<p><strong>ಲೇಹ್: </strong>ಲಡಾಖ್ನ ಖರ್ದುಂಗ್ ಲಾ ಪಾಸ್ ಸೇರಿದಂತೆ ಅನೇಕ ಋತುವಿನ ಮೊದಲ ಹಿಮಪಾತವಾಗಿದೆ. ಬಯಲು ಪ್ರದೇಶಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಇದರ ಪರಿಣಾಮ ಕಳೆದ ತಿಂಗಳು ಲೇಹ್ಗೆ ಪ್ರವಾಸಕ್ಕೆ ಬಂದಿದ್ದ ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಲೇಹ್ನಲ್ಲಿ ಸಿಲುಕಿದ್ದಾರೆ. </p>.ಲಿಂಗಸುಗೂರು: ಪ್ರವಾಹ ಇಳಿಯುವವರೆಗೂ ಸಂಚಾರಿ ಆರೋಗ್ಯ ಸೇವೆ : ಡಾ.ಅಮರೇಶ ಪಾಟೀಲ .<p>ಶ್ಯೋಕ್ ಮತ್ತು ನುಬ್ರಾ ಕಣಿವೆಗಳಿಗೆ ಪ್ರವೇಶ ದ್ವಾರವಾಗಿ ಇರುವ ಖರ್ದುಂಗ್ ಲಾ ಶಿಖರ, ಲೇಹ್-ಪಂಗೊಂಗ್ ಸರೋವರ ರಸ್ತೆಯ ಉದ್ದಕ್ಕೂ 17,950 ಅಡಿ ಎತ್ತರದ ಚಾಂಗ್ಲಾ ಶಿಖರ ಮತ್ತು ಝನ್ಸ್ಕಾರ್ ಕಣಿವೆಯ ಪ್ರದೇಶದಲ್ಲಿ ಹಿಮಪಾತವಾಗಿದೆ.</p><p>ಲೇಹ್ ಮತ್ತು ಕಾರ್ಗಿಲ್ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು ಸ್ಥಳೀಯರಿಗೆ ಎಚ್ಚರಿಕೆಯಿಂದಿರಲು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.</p>.ಭಾರಿ ಮಳೆ, ಹಿಮಪಾತ: ಜನಜೀವನ ಅಸ್ತವ್ಯಸ್ತ.<p>ಲೇಹ್ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇದರ ಪರಿಣಾಮವಾಗಿ ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಇನ್ನು ಕೆಲವು ದಿನಗಳ ಕಾರ ಲೇಹ್ನಲ್ಲೇ ಉಳಿದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೇಹ್: </strong>ಲಡಾಖ್ನ ಖರ್ದುಂಗ್ ಲಾ ಪಾಸ್ ಸೇರಿದಂತೆ ಅನೇಕ ಋತುವಿನ ಮೊದಲ ಹಿಮಪಾತವಾಗಿದೆ. ಬಯಲು ಪ್ರದೇಶಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಇದರ ಪರಿಣಾಮ ಕಳೆದ ತಿಂಗಳು ಲೇಹ್ಗೆ ಪ್ರವಾಸಕ್ಕೆ ಬಂದಿದ್ದ ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಲೇಹ್ನಲ್ಲಿ ಸಿಲುಕಿದ್ದಾರೆ. </p>.ಲಿಂಗಸುಗೂರು: ಪ್ರವಾಹ ಇಳಿಯುವವರೆಗೂ ಸಂಚಾರಿ ಆರೋಗ್ಯ ಸೇವೆ : ಡಾ.ಅಮರೇಶ ಪಾಟೀಲ .<p>ಶ್ಯೋಕ್ ಮತ್ತು ನುಬ್ರಾ ಕಣಿವೆಗಳಿಗೆ ಪ್ರವೇಶ ದ್ವಾರವಾಗಿ ಇರುವ ಖರ್ದುಂಗ್ ಲಾ ಶಿಖರ, ಲೇಹ್-ಪಂಗೊಂಗ್ ಸರೋವರ ರಸ್ತೆಯ ಉದ್ದಕ್ಕೂ 17,950 ಅಡಿ ಎತ್ತರದ ಚಾಂಗ್ಲಾ ಶಿಖರ ಮತ್ತು ಝನ್ಸ್ಕಾರ್ ಕಣಿವೆಯ ಪ್ರದೇಶದಲ್ಲಿ ಹಿಮಪಾತವಾಗಿದೆ.</p><p>ಲೇಹ್ ಮತ್ತು ಕಾರ್ಗಿಲ್ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು ಸ್ಥಳೀಯರಿಗೆ ಎಚ್ಚರಿಕೆಯಿಂದಿರಲು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.</p>.ಭಾರಿ ಮಳೆ, ಹಿಮಪಾತ: ಜನಜೀವನ ಅಸ್ತವ್ಯಸ್ತ.<p>ಲೇಹ್ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇದರ ಪರಿಣಾಮವಾಗಿ ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಇನ್ನು ಕೆಲವು ದಿನಗಳ ಕಾರ ಲೇಹ್ನಲ್ಲೇ ಉಳಿದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>