ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 12ಕ್ಕೆ ಏರಿಕೆ, ನಾಲ್ವರು ಪೊಲೀಸರ ಅಮಾನತು

Published 15 ಮೇ 2023, 4:33 IST
Last Updated 15 ಮೇ 2023, 4:33 IST
ಅಕ್ಷರ ಗಾತ್ರ

ಚೆನ್ನೈ: ಚೆಂಗಲ್‌ಪಟ್ಟು ಮತ್ತು ವಿಲ್ಲುಪುರ ಜಿಲ್ಲೆಗಳಲ್ಲಿ ಸಂಭವಿಸಿದ ಕಳ್ಳಬಟ್ಟಿ ದುರಂತದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಇನ್ಸ್‌ಪೆಕ್ಟರ್‌ಗಳೂ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರವನ್ನೂ ಘೋಷಣೆ ಮಾಡಲಾಗಿದೆ.

ಈ ಪ್ರಕರಣದಲ್ಲಿ ಅಮ್ರಾನ್‌ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೂ ಕೆಲವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಶನಿವಾರ ರಾತ್ರಿ ವಿಲ್ಲುಪುರ ಜಿಲ್ಲೆಯ ಮರಕ್ಕನಂ ತಾಲ್ಲೂಕಿನ ಇಕ್ಕಿಯಾಕುಪ್ಪಂನಲ್ಲಿ ಕಳ್ಳಬಟ್ಟಿ ಕುಡಿದು ಮಹಿಳೆ ಸಹಿತ ಐವರು ಮೃತಪಟ್ಟಿದ್ದರು. ಹಲವರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಮೃತರು 45–55 ವರ್ಷ ವಯಸ್ಸಿನವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT