ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಂ ಇಂಡಿಯಾ ಗೆಲುವಿಗೆ ಸಂಭ್ರಮಿಸಿದ ದಲಿತ ಯುವಕನನ್ನು ಕಿಚ್ಚಿಟ್ಟು ಕೊಂದರು!

Last Updated 17 ಜೂನ್ 2019, 13:00 IST
ಅಕ್ಷರ ಗಾತ್ರ

ಪ್ರತಾಪ್‌ಗಢ (ಉತ್ತರ ಪ್ರದೇಶ): ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ದಲಿತ ಯುವಕನನ್ನು ಕಿಚ್ಚಿಟ್ಟು ಹತ್ಯೆ ಮಾಡಿದ ಕೃತ್ಯದ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಇಲ್ಲಿನ ರಾಮಪುರ್ ಬೇಲಾ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ವಿನಯ್ ಪ್ರಕಾಶ್ ಎಂಬ ಯುವಕ ಭಾನುವಾರ ಕ್ರಿಕೆಟ್ ಪಂದ್ಯ ವೀಕ್ಷಿಸಿ, ಭಾರತ ಗೆದ್ದಾಗ ಕುಣಿದು ಸಂಭ್ರಮಿಸಿದ್ದನು. ಈ ವಿಷಯದಲ್ಲಿಯೇ ಅಲ್ಲೊಂದು ಸಣ್ಣ ಜಗಳವೂ ನಡೆದಿತ್ತು.

ಸೋಮವಾರ ಬೆಳಗ್ಗೆ ಗ್ರಾಮದವರು ನೋಡಿದಾಗ ಪ್ರಕಾಶ್ ಅವರ ಗುಡಿಸಲು ಸುಟ್ಟು ಭಸ್ಮವಾಗಿತ್ತು.ಗುಡಿಸಲೊಳಗೆ ಪ್ರಕಾಶ್ ಅವರ ದೇಹ ಗುರುತು ಹಿಡಿಯಲಾಗದ ಸ್ಥಿತಿಯಲ್ಲಿ ಸುಟ್ಟು ಕರಕಲಾಗಿತ್ತು.
ಕಳೆದ ರಾತ್ರಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ಗೆದ್ದಾಗ ನಡೆದ ಜಗಳವೇ ಈ ಹತ್ಯೆಗೆ ಕಾರಣ ಎಂದು ಗ್ರಾಮದವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT