<p><strong>ಬಲಿಯಾ (ಉತ್ತರ ಪ್ರದೇಶ):</strong> ಕಲ್ಯಾಣ ಮಂಟಪದಲ್ಲಿ ದಲಿತ ಕುಟುಂಬದ ವಿವಾಹ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು, ಕಲ್ಯಾಣ ಮಂಟಪಕ್ಕೆ ನುಗ್ಗಿ ದಲಿತ ಕುಟುಂಬದ ಸದಸ್ಯರನ್ನು ದೊಣ್ಣೆ ಮತ್ತು ರಾಡ್ಗಳಿಂದ ಮನ ಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ರಸಢಾ ಪಟ್ಟಣದಲ್ಲಿ ನಡೆದಿದೆ.</p>.<p>ಈ ಘಟನೆ ಶುಕ್ರವಾರ ನಡೆದಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. </p>.<p>‘ದಲಿತ ಸಮುದಾಯಕ್ಕೆ ಸೇರಿದವರಾದ ನೀವು, ಹೇಗೆ ಕಲ್ಯಾಣ ಮಂಟಪದಲ್ಲಿ ವಿವಾಹ ಕಾರ್ಯಕ್ರಮ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿ ನಮ್ಮನ್ನು ಥಳಿಸಿದರು’ ಎಂದು ದಲಿತ ಕುಟುಂಬದವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.</p>.<p>‘ಕಲ್ಯಾಣ ಮಂಟಪದಲ್ಲಿ ವಿವಾಹವು ಆಯೋಜನೆಗೊಂಡಿತ್ತು. ಬೆಳಿಗ್ಗೆ 10.30ರ ಸುಮಾರಿಗೆ 20 ಜನರ ಗುಂಪು ಏಕಾಏಕಿ ದಾಳಿ ಮಾಡಿ, ಹಿಗ್ಗಾ ಮಗ್ಗ ಥಳಿಸಿದರು’ ಎಂದು ಸಂತ್ರಸ್ತರೊಬ್ಬರ ಸಹೋದರ ರಾಘವೇಂದ್ರ ಗೌತಮ್ ದೂರು ನೀಡಿದ್ದಾರೆ.</p>.<p>ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ ಮತ್ತು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲಿಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ (ಉತ್ತರ ಪ್ರದೇಶ):</strong> ಕಲ್ಯಾಣ ಮಂಟಪದಲ್ಲಿ ದಲಿತ ಕುಟುಂಬದ ವಿವಾಹ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು, ಕಲ್ಯಾಣ ಮಂಟಪಕ್ಕೆ ನುಗ್ಗಿ ದಲಿತ ಕುಟುಂಬದ ಸದಸ್ಯರನ್ನು ದೊಣ್ಣೆ ಮತ್ತು ರಾಡ್ಗಳಿಂದ ಮನ ಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ರಸಢಾ ಪಟ್ಟಣದಲ್ಲಿ ನಡೆದಿದೆ.</p>.<p>ಈ ಘಟನೆ ಶುಕ್ರವಾರ ನಡೆದಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. </p>.<p>‘ದಲಿತ ಸಮುದಾಯಕ್ಕೆ ಸೇರಿದವರಾದ ನೀವು, ಹೇಗೆ ಕಲ್ಯಾಣ ಮಂಟಪದಲ್ಲಿ ವಿವಾಹ ಕಾರ್ಯಕ್ರಮ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿ ನಮ್ಮನ್ನು ಥಳಿಸಿದರು’ ಎಂದು ದಲಿತ ಕುಟುಂಬದವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.</p>.<p>‘ಕಲ್ಯಾಣ ಮಂಟಪದಲ್ಲಿ ವಿವಾಹವು ಆಯೋಜನೆಗೊಂಡಿತ್ತು. ಬೆಳಿಗ್ಗೆ 10.30ರ ಸುಮಾರಿಗೆ 20 ಜನರ ಗುಂಪು ಏಕಾಏಕಿ ದಾಳಿ ಮಾಡಿ, ಹಿಗ್ಗಾ ಮಗ್ಗ ಥಳಿಸಿದರು’ ಎಂದು ಸಂತ್ರಸ್ತರೊಬ್ಬರ ಸಹೋದರ ರಾಘವೇಂದ್ರ ಗೌತಮ್ ದೂರು ನೀಡಿದ್ದಾರೆ.</p>.<p>ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ ಮತ್ತು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲಿಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>