<p><strong>ನವದೆಹಲಿ:</strong> ರೈತರ ಸಾಲ ಹೆಚ್ಚಾಗಿದೆ. ಆದರೆ ಆದಾಯದಲ್ಲಿ ಹೆಚ್ಚಳವಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>2018ರ ವರೆಗಿನ ಐದು ವರ್ಷಗಳಲ್ಲಿ ರೈತ ಕುಟುಂಬಗಳ ಸಾಲವು ಸರಾಸರಿ ಶೇಕಡಾ 57ರಷ್ಟು ಹೆಚ್ಚಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ಟೀಟ್ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/cji-ramana-terms-indira-gandhis-disqualification-in-1975-a-judgement-of-great-courage-865705.html" itemprop="url">ಇಂದಿರಾರನ್ನು ಅನರ್ಹಗೊಳಿಸಿದ್ದು ‘ಮಹಾ ಧೈರ್ಯದ ತೀರ್ಪು’: ಸಿಜೆಐ ರಮಣ </a></p>.<p>'ರೈತರ ಆದಾಯ ಹೆಚ್ಚಾಗಲಿಲ್ಲ. ಆದರೆ ಸಾಲ ಹೆಚ್ಚಾಗಿದೆ. ದೇಶವನ್ನು ಪೋಷಿಸುವರು ತನ್ನ ಕುಟುಂಬಕ್ಕೆ ಆಹಾರವನ್ನು ತುಂಬಲು ಸಾಧ್ಯವಾಗದಿದ್ದಾಗ ಏನು ಮಾಡುವುದು?' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಈ ಮೊದಲು ನಿರುದ್ಯೋಗದ ಬಗ್ಗೆ ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಕೇಂದ್ರ ಸರ್ಕಾರವು 'ಆತ್ಮನಿರ್ಭರ್' ಕರಾಳ ನಗರವನ್ನಾಗಿ ಮಾಡಿದೆ ಎಂದು ವ್ಯಂಗ್ಯವಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರೈತರ ಸಾಲ ಹೆಚ್ಚಾಗಿದೆ. ಆದರೆ ಆದಾಯದಲ್ಲಿ ಹೆಚ್ಚಳವಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>2018ರ ವರೆಗಿನ ಐದು ವರ್ಷಗಳಲ್ಲಿ ರೈತ ಕುಟುಂಬಗಳ ಸಾಲವು ಸರಾಸರಿ ಶೇಕಡಾ 57ರಷ್ಟು ಹೆಚ್ಚಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ಟೀಟ್ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/cji-ramana-terms-indira-gandhis-disqualification-in-1975-a-judgement-of-great-courage-865705.html" itemprop="url">ಇಂದಿರಾರನ್ನು ಅನರ್ಹಗೊಳಿಸಿದ್ದು ‘ಮಹಾ ಧೈರ್ಯದ ತೀರ್ಪು’: ಸಿಜೆಐ ರಮಣ </a></p>.<p>'ರೈತರ ಆದಾಯ ಹೆಚ್ಚಾಗಲಿಲ್ಲ. ಆದರೆ ಸಾಲ ಹೆಚ್ಚಾಗಿದೆ. ದೇಶವನ್ನು ಪೋಷಿಸುವರು ತನ್ನ ಕುಟುಂಬಕ್ಕೆ ಆಹಾರವನ್ನು ತುಂಬಲು ಸಾಧ್ಯವಾಗದಿದ್ದಾಗ ಏನು ಮಾಡುವುದು?' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಈ ಮೊದಲು ನಿರುದ್ಯೋಗದ ಬಗ್ಗೆ ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಕೇಂದ್ರ ಸರ್ಕಾರವು 'ಆತ್ಮನಿರ್ಭರ್' ಕರಾಳ ನಗರವನ್ನಾಗಿ ಮಾಡಿದೆ ಎಂದು ವ್ಯಂಗ್ಯವಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>