<p><strong>ನಾಗ್ಪುರ:</strong> ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಇಂದು (ಶನಿವಾರ) ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರದ್ಧಾ ವನರಾಜ್ ಪಾಟೀಲ್ ಎಂಬುವವರು ಸಾವಿಗೀಡಾದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಪ್ರಮೋದ ಚಾವರೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಾಂಡೆ ಆಸ್ಪತ್ರೆ ನಿರ್ದೇಶಕ ಡಾ. ಪಿನಾಕ್ ದಾಂಡೆ ಪಿಟಿಐಗೆ ತಿಳಿಸಿದ್ದಾರೆ.</p><p>ಇದರೊಂದಿಗೆ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರು ಮೃತಪಟ್ಟಿದ್ದಾರೆ.</p><p>ನಾಗ್ಪುರ ಸಮೀಪದ ಧಾಮ್ನಾ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸ್ಫೋಟ ಸಂಭವಿಸಿತ್ತು. ಗಾಯಗೊಂಡಿದ್ದ 9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟ ಸಂಭವಿಸಿದಾಗ, ಸಂತ್ರಸ್ತರು ಪ್ಯಾಕಿಂಗ್ ವಿಭಾಗದಲ್ಲಿದ್ದರು ಎನ್ನಲಾಗಿದೆ.</p><p>ಘಟನೆ ಸಂಬಂಧ ಚಾಮುಂಡಿ ಎಕ್ಸ್ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆ ನಿರ್ದೇಶಕ ಜಯ್ ಖೇಮ್ಖಾ ಹಾಗೂ ವ್ಯವಸ್ಥಾಪಕ ಸಾಗರ್ ದೇಶಮುಖ್ ಅವರನ್ನು ಬಂಧಿಸಲಾಗಿದ್ದು, ಹಿಂಗ್ನಾ ಪ್ರಥಮ ದರ್ಜೆ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ತಲಾ ₹50 ಸಾವಿರ ಶೂರಿಟಿ ಆಧಾರದ ಮೇಲೆ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.</p>.ನಾಗ್ಪುರ ಕಾರ್ಖಾನೆ ಸ್ಫೋಟ | 6 ಕಾರ್ಮಿಕರು ಸಾವು; ನಿರ್ದೇಶಕ, ವ್ಯವಸ್ಥಾಪಕ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಇಂದು (ಶನಿವಾರ) ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರದ್ಧಾ ವನರಾಜ್ ಪಾಟೀಲ್ ಎಂಬುವವರು ಸಾವಿಗೀಡಾದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಪ್ರಮೋದ ಚಾವರೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಾಂಡೆ ಆಸ್ಪತ್ರೆ ನಿರ್ದೇಶಕ ಡಾ. ಪಿನಾಕ್ ದಾಂಡೆ ಪಿಟಿಐಗೆ ತಿಳಿಸಿದ್ದಾರೆ.</p><p>ಇದರೊಂದಿಗೆ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರು ಮೃತಪಟ್ಟಿದ್ದಾರೆ.</p><p>ನಾಗ್ಪುರ ಸಮೀಪದ ಧಾಮ್ನಾ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸ್ಫೋಟ ಸಂಭವಿಸಿತ್ತು. ಗಾಯಗೊಂಡಿದ್ದ 9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟ ಸಂಭವಿಸಿದಾಗ, ಸಂತ್ರಸ್ತರು ಪ್ಯಾಕಿಂಗ್ ವಿಭಾಗದಲ್ಲಿದ್ದರು ಎನ್ನಲಾಗಿದೆ.</p><p>ಘಟನೆ ಸಂಬಂಧ ಚಾಮುಂಡಿ ಎಕ್ಸ್ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆ ನಿರ್ದೇಶಕ ಜಯ್ ಖೇಮ್ಖಾ ಹಾಗೂ ವ್ಯವಸ್ಥಾಪಕ ಸಾಗರ್ ದೇಶಮುಖ್ ಅವರನ್ನು ಬಂಧಿಸಲಾಗಿದ್ದು, ಹಿಂಗ್ನಾ ಪ್ರಥಮ ದರ್ಜೆ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ತಲಾ ₹50 ಸಾವಿರ ಶೂರಿಟಿ ಆಧಾರದ ಮೇಲೆ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.</p>.ನಾಗ್ಪುರ ಕಾರ್ಖಾನೆ ಸ್ಫೋಟ | 6 ಕಾರ್ಮಿಕರು ಸಾವು; ನಿರ್ದೇಶಕ, ವ್ಯವಸ್ಥಾಪಕ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>