<p><strong>ಜೈಪುರ</strong>: ರಾಜಸ್ಥಾನದಲ್ಲಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ವೊಂದು ಶುಕ್ರವಾರ(ಡಿ.20) ಹಲವು ವಾಹನಗಳಿಗೆ ಗುದ್ದಿದ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 18 ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 15ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಜೈಪುರ –ಅಜ್ಮೇರ್ ಹೆದ್ದಾರಿಯಲ್ಲಿ ಶಾಲೆಯೊಂದರ ಮುಂದೆ ಅವಘಡ ಸಂಭವಿಸಿದೆ. 30ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿವೆ.</p>.ಜಲ ಸಂಪನ್ಮೂಲ ಅಭಿವೃದ್ಧಿ: ಅಂಬೇಡ್ಕರ್ ಕೊಡುಗೆ ಮರೆತ ಕಾಂಗ್ರೆಸ್; ಪ್ರಧಾನಿ ಮೋದಿ.ಕಾಲ್ತುಳಿತ: ಮೃತ ಮಹಿಳೆ ಕುಟುಂಬಕ್ಕೆ ₹2 ಕೋಟಿ ನೀಡಿದ ಅಲ್ಲು ಅರ್ಜುನ್,ನಿರ್ಮಾಪಕರು. <p>‘ಅಪಘಾತದಲ್ಲಿ ಟ್ಯಾಂಕರ್ನ ಪೈಪ್ಗೆ ಹಾನಿಯಾದ ಕಾರಣ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಟ್ಯಾಂಕರ್ ಹಿಂದೆ ನಿಂತಿದ್ದ, ಎದುರಿನಿಂದ ಬರುತ್ತಿದ್ದ ಮತ್ತು ಅಪಘಾತಗೊಂಡ ವಾಹನಗಳು ಬೆಂಕಿಗಾಹುತಿಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p><p>ಅಪಘಾತದಲ್ಲಿ ಗಾಯಗೊಂಡಿರುವ ಹೆಚ್ಚಿನವರು ಇಲ್ಲಿನ ಎಸ್ಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ಮೂಲಕ ತಿಳಿಸಿದ್ದರು.</p><p>ರಾಜಸ್ಥಾನ ಸರ್ಕಾರವು ಮೃತರ ಕುಟುಂಬಕ್ಕೆ ₹5 ಲಕ್ಷ ಮತ್ತು ಗಾಯಗೊಂಡವರಿಗೆ ₹1 ಲಕ್ಷ ಪರಿಹಾರ ಘೋಷಿಸಿದೆ.</p>.ಉತ್ತರ ಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.36 ವರ್ಷಗಳ ಬಳಿಕ ರಶ್ದಿ ಅವರ ‘ಸಟಾನಿಕ್ ವರ್ಸಸ್’ ಪುಸ್ತಕ ದೆಹಲಿಯಲ್ಲಿ ಮಾರಾಟ.ಮಹರೌಲಿ ಉದ್ಯಾನದಲ್ಲಿರುವ ಕಟ್ಟಡಗಳಿಗೆ ಧಾರ್ಮಿಕ ಮಹತ್ವ: ಎಎಸ್ಐ.ಅಫಜಲಪುರ: ಟಿಟಿ–ಲಾರಿ–ಬೈಕ್ ನಡುವೆ ಅಪಘಾತ: ಮೂವರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದಲ್ಲಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ವೊಂದು ಶುಕ್ರವಾರ(ಡಿ.20) ಹಲವು ವಾಹನಗಳಿಗೆ ಗುದ್ದಿದ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 18 ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 15ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಜೈಪುರ –ಅಜ್ಮೇರ್ ಹೆದ್ದಾರಿಯಲ್ಲಿ ಶಾಲೆಯೊಂದರ ಮುಂದೆ ಅವಘಡ ಸಂಭವಿಸಿದೆ. 30ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿವೆ.</p>.ಜಲ ಸಂಪನ್ಮೂಲ ಅಭಿವೃದ್ಧಿ: ಅಂಬೇಡ್ಕರ್ ಕೊಡುಗೆ ಮರೆತ ಕಾಂಗ್ರೆಸ್; ಪ್ರಧಾನಿ ಮೋದಿ.ಕಾಲ್ತುಳಿತ: ಮೃತ ಮಹಿಳೆ ಕುಟುಂಬಕ್ಕೆ ₹2 ಕೋಟಿ ನೀಡಿದ ಅಲ್ಲು ಅರ್ಜುನ್,ನಿರ್ಮಾಪಕರು. <p>‘ಅಪಘಾತದಲ್ಲಿ ಟ್ಯಾಂಕರ್ನ ಪೈಪ್ಗೆ ಹಾನಿಯಾದ ಕಾರಣ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಟ್ಯಾಂಕರ್ ಹಿಂದೆ ನಿಂತಿದ್ದ, ಎದುರಿನಿಂದ ಬರುತ್ತಿದ್ದ ಮತ್ತು ಅಪಘಾತಗೊಂಡ ವಾಹನಗಳು ಬೆಂಕಿಗಾಹುತಿಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p><p>ಅಪಘಾತದಲ್ಲಿ ಗಾಯಗೊಂಡಿರುವ ಹೆಚ್ಚಿನವರು ಇಲ್ಲಿನ ಎಸ್ಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ಮೂಲಕ ತಿಳಿಸಿದ್ದರು.</p><p>ರಾಜಸ್ಥಾನ ಸರ್ಕಾರವು ಮೃತರ ಕುಟುಂಬಕ್ಕೆ ₹5 ಲಕ್ಷ ಮತ್ತು ಗಾಯಗೊಂಡವರಿಗೆ ₹1 ಲಕ್ಷ ಪರಿಹಾರ ಘೋಷಿಸಿದೆ.</p>.ಉತ್ತರ ಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.36 ವರ್ಷಗಳ ಬಳಿಕ ರಶ್ದಿ ಅವರ ‘ಸಟಾನಿಕ್ ವರ್ಸಸ್’ ಪುಸ್ತಕ ದೆಹಲಿಯಲ್ಲಿ ಮಾರಾಟ.ಮಹರೌಲಿ ಉದ್ಯಾನದಲ್ಲಿರುವ ಕಟ್ಟಡಗಳಿಗೆ ಧಾರ್ಮಿಕ ಮಹತ್ವ: ಎಎಸ್ಐ.ಅಫಜಲಪುರ: ಟಿಟಿ–ಲಾರಿ–ಬೈಕ್ ನಡುವೆ ಅಪಘಾತ: ಮೂವರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>