<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಬೆದರಿಕೆ ಹಾಕುತ್ತಿರುವ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದೆ.</p>.<p>‘ಪರಿಸ್ಥಿತಿಯನ್ನು ನಿಭಾಯಿಸದಿದ್ದರೆ, ಅರಾಜಕತೆಗೆ ಕಾರಣವಾಗಲಿದೆ’ ಎಂದೂ ಚುನಾವಣಾ ಆಯೋಗಕ್ಕೆ ಹೇಳಿದೆ.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್ಐಆರ್ 2) ರಾಜ್ಯ ಸರ್ಕಾರಗಳ ಸಹಕಾರದ ಕೊರತೆ ಬಗ್ಗೆಯೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಕಳವಳ ವ್ಯಕ್ತಪಡಿಸಿತು.</p>.<p>‘ವಾಸ್ತವಿಕ ನೆಲೆಗಟ್ಟಿನಲ್ಲಿ ಯಾವುದೇ ತೊಂದರೆಗಳಿಲ್ಲದೆ ಎಸ್ಐಆರ್ ನಡೆಸಲಾಗುತ್ತಿದೆಯಾ?’ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೀಠವು ಬಯಸಿದೆ ಎಂದಿತು.</p>.<p>‘ಸಹಕಾರದ ಕೊರತೆ, ಬಿಎಲ್ಒಗಳ ಕೆಲಸಕ್ಕೆ ಅಡ್ಡಿಯಾದಂತಹ ನಿದರ್ಶನಗಳನ್ನು ನ್ಯಾಯಪೀಠದ ಗಮನಕ್ಕೆ ತನ್ನಿ. ನಾವು ಸೂಕ್ತ ಆದೇಶ ನೀಡುತ್ತೇವೆ’ ಎಂದು ಆಯೋಗದ ಪರವಾಗಿ ಹಾಜರಾದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರಿಗೆ ತಿಳಿಸಿತು.</p>.<p>‘ರಾಜ್ಯ ಸರ್ಕಾರಗಳು ನಮ್ಮೊಂದಿಗೆ ಸಹಕರಿಸುವ ಜೊತೆಗೆ ರಕ್ಷಣೆ ನೀಡಬೇಕು. ಇದನ್ನು ನಿರಾಕರಿಸಿದರೆ, ಸ್ಥಳೀಯ ಪೊಲೀಸರನ್ನು ಆಯೋಗದ ವ್ಯಾಪ್ತಿಗೆ ತೆಗೆದುಕೊಳ್ಳುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇಲ್ಲ. ಪರಿಸ್ಥಿತಿ ಇನ್ನೂ ಸುಧಾರಿಸದಿದ್ದರೆ ಕೇಂದ್ರದ ಪಡೆಗಳನ್ನು ಕರೆಸಿಕೊಳ್ಳಬೇಕಾಗುತ್ತದೆ’ ಎಂದು ದ್ವಿವೇದಿ ಪೀಠದ ಗಮನಕ್ಕೆ ತಂದರು.</p>.<p>ಚುನಾವಣಾ ಪ್ರಕ್ರಿಯೆ ಆರಂಭವಾಗುವವರೆಗೂ ಆಯೋಗವು ಪೊಲೀಸರನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು.</p>.<p>ಎಸ್ಐಆರ್ ಕೆಲಸದಲ್ಲಿ ತೊಡಗಿರುವ ಬಿಎಲ್ಒಗಳು ಮತ್ತು ಇತರ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣಗಳನ್ನು ಎದುರಿಸಲು ಚುನಾವಣಾ ಆಯೋಗಕ್ಕೆ ಎಲ್ಲ ಸಾಂವಿಧಾನಿಕ ಅಧಿಕಾರವಿದೆ ಎಂದು ದ್ವಿವೇದಿ ಪೀಠಕ್ಕೆ ತಿಳಿಸಿದರು.</p>.<p>‘ಮತಗಟ್ಟೆ ಅಧಿಕಾರಿಗಳಿಗೆ ಬೆದರಿಕೆ ಹಾಕುವುದು ತುಂಬಾ ಗಂಭೀರವಾದ ವಿಷಯ’ ಎಂದ ಸಿಜೆಐ ಸೂರ್ಯಕಾಂತ್, ‘ಪರಿಸ್ಥಿತಿಯನ್ನು ನಿಭಾಯಿಸಿ, ಇಲ್ಲದಿದ್ದರೆ ಅರಾಜಕತೆಗೆ ಕಾರಣವಾಗುತ್ತದೆ’ ಎಂದು ಆಯೋಗಕ್ಕೆ ಹೇಳಿದರು.</p>.<p>ಎಸ್ಐಆರ್ ಪೂರ್ಣಗೊಂಡು ಮತದಾರರ ಅಂತಿಮ ಪಟ್ಟಿ ಪ್ರಕಟಿಸುವವರೆಗೂ ರಾಜ್ಯ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಆಯೋಗಕ್ಕೆ ನಿಯೋಜಿಸಲು ನಿರ್ದೇಶನ ನೀಡುವಂತೆ ಸನಾತನಿ ಸಂಘ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಆಯೋಗದಿಂದ ಪ್ರತಿಕ್ರಿಯೆ ಕೇಳಿತು.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಳ್ಳುವವರೆಗೂ ರಾಜ್ಯದಲ್ಲಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.</p>.<p>ಬಿಎಲ್ಒಗಳು ಮತ್ತು ಎಸ್ಐಆರ್ನಲ್ಲಿ ತೊಡಗಿರುವ ಇತರ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಚುನಾವಣಾ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ರಕ್ಷಿಸಲು ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ವಿ.ಗಿರಿ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಬೆದರಿಕೆ ಹಾಕುತ್ತಿರುವ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದೆ.</p>.<p>‘ಪರಿಸ್ಥಿತಿಯನ್ನು ನಿಭಾಯಿಸದಿದ್ದರೆ, ಅರಾಜಕತೆಗೆ ಕಾರಣವಾಗಲಿದೆ’ ಎಂದೂ ಚುನಾವಣಾ ಆಯೋಗಕ್ಕೆ ಹೇಳಿದೆ.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್ಐಆರ್ 2) ರಾಜ್ಯ ಸರ್ಕಾರಗಳ ಸಹಕಾರದ ಕೊರತೆ ಬಗ್ಗೆಯೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಕಳವಳ ವ್ಯಕ್ತಪಡಿಸಿತು.</p>.<p>‘ವಾಸ್ತವಿಕ ನೆಲೆಗಟ್ಟಿನಲ್ಲಿ ಯಾವುದೇ ತೊಂದರೆಗಳಿಲ್ಲದೆ ಎಸ್ಐಆರ್ ನಡೆಸಲಾಗುತ್ತಿದೆಯಾ?’ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೀಠವು ಬಯಸಿದೆ ಎಂದಿತು.</p>.<p>‘ಸಹಕಾರದ ಕೊರತೆ, ಬಿಎಲ್ಒಗಳ ಕೆಲಸಕ್ಕೆ ಅಡ್ಡಿಯಾದಂತಹ ನಿದರ್ಶನಗಳನ್ನು ನ್ಯಾಯಪೀಠದ ಗಮನಕ್ಕೆ ತನ್ನಿ. ನಾವು ಸೂಕ್ತ ಆದೇಶ ನೀಡುತ್ತೇವೆ’ ಎಂದು ಆಯೋಗದ ಪರವಾಗಿ ಹಾಜರಾದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರಿಗೆ ತಿಳಿಸಿತು.</p>.<p>‘ರಾಜ್ಯ ಸರ್ಕಾರಗಳು ನಮ್ಮೊಂದಿಗೆ ಸಹಕರಿಸುವ ಜೊತೆಗೆ ರಕ್ಷಣೆ ನೀಡಬೇಕು. ಇದನ್ನು ನಿರಾಕರಿಸಿದರೆ, ಸ್ಥಳೀಯ ಪೊಲೀಸರನ್ನು ಆಯೋಗದ ವ್ಯಾಪ್ತಿಗೆ ತೆಗೆದುಕೊಳ್ಳುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇಲ್ಲ. ಪರಿಸ್ಥಿತಿ ಇನ್ನೂ ಸುಧಾರಿಸದಿದ್ದರೆ ಕೇಂದ್ರದ ಪಡೆಗಳನ್ನು ಕರೆಸಿಕೊಳ್ಳಬೇಕಾಗುತ್ತದೆ’ ಎಂದು ದ್ವಿವೇದಿ ಪೀಠದ ಗಮನಕ್ಕೆ ತಂದರು.</p>.<p>ಚುನಾವಣಾ ಪ್ರಕ್ರಿಯೆ ಆರಂಭವಾಗುವವರೆಗೂ ಆಯೋಗವು ಪೊಲೀಸರನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು.</p>.<p>ಎಸ್ಐಆರ್ ಕೆಲಸದಲ್ಲಿ ತೊಡಗಿರುವ ಬಿಎಲ್ಒಗಳು ಮತ್ತು ಇತರ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣಗಳನ್ನು ಎದುರಿಸಲು ಚುನಾವಣಾ ಆಯೋಗಕ್ಕೆ ಎಲ್ಲ ಸಾಂವಿಧಾನಿಕ ಅಧಿಕಾರವಿದೆ ಎಂದು ದ್ವಿವೇದಿ ಪೀಠಕ್ಕೆ ತಿಳಿಸಿದರು.</p>.<p>‘ಮತಗಟ್ಟೆ ಅಧಿಕಾರಿಗಳಿಗೆ ಬೆದರಿಕೆ ಹಾಕುವುದು ತುಂಬಾ ಗಂಭೀರವಾದ ವಿಷಯ’ ಎಂದ ಸಿಜೆಐ ಸೂರ್ಯಕಾಂತ್, ‘ಪರಿಸ್ಥಿತಿಯನ್ನು ನಿಭಾಯಿಸಿ, ಇಲ್ಲದಿದ್ದರೆ ಅರಾಜಕತೆಗೆ ಕಾರಣವಾಗುತ್ತದೆ’ ಎಂದು ಆಯೋಗಕ್ಕೆ ಹೇಳಿದರು.</p>.<p>ಎಸ್ಐಆರ್ ಪೂರ್ಣಗೊಂಡು ಮತದಾರರ ಅಂತಿಮ ಪಟ್ಟಿ ಪ್ರಕಟಿಸುವವರೆಗೂ ರಾಜ್ಯ ಪೊಲೀಸ್ ಅಧಿಕಾರಿಗಳನ್ನು ಚುನಾವಣಾ ಆಯೋಗಕ್ಕೆ ನಿಯೋಜಿಸಲು ನಿರ್ದೇಶನ ನೀಡುವಂತೆ ಸನಾತನಿ ಸಂಘ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಆಯೋಗದಿಂದ ಪ್ರತಿಕ್ರಿಯೆ ಕೇಳಿತು.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಳ್ಳುವವರೆಗೂ ರಾಜ್ಯದಲ್ಲಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.</p>.<p>ಬಿಎಲ್ಒಗಳು ಮತ್ತು ಎಸ್ಐಆರ್ನಲ್ಲಿ ತೊಡಗಿರುವ ಇತರ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಚುನಾವಣಾ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ರಕ್ಷಿಸಲು ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ವಿ.ಗಿರಿ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>