<p>ತಿರುವನಂತಪುರ (ಪಿಟಿಐ): ಚರ್ಚ್ ಬೆಂಬಲಿತ ಮಲಯಾಳ ದಿನಪತ್ರಿಕೆ ‘ದೀಪಿಕಾ’, ‘ರಾಜಕೀಯ ಅವಕಾಶವಾದಿಗಳನ್ನು’ ಕಟುವಾಗಿ ಟೀಕಿಸಿ ಸಂಪಾದಕೀಯ ಬರೆದಿದೆ.</p>.<p>ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ತಿದ್ದುಪಡಿಗೆ ಸಂಬಂಧಿಸಿದಂತೆ ಪರ–ವಿರೋಧ ಚರ್ಚೆ ನಡೆಯುತ್ತಿರುವಾಗಲೇ ದಿನಪತ್ರಿಕೆಯು ಈ ತೀಕ್ಷ್ಣ ಸಂಪಾದಕೀಯವನ್ನು ಪ್ರಕಟಿಸಿದೆ. ಈ ಸಂಪಾದಕೀಯಕ್ಕೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಹೇಳಿಕೆಗಳನ್ನು ಕಾಂಗ್ರೆಸ್ ಖಂಡಿಸಿದೆ.</p>.<p>‘ಅಲ್ಪಸಂಖ್ಯಾತರ ಧ್ವನಿಯನ್ನು ಅಡಗಿಸುವ ಪ್ರಯತ್ನಗಳು ಮತ್ತು ಬೆದರಿಕೆಗಳ ನಡುವೆಯೂ ನಮ್ಮ ನಿಲುವು ಬದಲಾಗದು’ ಎಂದು ದಿನಪತ್ರಿಕೆಯು ಹೇಳಿದೆ.</p>.<p>ಬಿಜೆಪಿ ನಾಯಕ ಪಿ.ಸಿ.ಜಾರ್ಜ್ ಮತ್ತು ಅವರ ಪುತ್ರ ಶೋನ್ ಜಾರ್ಜ್ ಅವರು ಕೆಲ ಬಿಷಪ್ಗಳ ವಿರುದ್ಧ ಟೀಕೆ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p>‘ಕೆಲವು ರಾಜಕೀಯ ಅವಕಾಶವಾದಿಗಳುಎಫ್ಸಿಆರ್ಎ ಬಗ್ಗೆ ಮಾತನಾಡದಂತೆ ಬೆದರಿಕೆ ಹಾಕಿದರೂ ನಮ್ಮ ನಿಲುವು ಬದಲಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ. ಆದರೆ ಯಾವುದೇ ರಾಜಕೀಯ ಪಕ್ಷದ ನಾಯಕರ ಹೆಸರನ್ನು ಅದು ಉಲ್ಲೇಖಿಸಿಲ್ಲ. ಶೋನ್ ಜಾರ್ಜ್, ‘ದಿನಪತ್ರಿಕೆಯ ನಿಲುವನ್ನು ಚರ್ಚ್ನ ನಿಲುವು ಎಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-51-764259034</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ (ಪಿಟಿಐ): ಚರ್ಚ್ ಬೆಂಬಲಿತ ಮಲಯಾಳ ದಿನಪತ್ರಿಕೆ ‘ದೀಪಿಕಾ’, ‘ರಾಜಕೀಯ ಅವಕಾಶವಾದಿಗಳನ್ನು’ ಕಟುವಾಗಿ ಟೀಕಿಸಿ ಸಂಪಾದಕೀಯ ಬರೆದಿದೆ.</p>.<p>ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಸಿಆರ್ಎ) ತಿದ್ದುಪಡಿಗೆ ಸಂಬಂಧಿಸಿದಂತೆ ಪರ–ವಿರೋಧ ಚರ್ಚೆ ನಡೆಯುತ್ತಿರುವಾಗಲೇ ದಿನಪತ್ರಿಕೆಯು ಈ ತೀಕ್ಷ್ಣ ಸಂಪಾದಕೀಯವನ್ನು ಪ್ರಕಟಿಸಿದೆ. ಈ ಸಂಪಾದಕೀಯಕ್ಕೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಹೇಳಿಕೆಗಳನ್ನು ಕಾಂಗ್ರೆಸ್ ಖಂಡಿಸಿದೆ.</p>.<p>‘ಅಲ್ಪಸಂಖ್ಯಾತರ ಧ್ವನಿಯನ್ನು ಅಡಗಿಸುವ ಪ್ರಯತ್ನಗಳು ಮತ್ತು ಬೆದರಿಕೆಗಳ ನಡುವೆಯೂ ನಮ್ಮ ನಿಲುವು ಬದಲಾಗದು’ ಎಂದು ದಿನಪತ್ರಿಕೆಯು ಹೇಳಿದೆ.</p>.<p>ಬಿಜೆಪಿ ನಾಯಕ ಪಿ.ಸಿ.ಜಾರ್ಜ್ ಮತ್ತು ಅವರ ಪುತ್ರ ಶೋನ್ ಜಾರ್ಜ್ ಅವರು ಕೆಲ ಬಿಷಪ್ಗಳ ವಿರುದ್ಧ ಟೀಕೆ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.<p>‘ಕೆಲವು ರಾಜಕೀಯ ಅವಕಾಶವಾದಿಗಳುಎಫ್ಸಿಆರ್ಎ ಬಗ್ಗೆ ಮಾತನಾಡದಂತೆ ಬೆದರಿಕೆ ಹಾಕಿದರೂ ನಮ್ಮ ನಿಲುವು ಬದಲಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ. ಆದರೆ ಯಾವುದೇ ರಾಜಕೀಯ ಪಕ್ಷದ ನಾಯಕರ ಹೆಸರನ್ನು ಅದು ಉಲ್ಲೇಖಿಸಿಲ್ಲ. ಶೋನ್ ಜಾರ್ಜ್, ‘ದಿನಪತ್ರಿಕೆಯ ನಿಲುವನ್ನು ಚರ್ಚ್ನ ನಿಲುವು ಎಂದು ಪರಿಗಣಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-51-764259034</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>