<p><strong>ಮುಂಬೈ</strong>: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.</p>.<p>‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ.</p>.<p>ಉದ್ಧವ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಏಕನಾಥ್ ಶಿಂದೆ, ಸುಪ್ರೀಂ ಕೋರ್ಟ್ನಲ್ಲಾಗಲಿ ಅಥವಾ ಕೇಂದ್ರದ ಬಳಿಯಾಗಲಿ, ಪ್ರತಿ ಇಂಚು ಭೂಮಿಗಾಗಿ ಹೋರಾಡುತ್ತೇವೆ. ಗಡಿಯಲ್ಲಿ ವಾಸಿಸುವವರ ಮೇಲಿನ ಅನ್ಯಾಯದ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.</p>.<p>‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ.</p>.<p>ಉದ್ಧವ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಏಕನಾಥ್ ಶಿಂದೆ, ಸುಪ್ರೀಂ ಕೋರ್ಟ್ನಲ್ಲಾಗಲಿ ಅಥವಾ ಕೇಂದ್ರದ ಬಳಿಯಾಗಲಿ, ಪ್ರತಿ ಇಂಚು ಭೂಮಿಗಾಗಿ ಹೋರಾಡುತ್ತೇವೆ. ಗಡಿಯಲ್ಲಿ ವಾಸಿಸುವವರ ಮೇಲಿನ ಅನ್ಯಾಯದ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>