ಗುರುವಾರ ರಾಮನವಮಿ ಆಚರಣೆ ವೇಳೆ ದೇವಸ್ಥಾನದಲ್ಲಿ ಜನ ದಟ್ಟಣೆ ಏರ್ಪಟ್ಟಿತ್ತು. ಅಲ್ಲಿರುವ ಬಾವಿಯಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರ ದಂಡು ಜಮಾಯಿಸಿತ್ತು. ಈ ವೇಳೆ ನಾಲ್ಕು ದಶಕಗಳಷ್ಟು ಹಳೆಯ ಮೆಟ್ಟಿಲು ಕುಸಿದಿದೆ. ಪರಿಣಾಮ ಅದರ ಮೇಲೆ ನಿಂತಿದ್ದ ಹಲವಾರು ಜನರು ಬಾವಿಗೆ ಬಿದ್ದಿದ್ದು, 11 ಜನರ ಮೃತದೇಹವನ್ನು ಅಗ್ನಿಶಾಮಕ ದಳದವರು ಹೊರತೆಗೆದಿದ್ದರು. ಉಳಿದವರ ಪತ್ತೆಗಾಗಿ ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ) ಹಾಗೂ ಸೇನೆಯ ಸಹಾಯದಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.