<p><strong>ಲಖನೌ:</strong> ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಜನ್ಮದಿನ ಆಚರಣೆಯೊಂದರಲ್ಲಿ ದಲಿತ ಬಾಲಕನೊಬ್ಬನ ಬಟ್ಟೆ ಬಿಚ್ಚಿಸಿ, ಥಳಿಸಿ, ಆತನ ಮೇಲೆ ಮೂತ್ರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಿಂದಾಗಿ ಮನನೊಂದ ಬಾಲಕನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.</p><p>10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನು ಆತನ ಕೊಠಡಿಯಲ್ಲಿ ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು ಎಂದು ವರದಿಗಳು ಹೇಳಿವೆ.</p><p>ಬಾಲಕನನ್ನು ಜನ್ಮದಿನಾಚರಣೆ ಪಾರ್ಟಿಗೆ ಕೆಲವು ಯುವಕರು ಶುಕ್ರವಾರ ಆಹ್ವಾನಿಸಿದ್ದರು. ಅಲ್ಲಿ ಪರಸ್ಪರರ ನಡುವೆ ಜಗಳ ನಡೆದಿದ್ದು, ಬಾಲಕನ ಬಟ್ಟೆ ಬಿಚ್ಚಿಸಿ, ಆತನ ಮೇಲೆ ದೈಹಿಕ ಹಲ್ಲೆ ನಡೆಸಿ, ಮೈಮೇಲೆ ಮೂತ್ರ ಮಾಡಲಾಯಿತು ಎಂದು ವರದಿಗಳು ಹೇಳಿವೆ. ಈ ಕೃತ್ಯಗಳನ್ನು ಯುವಕರು ಚಿತ್ರೀಕರಿಸಿಕೊಂಡಿದ್ದರು, ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಡುವುದಾಗಿ ಬೆದರಿಸಿದ್ದರು. ದೃಶ್ಯಗಳನ್ನು ಡಿಲೀಟ್ ಮಾಡುವಂತೆ ಬಾಲಕ ಕೇಳಿಕೊಂಡಾಗ, ಆತ ಉಗುಳಿದ್ದನ್ನು ನೆಕ್ಕುವಂತೆ ಮಾಡಲಾಯಿತು ಎಂದು ಆರೋಪಿಸಲಾಗಿದೆ.</p><p>ಬಾಲಕನು ನಡೆದ ಘಟನೆಯನ್ನು ತನ್ನ ಮನೆಯವರಿಗೆ ತಿಳಿಸಿದ್ದ. ಇದನ್ನು ಆಧರಿಸಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎನ್ನಲಾಗಿದೆ. </p><p>ಇದರಿಂದಾಗಿ ಮನನೊಂದ ಬಾಲಕನು, ಮನೆಯವರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಕೊಠಡಿಯಲ್ಲಿ ನೇಣು ಹಾಕಿಕೊಂಡ ಎಂದು ವರದಿಯಾಗಿದೆ.</p><p>ಪೊಲೀಸರು ಕ್ರಮ ಕೈಗೊಳ್ಳದೆ ಇದ್ದುದೇ ಬಾಲಕನ ಸಾವಿಗೆ ಕಾರಣ ಎಂದು ದೂರಿರುವ ಆತನ ಕುಟುಂಬದ ಸದಸ್ಯರು ಹಾಗೂ ಇತರ ಕೆಲವರು, ಬಾಲಕನ ಮೃತದೇಹ ಇಟ್ಟುಕೊಂಡು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.</p><p>ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಾಲ್ಕನೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಜನ್ಮದಿನ ಆಚರಣೆಯೊಂದರಲ್ಲಿ ದಲಿತ ಬಾಲಕನೊಬ್ಬನ ಬಟ್ಟೆ ಬಿಚ್ಚಿಸಿ, ಥಳಿಸಿ, ಆತನ ಮೇಲೆ ಮೂತ್ರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಿಂದಾಗಿ ಮನನೊಂದ ಬಾಲಕನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.</p><p>10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನು ಆತನ ಕೊಠಡಿಯಲ್ಲಿ ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು ಎಂದು ವರದಿಗಳು ಹೇಳಿವೆ.</p><p>ಬಾಲಕನನ್ನು ಜನ್ಮದಿನಾಚರಣೆ ಪಾರ್ಟಿಗೆ ಕೆಲವು ಯುವಕರು ಶುಕ್ರವಾರ ಆಹ್ವಾನಿಸಿದ್ದರು. ಅಲ್ಲಿ ಪರಸ್ಪರರ ನಡುವೆ ಜಗಳ ನಡೆದಿದ್ದು, ಬಾಲಕನ ಬಟ್ಟೆ ಬಿಚ್ಚಿಸಿ, ಆತನ ಮೇಲೆ ದೈಹಿಕ ಹಲ್ಲೆ ನಡೆಸಿ, ಮೈಮೇಲೆ ಮೂತ್ರ ಮಾಡಲಾಯಿತು ಎಂದು ವರದಿಗಳು ಹೇಳಿವೆ. ಈ ಕೃತ್ಯಗಳನ್ನು ಯುವಕರು ಚಿತ್ರೀಕರಿಸಿಕೊಂಡಿದ್ದರು, ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಡುವುದಾಗಿ ಬೆದರಿಸಿದ್ದರು. ದೃಶ್ಯಗಳನ್ನು ಡಿಲೀಟ್ ಮಾಡುವಂತೆ ಬಾಲಕ ಕೇಳಿಕೊಂಡಾಗ, ಆತ ಉಗುಳಿದ್ದನ್ನು ನೆಕ್ಕುವಂತೆ ಮಾಡಲಾಯಿತು ಎಂದು ಆರೋಪಿಸಲಾಗಿದೆ.</p><p>ಬಾಲಕನು ನಡೆದ ಘಟನೆಯನ್ನು ತನ್ನ ಮನೆಯವರಿಗೆ ತಿಳಿಸಿದ್ದ. ಇದನ್ನು ಆಧರಿಸಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎನ್ನಲಾಗಿದೆ. </p><p>ಇದರಿಂದಾಗಿ ಮನನೊಂದ ಬಾಲಕನು, ಮನೆಯವರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಕೊಠಡಿಯಲ್ಲಿ ನೇಣು ಹಾಕಿಕೊಂಡ ಎಂದು ವರದಿಯಾಗಿದೆ.</p><p>ಪೊಲೀಸರು ಕ್ರಮ ಕೈಗೊಳ್ಳದೆ ಇದ್ದುದೇ ಬಾಲಕನ ಸಾವಿಗೆ ಕಾರಣ ಎಂದು ದೂರಿರುವ ಆತನ ಕುಟುಂಬದ ಸದಸ್ಯರು ಹಾಗೂ ಇತರ ಕೆಲವರು, ಬಾಲಕನ ಮೃತದೇಹ ಇಟ್ಟುಕೊಂಡು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.</p><p>ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಾಲ್ಕನೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>