<p><strong>ಜೈಪುರ: </strong>ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾದ ದಲಿತ ವ್ಯಕ್ತಿಯನ್ನು ಎಳೆದೊಯ್ದು ಆತನ ಮೂಗನ್ನು ದೇಗುಲದ ಜಗುಲಿಗೆ ತಿಕ್ಕಿಸಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.</p>.<p>ಈ ಸಂಬಂಧ 11 ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಇನ್ನಿತರ ಐಪಿಸಿ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ಈ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಏನಿದು ಪ್ರಕರಣ?</strong><br />ಕೆಲ ದಿನಗಳ ಹಿಂದೆ ರಾಜೇಶ್ ಕುಮಾರ್ ಮೇಘ್ವಾಲ್ ತಮ್ಮ ಫೇಸ್ಬುಕ್ನಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಟೀಕಿಸಿದ್ದರು. ಅಲ್ಲದೆ ದೌರ್ಜನ್ಯಗಳು ಕೇವಲ ಪಂಡಿತರ ಮೇಲಷ್ಟೇ ನಡೆದಿವೆಯೇ, ದಲಿತರ ಮೇಲೆ ನಡೆದಿಲ್ಲವೇ ಎಂದು ಪ್ರಶ್ನಿಸಿದ್ದರು. ಈ ಪೋಸ್ಟ್ಗೆ ಕೆಲವರು ಜೈ ಶ್ರೀರಾಮ್ ಮತ್ತು ಜೈ ಶ್ರೀಕೃಷ್ಣ ಎಂದು ಪ್ರತಿಕ್ರಿಯೆ ನೀಡಿದ್ದರು. ಈ ವೇಳೆ ದೇವರ ಬಗ್ಗೆ ಮೇಘ್ವಾಲ್ ಅವರು ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಆದರೆ, ತಮ್ಮ ತಪ್ಪಿನ ಅರಿವಾಗಿ ಮೇಘ್ವಾಲ್ ಅವರು ಕ್ಷಮಾಪಣೆಯನ್ನೂ ಕೋರಿದ್ದರು. ಆದರೆ ಕೆಲವು ಸ್ಥಳೀಯರು ಮೇಘ್ವಾಲ್ ಅವರನ್ನು ದೇವಸ್ಥಾನಕ್ಕೆ ಎಳೆದೊಯ್ದು, ಬಲವಂತದಿಂದ ದೇವಸ್ಥಾನದ ಜಗುಲಿಗೆ ಮೂಗು ತಿಕ್ಕಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾದ ದಲಿತ ವ್ಯಕ್ತಿಯನ್ನು ಎಳೆದೊಯ್ದು ಆತನ ಮೂಗನ್ನು ದೇಗುಲದ ಜಗುಲಿಗೆ ತಿಕ್ಕಿಸಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.</p>.<p>ಈ ಸಂಬಂಧ 11 ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಇನ್ನಿತರ ಐಪಿಸಿ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ಈ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಏನಿದು ಪ್ರಕರಣ?</strong><br />ಕೆಲ ದಿನಗಳ ಹಿಂದೆ ರಾಜೇಶ್ ಕುಮಾರ್ ಮೇಘ್ವಾಲ್ ತಮ್ಮ ಫೇಸ್ಬುಕ್ನಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಟೀಕಿಸಿದ್ದರು. ಅಲ್ಲದೆ ದೌರ್ಜನ್ಯಗಳು ಕೇವಲ ಪಂಡಿತರ ಮೇಲಷ್ಟೇ ನಡೆದಿವೆಯೇ, ದಲಿತರ ಮೇಲೆ ನಡೆದಿಲ್ಲವೇ ಎಂದು ಪ್ರಶ್ನಿಸಿದ್ದರು. ಈ ಪೋಸ್ಟ್ಗೆ ಕೆಲವರು ಜೈ ಶ್ರೀರಾಮ್ ಮತ್ತು ಜೈ ಶ್ರೀಕೃಷ್ಣ ಎಂದು ಪ್ರತಿಕ್ರಿಯೆ ನೀಡಿದ್ದರು. ಈ ವೇಳೆ ದೇವರ ಬಗ್ಗೆ ಮೇಘ್ವಾಲ್ ಅವರು ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಆದರೆ, ತಮ್ಮ ತಪ್ಪಿನ ಅರಿವಾಗಿ ಮೇಘ್ವಾಲ್ ಅವರು ಕ್ಷಮಾಪಣೆಯನ್ನೂ ಕೋರಿದ್ದರು. ಆದರೆ ಕೆಲವು ಸ್ಥಳೀಯರು ಮೇಘ್ವಾಲ್ ಅವರನ್ನು ದೇವಸ್ಥಾನಕ್ಕೆ ಎಳೆದೊಯ್ದು, ಬಲವಂತದಿಂದ ದೇವಸ್ಥಾನದ ಜಗುಲಿಗೆ ಮೂಗು ತಿಕ್ಕಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>