<p><strong>ನವದೆಹಲಿ:</strong> ‘ಮೀರಟ್ನಲ್ಲಿ ದಲಿತ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ, ಅವರ ಮಗಳನ್ನು ಅಪಹರಿಸಲಾಗಿದೆ. ದಲಿತರು, ಬುಡಕಟ್ಟು ಜನರು ಮತ್ತು ಹಿಂದುಳಿದ ವರ್ಗದವರು ಅಪರಾಧಿಗಳಾಗಿದ್ದರೆ ಮಾತ್ರವೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ‘ಬುಲ್ಡೋಜರ್’ ಕೆಲಸ ಮಾಡುತ್ತದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ಕಾಂಗ್ರೆಸ್ನ ಪರಿಶಿಷ್ಟ ಜಾತಿ ವಿಭಾಗದ ಮುಖ್ಯಸ್ಥ ರಾಜೇಂದ್ರ ಪಾಲ್ ಗೌತಮ್ ಅವರು ಸೋಮವಾರ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಜಾತಿ, ಧರ್ಮದ ಆಧಾರದಲ್ಲಿ ಆದಿತ್ಯನಾಥ ಅವರ ‘ಬುಲ್ಡೋಜರ್’ ಕಾರ್ಯನಿರ್ವಹಿಸುತ್ತದೆ. ದಲಿತರು ತುಳಿತಕ್ಕೆ ಒಳಗಾದರೆ, ‘ಬುಲ್ಡೋಜರ್’ ಕದಲುವುದಿಲ್ಲ’ ಎಂದರು.</p>.<p>‘ಮಹಿಳೆ ಮತ್ತು ಆಕೆಯ ಮಗಳು ಕಾಡಿನೊಳಗೆ ಹೋಗುತ್ತಿದ್ದಾಗ, ಮಗಳನ್ನು ಅಪಹರಿಸಲಾಯಿತು. ಇದನ್ನು ತಡೆಯಲು ಹೋದ ಮಹಿಳೆಯನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ನಾವು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ತೆರಳಿದಾಗ ಪೊಲೀಸರು ತಡೆದರು. ಅಪರಾಧ ತಡೆಯುವಲ್ಲಿಯೂ ಪೊಲೀಸರು ಈ ಶ್ರದ್ಧೆ ತೋರಿಸಬೇಕು’ ಎಂದರು.</p>.<p>‘ದಲಿತರ ಮೇಲಿನ ದೌರ್ಜನ್ಯದ ಘಟನೆಗಳು ಬಿಜೆಪಿ ಆಡಳಿತವಿರುವ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿಯೇ ಹೆಚ್ಚು ನಡೆಯುತ್ತಿದೆ. ಈ ಐದು ರಾಜ್ಯಗಳಲ್ಲಿ ಒಟ್ಟು ಶೇ 76ರಷ್ಟು ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದರೆ, ಉತ್ತರ ಪ್ರದೇಶವೊಂದರಲ್ಲಿಯೇ ಶೇ 26ರಷ್ಟು ಇಂಥ ಪ್ರಕರಣಗಳು ನಡೆಯುತ್ತಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಮೀರಟ್ನಲ್ಲಿ ದಲಿತ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ, ಅವರ ಮಗಳನ್ನು ಅಪಹರಿಸಲಾಗಿದೆ. ದಲಿತರು, ಬುಡಕಟ್ಟು ಜನರು ಮತ್ತು ಹಿಂದುಳಿದ ವರ್ಗದವರು ಅಪರಾಧಿಗಳಾಗಿದ್ದರೆ ಮಾತ್ರವೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ‘ಬುಲ್ಡೋಜರ್’ ಕೆಲಸ ಮಾಡುತ್ತದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ಕಾಂಗ್ರೆಸ್ನ ಪರಿಶಿಷ್ಟ ಜಾತಿ ವಿಭಾಗದ ಮುಖ್ಯಸ್ಥ ರಾಜೇಂದ್ರ ಪಾಲ್ ಗೌತಮ್ ಅವರು ಸೋಮವಾರ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಜಾತಿ, ಧರ್ಮದ ಆಧಾರದಲ್ಲಿ ಆದಿತ್ಯನಾಥ ಅವರ ‘ಬುಲ್ಡೋಜರ್’ ಕಾರ್ಯನಿರ್ವಹಿಸುತ್ತದೆ. ದಲಿತರು ತುಳಿತಕ್ಕೆ ಒಳಗಾದರೆ, ‘ಬುಲ್ಡೋಜರ್’ ಕದಲುವುದಿಲ್ಲ’ ಎಂದರು.</p>.<p>‘ಮಹಿಳೆ ಮತ್ತು ಆಕೆಯ ಮಗಳು ಕಾಡಿನೊಳಗೆ ಹೋಗುತ್ತಿದ್ದಾಗ, ಮಗಳನ್ನು ಅಪಹರಿಸಲಾಯಿತು. ಇದನ್ನು ತಡೆಯಲು ಹೋದ ಮಹಿಳೆಯನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ನಾವು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ತೆರಳಿದಾಗ ಪೊಲೀಸರು ತಡೆದರು. ಅಪರಾಧ ತಡೆಯುವಲ್ಲಿಯೂ ಪೊಲೀಸರು ಈ ಶ್ರದ್ಧೆ ತೋರಿಸಬೇಕು’ ಎಂದರು.</p>.<p>‘ದಲಿತರ ಮೇಲಿನ ದೌರ್ಜನ್ಯದ ಘಟನೆಗಳು ಬಿಜೆಪಿ ಆಡಳಿತವಿರುವ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿಯೇ ಹೆಚ್ಚು ನಡೆಯುತ್ತಿದೆ. ಈ ಐದು ರಾಜ್ಯಗಳಲ್ಲಿ ಒಟ್ಟು ಶೇ 76ರಷ್ಟು ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದರೆ, ಉತ್ತರ ಪ್ರದೇಶವೊಂದರಲ್ಲಿಯೇ ಶೇ 26ರಷ್ಟು ಇಂಥ ಪ್ರಕರಣಗಳು ನಡೆಯುತ್ತಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>