ನವದೆಹಲಿ: ‘ದೆಹಲಿಯ ನಿರ್ಭಯಾ ಪ್ರಕರಣಕ್ಕೆ 10 ವರ್ಷ ಸಂದಿದೆ. ಈ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದ ಒಂದು ದಿನವನ್ನು ಮಹಿಳೆಯರ ಸುರಕ್ಷತೆಯ ವಿಷಯಗಳ ಚರ್ಚೆಗಳಿಗಾಗಿ ಮೀಸಲಿಡಬೇಕು’ ಎಂದು ಕೋರಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಅವರು ಲೋಕಸಭೆ ಸ್ಪೀಕರ್ ಹಾಗೂ ರಾಜ್ಯಸಭೆ ಸಭಾಪತಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.