗುತ್ತಲೇ ಇದೆ.</p><p>ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಸೇರಿದಂತೆ, ಸುಮಾರು ಐದು ನಿಮಿಷಗಳ ತುಣುಕು ಸೋರಿಕೆಯಾಗಿದೆ. ಈ ಕೃತ್ಯಕ್ಕೆ ವಿಜಯ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ನಾನು ಥಿಯೇಟರ್ನಲ್ಲೇ ಜನನಾಯಗನ್ ಸಿನಿಮಾ ನೋಡುತ್ತೇನೆ: ಅಣ್ಣಾಮಲೈ.<p>ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಅಮೆರಿಕದೊಂದಿಗೆ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಮಾತುಕತೆಗಳು ಪ್ರಾರಂಭವಾಗಿವೆ ಎಂದು ಇರಾನ್ ಮಾಧ್ಯಮಗಳು ಶನಿವಾರ ತಿಳಿಸಿವೆ. ಆದಾಗ್ಯೂ, ಈ ಮಾತುಕತೆಗಳ ಸ್ವರೂಪವು ಇನ್ನೂ ಸ್ಪಷ್ಟವಾಗಿಲ್ಲ.</p>.West Asia War| ತ್ರಿಪಕ್ಷೀಯ ಮಾತುಕತೆ ಆರಂಭ: ಅಮೆರಿಕ, ಇರಾನ್ ನಿಯೋಗ ಭಾಗಿ.<p>ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 17ನೇ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ವಿರುದ್ಧ 6 ವಿಕೆಟ್ಗಳ ಗೆಲುವು ಸಾಧಿಸಿತು.</p>.IPL 2026|ಬೌಲಿಂಗ್ನಲ್ಲಿ ಮತ್ತೆ ಎಡವಿದ SRH: ಗೆಲುವಿನ ಓಟ ಮುಂದುವರಿಸಿದ ಪಂಜಾಬ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>