<p><strong>ಲಖನೌ: </strong>ಉತ್ತರ ಪ್ರದೇಶದ ವಿಧಾನಸಭೆಗೆ 2022ರಲ್ಲಿ ನಡೆಯಲಿರುವ ಚುನಾವಣೆಯ ನೇತೃತ್ವವನ್ನು ಪ್ರಿಯಾಂಕಾ ಗಾಂಧಿ ಅವರು ವಹಿಸಬೇಕು ಎಂಬುದು ಪಕ್ಷದ ಕಾರ್ಯಕರ್ತರ ನಿಲುವು. ಆದರೆ ಆ ಬಗ್ಗೆ ಅಂತಿಮ ತೀರ್ಮಾನವನ್ನು ಸ್ವತಃ ಪ್ರಿಯಾಂಕಾ ಹಾಗೂ ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ತೆಗೆದುಕೊಳ್ಳಬೇಕು ಎಂದು ಪಕ್ಷದ ಮುಖಂಡ ಜಿತಿನ್ ಪ್ರಸಾದ್ಹೇಳಿದ್ದಾರೆ.</p>.<p>‘2022ರ ಚುನಾವಣೆಯಲ್ಲಿ ಕಾಂಗ್ರೆಸ್ ಯಾರ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಪಕ್ಷದ ಕಾರ್ಯಕಾರಿ ಸಮಿತಿಯ ಆಹ್ವಾನಿತ ಸದಸ್ಯರಾಗಿರುವ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಸುದ್ದಿಗಳನ್ನು ನಿರ್ವಹಿಸುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದ ಅವರು, ‘ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರೇ ಯಾಕೆ ಹೆಚ್ಚಾಗಿ ಅಪರಾಧಕ್ಕೆ ಬಲಿಯಾಗುತ್ತಿದ್ದಾರೆ, ಸರ್ಕಾರದ ಉದ್ದೇಶವಾದರೂ ಏನು’ ಎಂದು ಪ್ರಶ್ನಿಸಿದ್ದಾರೆ.</p>.<p>‘ವಿಕಾಸ್ ದುಬೆಯ ಎನ್ಕೌಂಟರ್ ನಕಲಿಯಾಗಿತ್ತು. ಇದರಲ್ಲಿ ಸರ್ಕಾರದ ಉದ್ದೇಶವೇ ಶಂಕಾಸ್ಪದವಾಗಿದೆ. ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ಈ ಎನ್ಕೌಂಟರ್ನ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ. ವಿಕಾಸ್ ದುಬೆ ಇಷ್ಟೊಂದು ದೊಡ್ಡ ಅಪರಾಧಿಯಾಗಲು ಬಿಟ್ಟವರು ಯಾರು ಎಂಬುದನ್ನು ಈಗ ಮುಚ್ಚಿಡಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>.<p>‘ಪ್ರಿಯಾಂಕಾ ಅವರನ್ನು ‘ಟ್ವಿಟರ್ ನಾಯಕಿ’ ಎಂದು ಟೀಕಿಸುವವರು, ಮೊದಲು ತಾವು ಮಾಡಿದ್ದೇನು ಎಂಬುದನ್ನು ಜನರಿಗೆ ದಾಖಲೆ ಸಹಿತ ತಿಳಿಸಬೇಕು. ರಾಜ್ಯದ ಆರೋಗ್ಯ, ಮೂಲಸೌಲಭ್ಯ, ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ಏನೆಂಬುದನ್ನು ಅಂಥವರು ತಿಳಿಸಬೇಕು' ಎಂದು ಪ್ರಸಾದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ ವಿಧಾನಸಭೆಗೆ 2022ರಲ್ಲಿ ನಡೆಯಲಿರುವ ಚುನಾವಣೆಯ ನೇತೃತ್ವವನ್ನು ಪ್ರಿಯಾಂಕಾ ಗಾಂಧಿ ಅವರು ವಹಿಸಬೇಕು ಎಂಬುದು ಪಕ್ಷದ ಕಾರ್ಯಕರ್ತರ ನಿಲುವು. ಆದರೆ ಆ ಬಗ್ಗೆ ಅಂತಿಮ ತೀರ್ಮಾನವನ್ನು ಸ್ವತಃ ಪ್ರಿಯಾಂಕಾ ಹಾಗೂ ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ತೆಗೆದುಕೊಳ್ಳಬೇಕು ಎಂದು ಪಕ್ಷದ ಮುಖಂಡ ಜಿತಿನ್ ಪ್ರಸಾದ್ಹೇಳಿದ್ದಾರೆ.</p>.<p>‘2022ರ ಚುನಾವಣೆಯಲ್ಲಿ ಕಾಂಗ್ರೆಸ್ ಯಾರ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಪಕ್ಷದ ಕಾರ್ಯಕಾರಿ ಸಮಿತಿಯ ಆಹ್ವಾನಿತ ಸದಸ್ಯರಾಗಿರುವ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ರಾಜ್ಯ ಸರ್ಕಾರ ಸುದ್ದಿಗಳನ್ನು ನಿರ್ವಹಿಸುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದ ಅವರು, ‘ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರೇ ಯಾಕೆ ಹೆಚ್ಚಾಗಿ ಅಪರಾಧಕ್ಕೆ ಬಲಿಯಾಗುತ್ತಿದ್ದಾರೆ, ಸರ್ಕಾರದ ಉದ್ದೇಶವಾದರೂ ಏನು’ ಎಂದು ಪ್ರಶ್ನಿಸಿದ್ದಾರೆ.</p>.<p>‘ವಿಕಾಸ್ ದುಬೆಯ ಎನ್ಕೌಂಟರ್ ನಕಲಿಯಾಗಿತ್ತು. ಇದರಲ್ಲಿ ಸರ್ಕಾರದ ಉದ್ದೇಶವೇ ಶಂಕಾಸ್ಪದವಾಗಿದೆ. ಸುಪ್ರೀಂ ಕೋರ್ಟ್ನ ಮೇಲ್ವಿಚಾರಣೆಯಲ್ಲಿ ಈ ಎನ್ಕೌಂಟರ್ನ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ. ವಿಕಾಸ್ ದುಬೆ ಇಷ್ಟೊಂದು ದೊಡ್ಡ ಅಪರಾಧಿಯಾಗಲು ಬಿಟ್ಟವರು ಯಾರು ಎಂಬುದನ್ನು ಈಗ ಮುಚ್ಚಿಡಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>.<p>‘ಪ್ರಿಯಾಂಕಾ ಅವರನ್ನು ‘ಟ್ವಿಟರ್ ನಾಯಕಿ’ ಎಂದು ಟೀಕಿಸುವವರು, ಮೊದಲು ತಾವು ಮಾಡಿದ್ದೇನು ಎಂಬುದನ್ನು ಜನರಿಗೆ ದಾಖಲೆ ಸಹಿತ ತಿಳಿಸಬೇಕು. ರಾಜ್ಯದ ಆರೋಗ್ಯ, ಮೂಲಸೌಲಭ್ಯ, ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ಏನೆಂಬುದನ್ನು ಅಂಥವರು ತಿಳಿಸಬೇಕು' ಎಂದು ಪ್ರಸಾದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>