<p><strong>ಬಲಿಯಾ:</strong> ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಮಗ ನೀರಜ್ ಶೇಖರ್ ಅವರ ಜೊತೆ ಗುರುತಿಸಿಕೊಂಡಿದ್ದ ಬಿಜೆಪಿ ನಾಯಕರೊಬ್ಬರು ದಲಿತ ವಿದ್ವಾಂಸರಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ. </p><p>ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನೀರಜ್ ಶೇಖರ್ ಅವರ ನಿಕಟವರ್ತಿಯಾದ ಅಲೋಕ್ ಸಿಂಗ್ ಎನ್ನುವವರು ಲಖನೌ ವಿಶ್ವವಿದ್ಯಾಲಯದ ವಿದ್ವಾಂಸ ದೀಪಕ್ ಕನೌಜಿಯಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಕುರಿತು ಸೋಮವಾರ ರಾತ್ರಿ ಎಫ್ಐಆರ್ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಅಲೋಕ್ ಸಿಂಗ್ ಅವರಿಗೆ ನಮ್ಮ ಕುಟುಂಬದ ಜೊತೆಗೆ ರಾಜಕೀಯ ದ್ವೇಷವಿದೆ. ಮೇ.21 ಎಂದು ನನಗೆ ಕರೆ ಮಾಡಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದರು’ ಎಂದು ದೀಪಕ್ ಕನೌಜಿಯಾ ಆರೋಪಿಸಿದ್ದಾರೆ.</p><p>‘ಈ ಕರೆಯನ್ನು ಬೇಕಿದ್ದರೆ ರೆಕಾರ್ಡ್ ಮಾಡಿಟ್ಟುಕೊಳ್ಳಿ, ಉತ್ತರ ಪ್ರದೇಶದ ಕಾನೂನು ಹಾಗೂ ಆಡಳಿತ ಬಗ್ಗೆ ನನಗೆ ಯಾವುದೇ ಭಯವಿಲ್ಲ’ ಎಂದು ಅಲೋಕ್ ಸಿಂಗ್ ಹೇಳಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p><p>‘ನನ್ನ ತಂದೆಯೂ ಕೂಡ ಇವರ ಸತತ ಕಿರುಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದಾಗಿಯೇ ಕಳೆದ ವರ್ಷ ಹೃದಯಾಘಾತದಿಂದ ಮೃತಪಟ್ಟಿದ್ದರು. ಹಳ್ಳಿಯಲ್ಲಿ ವಾಸವಿರುವ ನನ್ನ ತಾಯಿಯನ್ನು ಕೂಡ ಇವರು ಕೊಲೆಮಾಡುವ ಸಂಭವವಿದೆ’ ಎಂದು ಆರೋಪಿಸಿದ್ದಾರೆ.</p><p>ಅಲೋಕ್ ಸಿಂಗ್ ಅವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದು, ನೀರಜ್ ಶೇಖರ್ ಅವರ ನಿಕಟವರ್ತಿಯಾಗಿದ್ದಾರೆ ಎಂದು ಬಿಜೆಪಿ ನಾಯಕ ಅರುಣ್ ತಿವಾರಿ ಸ್ಪಷ್ಟಪಡಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಅಲೋಕ್ ಸಿಂಗ್ ಹಾಗೂ ದೀಪಕ್ ಕನೌಜಿಯಾ ಅವರ ನಡುವಿನ ಆಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೋಕ್ ಸಿಂಗ್ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ:</strong> ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಮಗ ನೀರಜ್ ಶೇಖರ್ ಅವರ ಜೊತೆ ಗುರುತಿಸಿಕೊಂಡಿದ್ದ ಬಿಜೆಪಿ ನಾಯಕರೊಬ್ಬರು ದಲಿತ ವಿದ್ವಾಂಸರಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ. </p><p>ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನೀರಜ್ ಶೇಖರ್ ಅವರ ನಿಕಟವರ್ತಿಯಾದ ಅಲೋಕ್ ಸಿಂಗ್ ಎನ್ನುವವರು ಲಖನೌ ವಿಶ್ವವಿದ್ಯಾಲಯದ ವಿದ್ವಾಂಸ ದೀಪಕ್ ಕನೌಜಿಯಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಕುರಿತು ಸೋಮವಾರ ರಾತ್ರಿ ಎಫ್ಐಆರ್ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಅಲೋಕ್ ಸಿಂಗ್ ಅವರಿಗೆ ನಮ್ಮ ಕುಟುಂಬದ ಜೊತೆಗೆ ರಾಜಕೀಯ ದ್ವೇಷವಿದೆ. ಮೇ.21 ಎಂದು ನನಗೆ ಕರೆ ಮಾಡಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದರು’ ಎಂದು ದೀಪಕ್ ಕನೌಜಿಯಾ ಆರೋಪಿಸಿದ್ದಾರೆ.</p><p>‘ಈ ಕರೆಯನ್ನು ಬೇಕಿದ್ದರೆ ರೆಕಾರ್ಡ್ ಮಾಡಿಟ್ಟುಕೊಳ್ಳಿ, ಉತ್ತರ ಪ್ರದೇಶದ ಕಾನೂನು ಹಾಗೂ ಆಡಳಿತ ಬಗ್ಗೆ ನನಗೆ ಯಾವುದೇ ಭಯವಿಲ್ಲ’ ಎಂದು ಅಲೋಕ್ ಸಿಂಗ್ ಹೇಳಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p><p>‘ನನ್ನ ತಂದೆಯೂ ಕೂಡ ಇವರ ಸತತ ಕಿರುಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದಾಗಿಯೇ ಕಳೆದ ವರ್ಷ ಹೃದಯಾಘಾತದಿಂದ ಮೃತಪಟ್ಟಿದ್ದರು. ಹಳ್ಳಿಯಲ್ಲಿ ವಾಸವಿರುವ ನನ್ನ ತಾಯಿಯನ್ನು ಕೂಡ ಇವರು ಕೊಲೆಮಾಡುವ ಸಂಭವವಿದೆ’ ಎಂದು ಆರೋಪಿಸಿದ್ದಾರೆ.</p><p>ಅಲೋಕ್ ಸಿಂಗ್ ಅವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದು, ನೀರಜ್ ಶೇಖರ್ ಅವರ ನಿಕಟವರ್ತಿಯಾಗಿದ್ದಾರೆ ಎಂದು ಬಿಜೆಪಿ ನಾಯಕ ಅರುಣ್ ತಿವಾರಿ ಸ್ಪಷ್ಟಪಡಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಅಲೋಕ್ ಸಿಂಗ್ ಹಾಗೂ ದೀಪಕ್ ಕನೌಜಿಯಾ ಅವರ ನಡುವಿನ ಆಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೋಕ್ ಸಿಂಗ್ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>