<p><strong>ನವದೆಹಲಿ:</strong> ‘ದೇಶದಲ್ಲಿ ಒಂಟೆ ಸಂತತಿ ತೀವ್ರವಾಗಿ ಕುಸಿಯುತ್ತಿದೆ. ಹಾಗಾಗಿ, ಇವುಗಳನ್ನು ಸಾಂಪ್ರದಾಯಿಕವಾಗಿ ಸಾಕಣೆಯಲ್ಲಿ ತೊಡಗಿರುವ ಸಮುದಾಯಗಳ ಜೀವನೋಪಾಯಕ್ಕೆ ನೆರವು ನೀಡುವ ಅಗತ್ಯವಿದೆ’ ಎಂದು ಪಶುಪಾಲನಾ ಮತ್ತು ಹೈನುಗಾರಿಕೆ ಇಲಾಖೆಯ ಕಾರ್ಯದರ್ಶಿ ಅಲ್ಕಾ ಉಪಾಧ್ಯಾಯ ಹೇಳಿದ್ದಾರೆ.</p>.<p>ರಾಜಸ್ಥಾನದ ಬಿಕಾನೇರ್ನಲ್ಲಿ ಶುಕ್ರವಾರ ನಡೆದ ಒಂಟೆ ಹಾಲು ಉತ್ಪಾದನೆ ಕುರಿತ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಜಾನುವಾರು ಮಿಷನ್ನಡಿ ಹುಲ್ಲುಗಾವಲುಗಳ ಸಂರಕ್ಷಣೆ ಮತ್ತು ಒಂಟೆ ಸಾಕಣೆದಾರರಿಗೆ ಪ್ರೋತ್ಸಾಹ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.</p>.<p>ಒಂಟೆ ಸಾಕಣೆದಾರರು ಹಾಗೂ ಹೈನುಗಾರಿಕೆ ವಲಯದ 150ಕ್ಕೂ ಹೆಚ್ಚು ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ದೇಶದಲ್ಲಿ ಒಂಟೆ ಹಾಲಿನ ವಲಯವನ್ನು ಸದೃಢಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು.</p>.<p>2024ನೇ ವರ್ಷವನ್ನು ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಒಂಟೆಗಳ ವರ್ಷವೆಂದು ಘೋಷಿಸಿದೆ. </p>.<p>ದೇಶದಲ್ಲಿ ಹಸುವಿನ ಹಾಲು ಹೊರತಾಗಿ ಒಂಟೆ ಸೇರಿ ಇತರೆ ಪ್ರಾಣಿಗಳ ಹಾಲಿನ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ. ಈ ಹಾಲಿನಲ್ಲಿ ಅಧಿಕ ಪೌಷ್ಟಿಕಾಂಶವಿದೆ. ರೋಗಗಳನ್ನು ವಾಸಿ ಮಾಡುವ ಗುಣವಿದೆ. ಹಾಗಾಗಿ, ಈ ಹಾಲಿನ ಸುಸ್ಥಿರ ಉತ್ಪಾದನೆಗೆ ಒತ್ತು ನೀಡುವ ಮೂಲಕ ಜನರ ಜೀವನಮಟ್ಟದ ಸುಧಾರಣೆಗೆ ಕ್ರಮವಹಿಸಲು ನಿರ್ಧರಿಸಲಾಗಿದೆ ಎಂದು ಆಹಾರ ಮತ್ತು ಕೃಷಿ ಸಂಘಟನೆಯ ಪ್ರತಿನಿಧಿ ಟಕಾಯುಕಿ ಹಗಿವಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೇಶದಲ್ಲಿ ಒಂಟೆ ಸಂತತಿ ತೀವ್ರವಾಗಿ ಕುಸಿಯುತ್ತಿದೆ. ಹಾಗಾಗಿ, ಇವುಗಳನ್ನು ಸಾಂಪ್ರದಾಯಿಕವಾಗಿ ಸಾಕಣೆಯಲ್ಲಿ ತೊಡಗಿರುವ ಸಮುದಾಯಗಳ ಜೀವನೋಪಾಯಕ್ಕೆ ನೆರವು ನೀಡುವ ಅಗತ್ಯವಿದೆ’ ಎಂದು ಪಶುಪಾಲನಾ ಮತ್ತು ಹೈನುಗಾರಿಕೆ ಇಲಾಖೆಯ ಕಾರ್ಯದರ್ಶಿ ಅಲ್ಕಾ ಉಪಾಧ್ಯಾಯ ಹೇಳಿದ್ದಾರೆ.</p>.<p>ರಾಜಸ್ಥಾನದ ಬಿಕಾನೇರ್ನಲ್ಲಿ ಶುಕ್ರವಾರ ನಡೆದ ಒಂಟೆ ಹಾಲು ಉತ್ಪಾದನೆ ಕುರಿತ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಜಾನುವಾರು ಮಿಷನ್ನಡಿ ಹುಲ್ಲುಗಾವಲುಗಳ ಸಂರಕ್ಷಣೆ ಮತ್ತು ಒಂಟೆ ಸಾಕಣೆದಾರರಿಗೆ ಪ್ರೋತ್ಸಾಹ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.</p>.<p>ಒಂಟೆ ಸಾಕಣೆದಾರರು ಹಾಗೂ ಹೈನುಗಾರಿಕೆ ವಲಯದ 150ಕ್ಕೂ ಹೆಚ್ಚು ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ದೇಶದಲ್ಲಿ ಒಂಟೆ ಹಾಲಿನ ವಲಯವನ್ನು ಸದೃಢಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು.</p>.<p>2024ನೇ ವರ್ಷವನ್ನು ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಒಂಟೆಗಳ ವರ್ಷವೆಂದು ಘೋಷಿಸಿದೆ. </p>.<p>ದೇಶದಲ್ಲಿ ಹಸುವಿನ ಹಾಲು ಹೊರತಾಗಿ ಒಂಟೆ ಸೇರಿ ಇತರೆ ಪ್ರಾಣಿಗಳ ಹಾಲಿನ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ. ಈ ಹಾಲಿನಲ್ಲಿ ಅಧಿಕ ಪೌಷ್ಟಿಕಾಂಶವಿದೆ. ರೋಗಗಳನ್ನು ವಾಸಿ ಮಾಡುವ ಗುಣವಿದೆ. ಹಾಗಾಗಿ, ಈ ಹಾಲಿನ ಸುಸ್ಥಿರ ಉತ್ಪಾದನೆಗೆ ಒತ್ತು ನೀಡುವ ಮೂಲಕ ಜನರ ಜೀವನಮಟ್ಟದ ಸುಧಾರಣೆಗೆ ಕ್ರಮವಹಿಸಲು ನಿರ್ಧರಿಸಲಾಗಿದೆ ಎಂದು ಆಹಾರ ಮತ್ತು ಕೃಷಿ ಸಂಘಟನೆಯ ಪ್ರತಿನಿಧಿ ಟಕಾಯುಕಿ ಹಗಿವಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>