<p><strong>ಬಲಿಯಾ (ಉತ್ತರ ಪ್ರದೇಶ):</strong> ದಲಿತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಮುಖಂಡನು ಜಾಮೀನಿನ ಮೇಲೆ ಬಿಡುಗಡೆಯಾದಾಗ ಭರ್ಜರಿ ಸ್ವಾಗತ ಕೋರಲಾಗಿದೆ.</p>.<p>ಆರೋಪಿಗೆ ಸ್ವಾಗತ ಕೋರಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಚರ್ಚೆಗೆ ಗ್ರಾಸವಾಗಿದೆ.</p>.<p>ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ್ಯ ವಿದ್ಯುತ್ ನಿಗಮದ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಜಿ ಸಿಂಗ್ (ದಲಿತ ಅಧಿಕಾರಿ) ಅವರ ಮೇಲೆ ಮುನ್ನಾ ಬಹದ್ದೂರ್ ಸಿಂಗ್ ಆ. 23ರಂದು ಶೂನಿಂದ ಥಳಿಸಿದ್ದ.</p>.<p>ದೂರು ದಾಖಲಾಗಿದ್ದರಿಂದ ಸಿಂಗ್ನನ್ನು ಬಂಧಿಸಿದ್ದ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕಳಿಸಿದ್ದರು.</p>.<p>ಅಲಹಾಬಾದ್ ಹೈಕೋರ್ಟ್ ಆದೇಶದ ಮೇರೆಗೆ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ಮುನ್ನಾ, ತನ್ನ ಬೆಂಗಾವಲು ಪಡೆಯೊಂದಿಗೆ ತವರು ಜಿಲ್ಲೆಗೆ ಮರಳುತ್ತಿದ್ದಂತೆ, ಅಪಾರ ಜನರು ಜಮಾಯಿಸಿ ಸ್ವಾಗತಿಸುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದೆ.</p>.<p>‘ನನಗೆ ದೊರೆತ ಅಭೂತಪೂರ್ವ ಸ್ವಾಗತವು ಪಕ್ಷದ ಕಾರ್ಯಕರ್ತರು ನನ್ನ ಮೇಲಿಟ್ಟಿರುವ ಅಪಾರ ಪ್ರೀತಿ ಮತ್ತು ಬೆಂಬಲವನ್ನು ಪ್ರತಿಬಿಂಬಿಸುತ್ತದೆ’ ಎಂದು ಮುನ್ನಾ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.</p>.<p>ಘಟನೆ ನಡೆದ ಬೆನ್ನಿಗೆ, ಆರೋಪಿಗೆ ಜಾಮೀನು ಸಿಗುವ ಮುನ್ನವೇ ಬಿಜೆಪಿಯ ಕೆಲವು ಮುಖಂಡರು ಮುನ್ನಾನನ್ನು ಬೆಂಬಲಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ಗಳನ್ನು ಸಹ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ (ಉತ್ತರ ಪ್ರದೇಶ):</strong> ದಲಿತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಮುಖಂಡನು ಜಾಮೀನಿನ ಮೇಲೆ ಬಿಡುಗಡೆಯಾದಾಗ ಭರ್ಜರಿ ಸ್ವಾಗತ ಕೋರಲಾಗಿದೆ.</p>.<p>ಆರೋಪಿಗೆ ಸ್ವಾಗತ ಕೋರಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಚರ್ಚೆಗೆ ಗ್ರಾಸವಾಗಿದೆ.</p>.<p>ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ್ಯ ವಿದ್ಯುತ್ ನಿಗಮದ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಜಿ ಸಿಂಗ್ (ದಲಿತ ಅಧಿಕಾರಿ) ಅವರ ಮೇಲೆ ಮುನ್ನಾ ಬಹದ್ದೂರ್ ಸಿಂಗ್ ಆ. 23ರಂದು ಶೂನಿಂದ ಥಳಿಸಿದ್ದ.</p>.<p>ದೂರು ದಾಖಲಾಗಿದ್ದರಿಂದ ಸಿಂಗ್ನನ್ನು ಬಂಧಿಸಿದ್ದ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕಳಿಸಿದ್ದರು.</p>.<p>ಅಲಹಾಬಾದ್ ಹೈಕೋರ್ಟ್ ಆದೇಶದ ಮೇರೆಗೆ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ಮುನ್ನಾ, ತನ್ನ ಬೆಂಗಾವಲು ಪಡೆಯೊಂದಿಗೆ ತವರು ಜಿಲ್ಲೆಗೆ ಮರಳುತ್ತಿದ್ದಂತೆ, ಅಪಾರ ಜನರು ಜಮಾಯಿಸಿ ಸ್ವಾಗತಿಸುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದೆ.</p>.<p>‘ನನಗೆ ದೊರೆತ ಅಭೂತಪೂರ್ವ ಸ್ವಾಗತವು ಪಕ್ಷದ ಕಾರ್ಯಕರ್ತರು ನನ್ನ ಮೇಲಿಟ್ಟಿರುವ ಅಪಾರ ಪ್ರೀತಿ ಮತ್ತು ಬೆಂಬಲವನ್ನು ಪ್ರತಿಬಿಂಬಿಸುತ್ತದೆ’ ಎಂದು ಮುನ್ನಾ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.</p>.<p>ಘಟನೆ ನಡೆದ ಬೆನ್ನಿಗೆ, ಆರೋಪಿಗೆ ಜಾಮೀನು ಸಿಗುವ ಮುನ್ನವೇ ಬಿಜೆಪಿಯ ಕೆಲವು ಮುಖಂಡರು ಮುನ್ನಾನನ್ನು ಬೆಂಬಲಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ಗಳನ್ನು ಸಹ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>