<p><strong>ಚಂಡೀಗಢ</strong>: ‘ಪಂಜಾಬ್ನ ರೈತ ಮುಖಂಡ ಜಗಜೀತ್ ಸಿಂಗ್ ಡಲ್ಲೇವಾಲ್ ಅವರು ಅನಿರ್ದಿಷ್ಟಾವಧಿ ಮುಷ್ಕರವನ್ನು ಅಂತ್ಯಗೊಳಿಸಿಲ್ಲ’ ಎಂದು ಅವರ ನಿಕಟವರ್ತಿ, ರೈತ ನಾಯಕ ಅಭಿಮನ್ಯು ಕೊಹಾರ್ ಶನಿವಾರ ತಿಳಿಸಿದ್ದಾರೆ.</p><p>‘ರಾಜ್ಯದ ಪೊಲೀಸರು ಕಳೆದ ವಾರ ಬಂಧಿಸಿದ್ದ ಎಲ್ಲ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ಬಳಿಕ ಅವರು ಒಂದು ಲೋಟ ನೀರನ್ನು ಕುಡಿದಿದ್ದಾರೆ. ರೈತರ ಬಿಡುಗಡೆ ಬಳಿಕ ನೀರನ್ನಷ್ಟೇ ಕುಡಿಯುತ್ತೇನೆ ಎಂದು ಅವರು ಮೊದಲೇ ತಿಳಿಸಿದ್ದರು’ ಎಂದು ಹೇಳಿದರು.</p><p>‘ಅನಿರ್ದಿಷ್ಟಾವಧಿ ಮುಷ್ಕರವನ್ನು ಡಲ್ಲೇವಾಲ್ ಅವರು ಅಂತ್ಯಗೊಳಿಸಿದ್ದಾರೆ ಎಂದು ತಪ್ಪು ಅಭಿಪ್ರಾಯವನ್ನು ಮೂಡಿಸಲಾಗುತ್ತಿದೆ. ಇದು, ಸರಿಯಲ್ಲ. ಅವರು ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ’ ಎಂದು ಹೇಳಿದರು.</p><p>ಹರಿಯಾಣದ ಖನೌರಿ ಮತ್ತು ಶಂಬು ಗಡಿಯಲ್ಲಿ ನಿರಶನ ನಡೆಸುತ್ತಿದ್ದ ರೈತರು ಮಾರ್ಚ್ 19ರಂದು ಸ್ಥಳದಿಂದ ನಿರ್ಗಮಿಸಿದ್ದಾರೆ. ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಪಂಜಾಬ್ನ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ‘ಪಂಜಾಬ್ನ ರೈತ ಮುಖಂಡ ಜಗಜೀತ್ ಸಿಂಗ್ ಡಲ್ಲೇವಾಲ್ ಅವರು ಅನಿರ್ದಿಷ್ಟಾವಧಿ ಮುಷ್ಕರವನ್ನು ಅಂತ್ಯಗೊಳಿಸಿಲ್ಲ’ ಎಂದು ಅವರ ನಿಕಟವರ್ತಿ, ರೈತ ನಾಯಕ ಅಭಿಮನ್ಯು ಕೊಹಾರ್ ಶನಿವಾರ ತಿಳಿಸಿದ್ದಾರೆ.</p><p>‘ರಾಜ್ಯದ ಪೊಲೀಸರು ಕಳೆದ ವಾರ ಬಂಧಿಸಿದ್ದ ಎಲ್ಲ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ಬಳಿಕ ಅವರು ಒಂದು ಲೋಟ ನೀರನ್ನು ಕುಡಿದಿದ್ದಾರೆ. ರೈತರ ಬಿಡುಗಡೆ ಬಳಿಕ ನೀರನ್ನಷ್ಟೇ ಕುಡಿಯುತ್ತೇನೆ ಎಂದು ಅವರು ಮೊದಲೇ ತಿಳಿಸಿದ್ದರು’ ಎಂದು ಹೇಳಿದರು.</p><p>‘ಅನಿರ್ದಿಷ್ಟಾವಧಿ ಮುಷ್ಕರವನ್ನು ಡಲ್ಲೇವಾಲ್ ಅವರು ಅಂತ್ಯಗೊಳಿಸಿದ್ದಾರೆ ಎಂದು ತಪ್ಪು ಅಭಿಪ್ರಾಯವನ್ನು ಮೂಡಿಸಲಾಗುತ್ತಿದೆ. ಇದು, ಸರಿಯಲ್ಲ. ಅವರು ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ’ ಎಂದು ಹೇಳಿದರು.</p><p>ಹರಿಯಾಣದ ಖನೌರಿ ಮತ್ತು ಶಂಬು ಗಡಿಯಲ್ಲಿ ನಿರಶನ ನಡೆಸುತ್ತಿದ್ದ ರೈತರು ಮಾರ್ಚ್ 19ರಂದು ಸ್ಥಳದಿಂದ ನಿರ್ಗಮಿಸಿದ್ದಾರೆ. ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಪಂಜಾಬ್ನ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>