ನವದೆಹಲಿ: ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಗುರುವಾರ) ಕಟ್ಟಡ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪೊಲೀಸರು ಮತ್ತು ಸಂಸತ್ತಿನ ಭದ್ರತಾ ಸಿಬ್ಬಂದಿ ಸಂಕೀರ್ಣಕ್ಕೆ ಪ್ರವೇಶಿಸುವವರ ಗುರುತಿನ ಚೀಟಿಯನ್ನು ಪರಿಶೀಲಿಸುತ್ತಿದ್ದಾರೆ.
ಸಂಸತ್ ಸಂಕೀರ್ಣದಿಂದ ಕೆಲವೇ ಮೀಟರ್ ದೂರದಲ್ಲಿರುವ ಸಾರಿಗೆ ಭವನದ ಹೊರಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿ, ಗುರುತಿನ ಚೀಟಿ ಪರಿಶೀಲಿಸದ ಹೊರತು ಯಾರನ್ನೂ ಬ್ಯಾರಿಕೇಡ್ ದಾಟಿ ಹೋಗಲು ಅನುಮತಿ ನೀಡುತ್ತಿಲ್ಲ.