‘ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕೆಂಬುದು ನಮ್ಮ ಬೇಡಿಕೆ. ಹೈದರಾಬಾದ್ ಪ್ರಕರಣದಲ್ಲಿ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಕಳೆದ ವರ್ಷ ನಾನು ಪ್ರತಿಭಟನೆ ಮಾಡಿದ ಹತ್ತು ದಿನಗಳೊಳಗೆ ಕೇಂದ್ರ ಸರ್ಕಾರ, ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದವರಿಗೆ ಆರು ತಿಂಗಳೊಳಗೆ ಮರಣ ದಂಡನೆ ವಿಧಿಸುವ ಕಾನೂನು ತಂದಿತು. ಆದರೆ, ಇದುವರೆಗೂ ಆ ಕಾನೂನು ಜಾರಿಗೆ ಬರಲೇ ಇಲ್ಲ. ಪ್ರಧಾನಿ ಅವರು ಈಗಲಾದರೂ ಈ ಕಾನೂನನ್ನು ಜಾರಿಗೆ ತರಬೇಕು’ ಎಂದು ಅವರು ಒತ್ತಾಯಿಸಿದರು.