<p><strong>ನವದೆಹಲಿ:</strong> ‘ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಿರುವ ‘ಧರ್ಮ’ದಂತಹ ತಾಂತ್ರಿಕ ಪದಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಯಬೇಕಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಗುರುವಾರ ಹೇಳಿದರು.</p>.<p>ಬಿಜೆಪಿಯ ಮಾಜಿ ಸಂಸದ ತರುಣ್ ವಿಜಯ್ ರಚನೆಯ ‘ಮಂತ್ರ ವಿಪ್ಲವ’ ಪುಸ್ತಕ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂತಹ ತಾಂತ್ರಿಕ ಪದಗಳ ನೈಜ ಅರ್ಥಗಳನ್ನು ಜನರು ತಿಳಿದುಕೊಳ್ಳಲು ಅನುವು ಮಾಡಿಕೊಡುವ ಗ್ರಂಥಗಳನ್ನು ಪ್ರಕಟಿಸುವ ಅಗತ್ಯವಿದೆ. ‘ಮಂತ್ರ ವಿಪ್ಲವ’ ಪದದ ಅರ್ಥ ‘ಸಂಭ್ರಮ (ಸೈದ್ಧಾಂತಿಕ ಗೊಂದಲ)’ ಎಂದು ತಿಳಿಸಿದರು.</p>.<p>‘ಒಂದು ನಿರ್ದಿಷ್ಟ ಕಾರ್ಯಸೂಚಿಯಡಿ ‘ಮಂತ್ರ ವಿಪ್ಲವ’ವನ್ನು ಸೃಷ್ಟಿಸಲು, ಜನರ ಮನಸ್ಸಿನಲ್ಲಿ ಪದಗಳಿಗೆ ವಿರೂಪಗೊಂಡ ಅರ್ಥಗಳನ್ನು ತುಂಬುವ ಮೂಲಕ ದೇಶ ಮತ್ತು ಅದರ ಅಸ್ಮಿತೆಗೆ ಹಾನಿ ಮಾಡುವ ಪ್ರಯತ್ನಗಳು ಅನೇಕ ವರ್ಷಗಳಿಂದ ನಡೆಯುತ್ತಿವೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಿರುವ ‘ಧರ್ಮ’ದಂತಹ ತಾಂತ್ರಿಕ ಪದಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಯಬೇಕಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಗುರುವಾರ ಹೇಳಿದರು.</p>.<p>ಬಿಜೆಪಿಯ ಮಾಜಿ ಸಂಸದ ತರುಣ್ ವಿಜಯ್ ರಚನೆಯ ‘ಮಂತ್ರ ವಿಪ್ಲವ’ ಪುಸ್ತಕ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂತಹ ತಾಂತ್ರಿಕ ಪದಗಳ ನೈಜ ಅರ್ಥಗಳನ್ನು ಜನರು ತಿಳಿದುಕೊಳ್ಳಲು ಅನುವು ಮಾಡಿಕೊಡುವ ಗ್ರಂಥಗಳನ್ನು ಪ್ರಕಟಿಸುವ ಅಗತ್ಯವಿದೆ. ‘ಮಂತ್ರ ವಿಪ್ಲವ’ ಪದದ ಅರ್ಥ ‘ಸಂಭ್ರಮ (ಸೈದ್ಧಾಂತಿಕ ಗೊಂದಲ)’ ಎಂದು ತಿಳಿಸಿದರು.</p>.<p>‘ಒಂದು ನಿರ್ದಿಷ್ಟ ಕಾರ್ಯಸೂಚಿಯಡಿ ‘ಮಂತ್ರ ವಿಪ್ಲವ’ವನ್ನು ಸೃಷ್ಟಿಸಲು, ಜನರ ಮನಸ್ಸಿನಲ್ಲಿ ಪದಗಳಿಗೆ ವಿರೂಪಗೊಂಡ ಅರ್ಥಗಳನ್ನು ತುಂಬುವ ಮೂಲಕ ದೇಶ ಮತ್ತು ಅದರ ಅಸ್ಮಿತೆಗೆ ಹಾನಿ ಮಾಡುವ ಪ್ರಯತ್ನಗಳು ಅನೇಕ ವರ್ಷಗಳಿಂದ ನಡೆಯುತ್ತಿವೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>