<p><strong>ನವದೆಹಲಿ</strong>: 'ಯಾವುದೇ ಒತ್ತಡಕ್ಕೆ ಒಳಗಾಗಿ ರಾಜೀನಾಮೆ ನೀಡಿಲ್ಲ. ನನಗೆ ಅನ್ಯಾಯ ಸಹಿಸಲಾಗುತ್ತಿರಲಿಲ್ಲ. ಹೀಗಾಗಿ, ರಾಜೀನಾಮೆ ನೀಡಿರುವೆ' ಎಂದು ದೆಹಲಿ ಸರ್ಕಾರದ ಸಚಿವ ರಾಜಕುಮಾರ್ ಆನಂದ್ ಅವರು ಗುರುವಾರ ತಿಳಿಸಿದ್ದಾರೆ.</p>.<p>ಆನಂದ್ ಬಿಜೆಪಿ ಸೇರಬಹುದು ಎಂಬ ಎಎಪಿ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಆನಂದ್ ಅವರು, ‘ರಾಜಕೀಯ ಎನ್ನುವುದು ಸಾಧ್ಯತೆಗಳ ಆಟ, ಮುಂದೇನಾಗಬಹುದು ಎಂದು ಯಾರಿಗೂ ಗೊತ್ತಾಗಲ್ಲ’ ಎಂದರು.</p>.<p>ಇ.ಡಿಯಿಂದ ನೋಟಿಸ್ ಬಂದ ಕಾರಣಕ್ಕೆ ಆನಂದ್ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಆಪ್ ನಾಯಕರ ಆರೋಪಕ್ಕೆ ಉತ್ತರಿಸಿದ ಅವರು, ‘ನನಗೆ ಇ.ಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ’ ಎಂದರು.</p>.<p>‘ತಾಂತ್ರಿಕವಾಗಿ ಆನಂದ್ ಅವರು ಇನ್ನೂ ಸಚಿವರಾಗಿಯೇ ಇದ್ದಾರೆ. ಆನಂದ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ತಲುಪಿಸಿದ್ದಾರೆ. ಆದರೆ ಮುಖ್ಯಮಂತ್ರಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ರಾಜೀನಾಮೆ ಪತ್ರವು ಮುಖ್ಯಮಂತ್ರಿಯವರನ್ನು ತಲುಪುವ ಸಾಧ್ಯತೆಗಳಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಸಚಿವರ ರಾಜೀನಾಮೆ ಪತ್ರಕ್ಕೆ ಮುಖ್ಯಮಂತ್ರಿಗಳ ಸಹಿ ಬಿದ್ದ ಬಳಿಕ ಲೆಫ್ಟಿನೆಂಟ್ ಗವರ್ನರ್ ಅವರ ಅಂಗೀಕಾರಕ್ಕೆ ಕಳುಹಿಸಲಾಗುತ್ತದೆ. ಆದ್ದರಿಂದ ಆನಂದ್ ಅವರ ರಾಜೀನಾಮೆ ಪತ್ರ ಅಂಗೀಕಾರಗೊಂಡಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<p>‘ಆನಂದ್ ಅವರ ರಾಜೀನಾಮೆ ಪತ್ರ ಸ್ವೀಕಾರವಾಗಿಲ್ಲ’ ಎಂದು ದೆಹಲಿ ವಿಧಾನಸಭೆ ಸ್ಪೀಕರ್ ಅವರ ಕಚೇರಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ಯಾವುದೇ ಒತ್ತಡಕ್ಕೆ ಒಳಗಾಗಿ ರಾಜೀನಾಮೆ ನೀಡಿಲ್ಲ. ನನಗೆ ಅನ್ಯಾಯ ಸಹಿಸಲಾಗುತ್ತಿರಲಿಲ್ಲ. ಹೀಗಾಗಿ, ರಾಜೀನಾಮೆ ನೀಡಿರುವೆ' ಎಂದು ದೆಹಲಿ ಸರ್ಕಾರದ ಸಚಿವ ರಾಜಕುಮಾರ್ ಆನಂದ್ ಅವರು ಗುರುವಾರ ತಿಳಿಸಿದ್ದಾರೆ.</p>.<p>ಆನಂದ್ ಬಿಜೆಪಿ ಸೇರಬಹುದು ಎಂಬ ಎಎಪಿ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಆನಂದ್ ಅವರು, ‘ರಾಜಕೀಯ ಎನ್ನುವುದು ಸಾಧ್ಯತೆಗಳ ಆಟ, ಮುಂದೇನಾಗಬಹುದು ಎಂದು ಯಾರಿಗೂ ಗೊತ್ತಾಗಲ್ಲ’ ಎಂದರು.</p>.<p>ಇ.ಡಿಯಿಂದ ನೋಟಿಸ್ ಬಂದ ಕಾರಣಕ್ಕೆ ಆನಂದ್ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಆಪ್ ನಾಯಕರ ಆರೋಪಕ್ಕೆ ಉತ್ತರಿಸಿದ ಅವರು, ‘ನನಗೆ ಇ.ಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ’ ಎಂದರು.</p>.<p>‘ತಾಂತ್ರಿಕವಾಗಿ ಆನಂದ್ ಅವರು ಇನ್ನೂ ಸಚಿವರಾಗಿಯೇ ಇದ್ದಾರೆ. ಆನಂದ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ತಲುಪಿಸಿದ್ದಾರೆ. ಆದರೆ ಮುಖ್ಯಮಂತ್ರಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ರಾಜೀನಾಮೆ ಪತ್ರವು ಮುಖ್ಯಮಂತ್ರಿಯವರನ್ನು ತಲುಪುವ ಸಾಧ್ಯತೆಗಳಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಸಚಿವರ ರಾಜೀನಾಮೆ ಪತ್ರಕ್ಕೆ ಮುಖ್ಯಮಂತ್ರಿಗಳ ಸಹಿ ಬಿದ್ದ ಬಳಿಕ ಲೆಫ್ಟಿನೆಂಟ್ ಗವರ್ನರ್ ಅವರ ಅಂಗೀಕಾರಕ್ಕೆ ಕಳುಹಿಸಲಾಗುತ್ತದೆ. ಆದ್ದರಿಂದ ಆನಂದ್ ಅವರ ರಾಜೀನಾಮೆ ಪತ್ರ ಅಂಗೀಕಾರಗೊಂಡಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<p>‘ಆನಂದ್ ಅವರ ರಾಜೀನಾಮೆ ಪತ್ರ ಸ್ವೀಕಾರವಾಗಿಲ್ಲ’ ಎಂದು ದೆಹಲಿ ವಿಧಾನಸಭೆ ಸ್ಪೀಕರ್ ಅವರ ಕಚೇರಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>