<p><strong>ನವದೆಹಲಿ: </strong>ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಗಳಾದ ದೀಪ್ ಸಿಧು ಮತ್ತು ಇಕ್ಬಾಲ್ ಸಿಂಗ್ ಅವರನ್ನು ಪೊಲೀಸರು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದಾರೆ.</p>.<p>ತನಿಖೆಯಭಾಗವಾಗಿ, ಹಿಂಸಾಚಾರ ನಡೆದ ದಿನ ಕೆಂಪುಕೋಟೆಗೆ ತೆರಳಲು ಆರೋಪಿಗಳು ಅನುಸರಿಸಿದ ಮಾರ್ಗದಲ್ಲೇ ಅವರನ್ನು ದೆಹಲಿ ಪೊಲೀಸರು ಕರೆದುಕೊಂಡು ಹೋಗಿದ್ದು, ಮಾಹಿತಿ ಕಲೆ ಹಾಕಿದ್ದಾರೆ.</p>.<p>ದೆಹಲಿಯ ಚಾಣಾಕ್ಯಪುರಿಯಲ್ಲಿರುವ ದೆಹಲಿ ಅಪರಾಧ ದಳದ ಕೇಂದ್ರ ಕಚೇರಿಯಿಂದ ಅವರನ್ನು ಕರೆದೊಯ್ದು ತನಿಖೆ ನಡೆಸಲಾಗುತ್ತಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುಬರಿ 10ರಂದು ಆರೋಪಿ ಇಕ್ಬಾಲ್ ಸಿಂಗ್ ಅವರನ್ನು ಪಂಜಾಬ್ನ ಹೋಶಿಯಾರ್ಪುರನಲ್ಲಿ ಬಂಧಿಸಲಾಗಿತ್ತು. ಇದಕ್ಕೂಮುನ್ನ ದೀಪ್ ಸಿಧು ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಗಳಾದ ದೀಪ್ ಸಿಧು ಮತ್ತು ಇಕ್ಬಾಲ್ ಸಿಂಗ್ ಅವರನ್ನು ಪೊಲೀಸರು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದಾರೆ.</p>.<p>ತನಿಖೆಯಭಾಗವಾಗಿ, ಹಿಂಸಾಚಾರ ನಡೆದ ದಿನ ಕೆಂಪುಕೋಟೆಗೆ ತೆರಳಲು ಆರೋಪಿಗಳು ಅನುಸರಿಸಿದ ಮಾರ್ಗದಲ್ಲೇ ಅವರನ್ನು ದೆಹಲಿ ಪೊಲೀಸರು ಕರೆದುಕೊಂಡು ಹೋಗಿದ್ದು, ಮಾಹಿತಿ ಕಲೆ ಹಾಕಿದ್ದಾರೆ.</p>.<p>ದೆಹಲಿಯ ಚಾಣಾಕ್ಯಪುರಿಯಲ್ಲಿರುವ ದೆಹಲಿ ಅಪರಾಧ ದಳದ ಕೇಂದ್ರ ಕಚೇರಿಯಿಂದ ಅವರನ್ನು ಕರೆದೊಯ್ದು ತನಿಖೆ ನಡೆಸಲಾಗುತ್ತಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುಬರಿ 10ರಂದು ಆರೋಪಿ ಇಕ್ಬಾಲ್ ಸಿಂಗ್ ಅವರನ್ನು ಪಂಜಾಬ್ನ ಹೋಶಿಯಾರ್ಪುರನಲ್ಲಿ ಬಂಧಿಸಲಾಗಿತ್ತು. ಇದಕ್ಕೂಮುನ್ನ ದೀಪ್ ಸಿಧು ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>