<p><strong>ಪಣಜಿ:</strong> ಉತ್ತರ ಗೋವಾದಲ್ಲಿ ದೇವಸ್ಥಾನದ ಉತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಸಾವಿಗೀಡಾದ ಒಂದು ದಿನದ ನಂತರ ಭಾನುವಾರ ಮತ್ತೆ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಆಚರಣೆಗಳು ಮುಂದುವರಿದವು. ದೇವಸ್ಥಾನಕ್ಕೆ ಬಾರದಂತೆ ಅದರ ಆಡಳಿತ ಸಮಿತಿಯು ಜನರಲ್ಲಿ ಮನವಿ ಮಾಡಿದೆ. </p>.<p>ನೂರಾರು ಭಕ್ತರು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರ ಮನೆಯಲ್ಲಿ ದೇವರ ಆರಾಧನೆ ಮಾಡಿದರು. ‘ಹೋಮಕುಂಡ’ ಆಚರಣೆಯನ್ನು ನಡೆಸಲಾಯಿತು. ಭಕ್ತರು ಕೆಂಡದ ಮೇಲೆ ನಡೆದು ತಮ್ಮ ಸೇವೆ ಸಲ್ಲಿಸಿದರು. </p>.<p>‘ದೇವಿಯು ದೇವಸ್ಥಾನಕ್ಕೆ ಮರಳುವ ಮುನ್ನ 4 ದಿನ ಸ್ಥಳೀಯರ ಮನೆಗಳಿಗೆ ಭೇಟಿ ನೀಡುತ್ತಾರೆ ಎಂಬ ನಂಬಿಕೆ ಇದೆ. ಈ ‘ಕೌಲ’ ಅವಧಿಯಲ್ಲಿ ಆಚರಣೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಕಾಲ್ತುಳಿತ ದುರಂತವು ದುರದೃಷ್ಟಕರ. ಗ್ರಾಮಕ್ಕೆ ಬಾರದೇ ಇರುವಂತೆ ಸಾರ್ವಜನಿಕರಲ್ಲಿ ನಾವು ಮನವಿ ಮಾಡಿದ್ದೇವೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ’ ಎಂದು ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರು ತಿಳಿಸಿದರು. </p>.<p>ಶಿರಗಾಂವ್ ಗ್ರಾಮದಲ್ಲಿ ಶ್ರೀ ಲೈರಾಯಿ ದೇವಿ ದೇವಸ್ಥಾನದ ವಾರ್ಷಿಕ ಉತ್ಸವದಲ್ಲಿ ಶನಿವಾರ ಮುಂಜಾನೆ ಕಾಲ್ತುಳಿತ ದುರಂತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರು ಸಾವಿಗೀಡಾಗಿದರು. ಗಾಯಗೊಂಡಿದ್ದ 70 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಉತ್ತರ ಗೋವಾದಲ್ಲಿ ದೇವಸ್ಥಾನದ ಉತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಸಾವಿಗೀಡಾದ ಒಂದು ದಿನದ ನಂತರ ಭಾನುವಾರ ಮತ್ತೆ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಆಚರಣೆಗಳು ಮುಂದುವರಿದವು. ದೇವಸ್ಥಾನಕ್ಕೆ ಬಾರದಂತೆ ಅದರ ಆಡಳಿತ ಸಮಿತಿಯು ಜನರಲ್ಲಿ ಮನವಿ ಮಾಡಿದೆ. </p>.<p>ನೂರಾರು ಭಕ್ತರು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರ ಮನೆಯಲ್ಲಿ ದೇವರ ಆರಾಧನೆ ಮಾಡಿದರು. ‘ಹೋಮಕುಂಡ’ ಆಚರಣೆಯನ್ನು ನಡೆಸಲಾಯಿತು. ಭಕ್ತರು ಕೆಂಡದ ಮೇಲೆ ನಡೆದು ತಮ್ಮ ಸೇವೆ ಸಲ್ಲಿಸಿದರು. </p>.<p>‘ದೇವಿಯು ದೇವಸ್ಥಾನಕ್ಕೆ ಮರಳುವ ಮುನ್ನ 4 ದಿನ ಸ್ಥಳೀಯರ ಮನೆಗಳಿಗೆ ಭೇಟಿ ನೀಡುತ್ತಾರೆ ಎಂಬ ನಂಬಿಕೆ ಇದೆ. ಈ ‘ಕೌಲ’ ಅವಧಿಯಲ್ಲಿ ಆಚರಣೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಕಾಲ್ತುಳಿತ ದುರಂತವು ದುರದೃಷ್ಟಕರ. ಗ್ರಾಮಕ್ಕೆ ಬಾರದೇ ಇರುವಂತೆ ಸಾರ್ವಜನಿಕರಲ್ಲಿ ನಾವು ಮನವಿ ಮಾಡಿದ್ದೇವೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ’ ಎಂದು ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರು ತಿಳಿಸಿದರು. </p>.<p>ಶಿರಗಾಂವ್ ಗ್ರಾಮದಲ್ಲಿ ಶ್ರೀ ಲೈರಾಯಿ ದೇವಿ ದೇವಸ್ಥಾನದ ವಾರ್ಷಿಕ ಉತ್ಸವದಲ್ಲಿ ಶನಿವಾರ ಮುಂಜಾನೆ ಕಾಲ್ತುಳಿತ ದುರಂತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರು ಸಾವಿಗೀಡಾಗಿದರು. ಗಾಯಗೊಂಡಿದ್ದ 70 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>