ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಢಾನಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳು ಬಡವರಿಗೆ ಕನಿಷ್ಠ ನೀರಿನ ಸೌಕರ್ಯವನ್ನೂ ನೀಡಲು ವಿಫಲವಾಗಿದ್ದವು. ಆದರೆ, ನಮ್ಮ ಸರ್ಕಾರದಲ್ಲಿ ದಲಿತರ ಕೇರಿಗಳು, ಹಿಂದುಳಿದ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನಲ್ಲಿ ನೀರು ಸೌಕರ್ಯ ಕಲ್ಪಿಸಲಾಗಿದೆ’ ಎಂದರು.