<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ 16 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. </p><p>ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. </p><p>ಆರೋಪಿಗಳ ಪತ್ತೆಗಾಗಿ ವಿವಿಧ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಬಂಥರಾ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಮನೆಯಿಂದ ಹೊರಟಿದ್ದಳು. ಸಮೀಪದ ಪ್ರದೇಶದಲ್ಲಿ ಆಕೆ ಪರಿಚಯಸ್ಥನ ಜೊತೆ ಮಾತನಾಡುತ್ತಿದ್ದರು. </p><p>ಈ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಪರಿಚಯಸ್ಥನನ್ನು ಥಳಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಕೃಷ್ಣನಗರದ ಎಸಿಪಿ ವಿಕಾಸ್ ಕುಮಾರ್ ಪಾಂಡೆ ತಿಳಿಸಿದ್ದಾರೆ. </p><p>ಈ ಘಟನೆಯನ್ನು ಯಾರಿಗೂ ಹೇಳದಂತೆ ಆರೋಪಿಗಳು ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. </p>.ಪಶ್ಚಿಮ ಬಂಗಾಳ: ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.ಮೈಸೂರು: ಬಾಲಕಿ ಮೇಲೆ ಅತ್ಯಾಚಾರ; ತಪ್ಪಿಸಿಕೊಳ್ಳಲು ಯತ್ನಿಸಿದ ಶಂಕಿತನಿಗೆ ಗುಂಡೇಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ 16 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. </p><p>ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. </p><p>ಆರೋಪಿಗಳ ಪತ್ತೆಗಾಗಿ ವಿವಿಧ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಬಂಥರಾ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಮನೆಯಿಂದ ಹೊರಟಿದ್ದಳು. ಸಮೀಪದ ಪ್ರದೇಶದಲ್ಲಿ ಆಕೆ ಪರಿಚಯಸ್ಥನ ಜೊತೆ ಮಾತನಾಡುತ್ತಿದ್ದರು. </p><p>ಈ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಪರಿಚಯಸ್ಥನನ್ನು ಥಳಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಕೃಷ್ಣನಗರದ ಎಸಿಪಿ ವಿಕಾಸ್ ಕುಮಾರ್ ಪಾಂಡೆ ತಿಳಿಸಿದ್ದಾರೆ. </p><p>ಈ ಘಟನೆಯನ್ನು ಯಾರಿಗೂ ಹೇಳದಂತೆ ಆರೋಪಿಗಳು ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. </p>.ಪಶ್ಚಿಮ ಬಂಗಾಳ: ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.ಮೈಸೂರು: ಬಾಲಕಿ ಮೇಲೆ ಅತ್ಯಾಚಾರ; ತಪ್ಪಿಸಿಕೊಳ್ಳಲು ಯತ್ನಿಸಿದ ಶಂಕಿತನಿಗೆ ಗುಂಡೇಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>